25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣ್ತಪ್ಪಿನಿಂದ ಇನ್ನೊಬ್ಬರ ಖಾತೆಗೆ ಹಣ ವರ್ಗಾವಣೆ: ಮರುಪಾವತಿಸಲು ನಿರಾಕರಣೆ ; ದೂರು ದಾಖಲು

ಬೆಳ್ತಂಗಡಿ: ಕಣ್ತಪ್ಪಿನಿಂದ ಹಣ ಬೇರೆಯವರ ಖಾತೆಗೆ ವರ್ಗಾವಣೆಯಾಗಿದ್ದು, ಮರುಪಾವತಿಸಲು ನಿರಾಕರಿಸಿದ ಪ್ರಕರಣ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿರುವ ತನ್ನ ಸಂಬಂಧಿಕರಿಗೆ ತುರ್ತು ಅಗತ್ಯದ ನೆಲೆಯಲ್ಲಿ ಪೋನ್ ಪೇ ಮೂಲಕ ಕಳುಹಿಸಲಾದ ಹಣ ಕಣ್ಣಪ್ಪಿನಿಂದಾಗಿ ಇನ್ನೊಬ್ಬರ ಖಾತೆಗೆ ಹೋದ ಪ್ರಕರಣದಲ್ಲಿ ಹಣ ಮರುಪಾವತಿಸಲು ನಿರಾಕರಿಸಿದ ಉಜಿರೆಯ ಉದ್ಯಮಿ ವಿರುದ್ಧ ಪ್ರಕರಣ ದಾಖಲಾಗಿದೆ.

ಉಪ್ಪಿನಂಗಡಿಯ ಮಠ ಎಂಬಲ್ಲಿ ಗ್ರಾನೈಟ್ ಉದ್ಯಮ ನಡೆಸಿಕೊಂಡಿರುವ ಹರಿರಾವ್ ಎಂಬವರು ನೀಡಿದ ದೂರಿನಂತೆ ತನ್ನ ರಾಜಸ್ಥಾನದಲ್ಲಿನ ಸಂಬಂಧಿಕ ಲಕ್ಷ್ಮೀಚಂದ್ ಎಂಬವರಿಗೆ ಕಳುಹಿಸಬೇಕಾದ 19,000 ರೂ. ಕಣ್ಣಪ್ಪಿನಿಂದಾಗಿ ಉಜಿರೆಯ ಉದ್ಯಮಿಯೋರ್ವರ ಖಾತೆಗೆ ವರ್ಗಾವಣೆಗೊಂಡಿದ್ದು, ಈ ಮೊತ್ತದಲ್ಲಿ 10,000 ರೂ. ವನ್ನು ಹಿಂದಿರುಗಿಸಿ ಉಳಿದ ಮೊತ್ತವನ್ನು ಹಿಂದಿರುಗಿಸದೆ ಸತಾಯಿಸುತ್ತಿದ್ದಾರೆಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಹುಣ್ಸೆಕಟ್ಟೆಯ ಪಂಜಿರ್ಪು ಬಳಿ ಚಿರತೆ ಓಡಾಟ: ಭಯಭೀತರಾದ ಜನರು

Suddi Udaya

ಗುರುವಾಯನಕೆರೆ ಶ್ರೀ ವರದ ಪಾಂಡುರಂಗ ವಿಠ್ಠಲ ಮಂದಿರಕ್ಕೆ ಲೋಕೋಪಯೋಗಿ ಸಚಿವರ ಭೇಟಿ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಂದ ಡಾ.ಹೆಗ್ಗಡೆ ಹಾಗೂ ಕನ್ಯಾಡಿ ಶ್ರೀ ಭೇಟಿ

Suddi Udaya

ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಸಂಸ್ಥೆ ನಚ್ಚಬೊಟ್ಟು ಇದರ ಸಮ್ಮೇಳನದ ಸಂದೇಶ ಜಾಥಾ

Suddi Udaya

ಧರ್ಮಸ್ಥಳದ ಯುವಕರು ನಟಿಸಿರುವ “ತೀರ್ಪು” ಚಿತ್ರದ ಮುಹೂರ್ತ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya
error: Content is protected !!