ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣ್ತಪ್ಪಿನಿಂದ ಇನ್ನೊಬ್ಬರ ಖಾತೆಗೆ ಹಣ ವರ್ಗಾವಣೆ: ಮರುಪಾವತಿಸಲು ನಿರಾಕರಣೆ ; ದೂರು ದಾಖಲು

ಬೆಳ್ತಂಗಡಿ: ಕಣ್ತಪ್ಪಿನಿಂದ ಹಣ ಬೇರೆಯವರ ಖಾತೆಗೆ ವರ್ಗಾವಣೆಯಾಗಿದ್ದು, ಮರುಪಾವತಿಸಲು ನಿರಾಕರಿಸಿದ ಪ್ರಕರಣ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿರುವ ತನ್ನ ಸಂಬಂಧಿಕರಿಗೆ ತುರ್ತು ಅಗತ್ಯದ ನೆಲೆಯಲ್ಲಿ ಪೋನ್ ಪೇ ಮೂಲಕ ಕಳುಹಿಸಲಾದ ಹಣ ಕಣ್ಣಪ್ಪಿನಿಂದಾಗಿ ಇನ್ನೊಬ್ಬರ ಖಾತೆಗೆ ಹೋದ ಪ್ರಕರಣದಲ್ಲಿ ಹಣ ಮರುಪಾವತಿಸಲು ನಿರಾಕರಿಸಿದ ಉಜಿರೆಯ ಉದ್ಯಮಿ ವಿರುದ್ಧ ಪ್ರಕರಣ ದಾಖಲಾಗಿದೆ.

ಉಪ್ಪಿನಂಗಡಿಯ ಮಠ ಎಂಬಲ್ಲಿ ಗ್ರಾನೈಟ್ ಉದ್ಯಮ ನಡೆಸಿಕೊಂಡಿರುವ ಹರಿರಾವ್ ಎಂಬವರು ನೀಡಿದ ದೂರಿನಂತೆ ತನ್ನ ರಾಜಸ್ಥಾನದಲ್ಲಿನ ಸಂಬಂಧಿಕ ಲಕ್ಷ್ಮೀಚಂದ್ ಎಂಬವರಿಗೆ ಕಳುಹಿಸಬೇಕಾದ 19,000 ರೂ. ಕಣ್ಣಪ್ಪಿನಿಂದಾಗಿ ಉಜಿರೆಯ ಉದ್ಯಮಿಯೋರ್ವರ ಖಾತೆಗೆ ವರ್ಗಾವಣೆಗೊಂಡಿದ್ದು, ಈ ಮೊತ್ತದಲ್ಲಿ 10,000 ರೂ. ವನ್ನು ಹಿಂದಿರುಗಿಸಿ ಉಳಿದ ಮೊತ್ತವನ್ನು ಹಿಂದಿರುಗಿಸದೆ ಸತಾಯಿಸುತ್ತಿದ್ದಾರೆಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕೊಯ್ಯೂರು ಗ್ರಾಮ ಸಮಿತಿ ಮಹಾಸಭೆ ಮತ್ತು ವಾರ್ಷಿಕ ಸಮಾವೇಶ

Suddi Udaya

ಕನ್ಯಾಡಿ ರಾಮ ಕ್ಷೇತ್ರದಲ್ಲಿ ನವರಾತ್ರಿಯ ವಿಶೇಷ ಪೂಜೆ

Suddi Udaya

ನ.9: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ ಪುರಪ್ರವೇಶ

Suddi Udaya

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ಗನ್ ಮ್ಯಾನ್ ನೀಡಲು ಮುಂದಾದ ಸರಕಾರ

Suddi Udaya

ಉಜಿರೆ: ಎಸ್ ಡಿ ಯಂ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ ಗುರುದೇವ ಕಾಲೇಜಿನಲ್ಲಿ ಮಾದಕ ದ್ರವ್ಯ ವಿರೋಧಿ ದಿನಾಚರಣೆ

Suddi Udaya
error: Content is protected !!