25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಜೀವ ಬೆದರಿಕೆ ಆರೋಪ : ಕೆ.ಎನ್ ಗೌಡರಿಂದ ಠಾಣೆಗೆ ದೂರು

ಬೆಳ್ತಂಗಡಿ: ನಾಳ ದೇವಾಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಬಿ. ಅವರು ಜೀವ ಬೆದರಿಕೆ ಹಾಕಿರುವುದಾಗಿ ಆರೋಪಿಸಿ, ಕಳಿಯ ಗ್ರಾಮದ `ದೇವಿ ಕೃಪಾ’ ಪೆಲತ್ತಳಿಕೆ ನಿವಾಸಿ, ಉದಯವಾಣಿ ವರದಿಗಾರ ಕೆ.ಎನ್. ಗೌಡ ಅವರು ಡಿ.10ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಡಿ.3ರಂದು ನಾಳ ದೇವಸ್ಥಾನದಲ್ಲಿ ನಡೆದ ದೇವಸ್ಥಾನದ ವಾರ್ಷಿಕ ಜಾತ್ರಾಮಹೋತ್ಸವ ಹಾಗೂ 2027ನೇ ವರ್ಷದಲ್ಲಿ ನಡೆಸಲು ಉದ್ದೇಶಿಸಿರುವ ಸಾರ್ವಜನಿಕ ಮತ್ತು ಭಕ್ತರ ಸಭೆಯಲ್ಲಿ ಊರಿನ ಭಕ್ತನಾಗಿ ಹಾಗೂ ಪತ್ರಿಕೆ ವರದಿಗಾರನಾಗಿ ಭಾಗವಹಿಸಿರುತ್ತೇನೆ. ಅದರಂತೆಯೇ ಅ ದಿನ ಸಭೆಯಲ್ಲಿ ನಡೆದಿರುವ ವಿಷಯವನ್ನು ಅಧರಿಸಿ ನೈಜ ವರದಿಯನ್ನು ಕಳುಹಿಸಿ ಕೊಟ್ಟಿದ್ದು, ಅದು ಉದಯವಾಣಿ ಕನ್ನಡ ದಿನಪತ್ರಿಕೆಯಲ್ಲಿ ಪ್ರಕಟವಾಗಿದೆ. ಪತ್ರಿಕೆಯಲ್ಲಿ ಬಂದ ಬಳಿಕ ಡಿ.9 ರಂದು ಶ್ರೀ ಕ್ಷೇತ್ರದ ವಾಟ್ಸಫ್ ಗ್ರೂಪ್‌ನಿಂದ ನನ್ನ ಮೊಬೈಲ್ ಸಂಖ್ಯೆಯನ್ನು ರಿಮೂವ್ ಮಾಡಿದ್ದನ್ನು ವಿಚಾರಿಸಿದಾಗ ಮೊಬೈಲ್ ಪೋನ್ ಮೂಲಕ ಅವಾಚ್ಯ ಶಬ್ದಗಳಲ್ಲಿ ನಿಂದನೆ ಮಾಡಿ, ವಾಯ್ಸ್ ರೆಕಾರ್ಡ್ ಕಳುಹಿಸಿ, ನನ್ನ ಪತ್ನಿ, ಮಗಳ ವಿಷಯ ಪ್ರಸ್ತಾಪಿಸಿ ಜೀವ ಬೆದರಿಕೆ ಹಾಕಿರುವುದಾಗಿ ಕೆ.ಎನ್ ಗೌಡ ದೂರಿನಲ್ಲಿ ಆರೋಪಿಸಿದ್ದಾರೆ.

Related posts

ಕೊಕ್ಕಡದ ಸರ್ಕಾರಿ ಪ್ರೌಢ ಶಾಲೆಯ ಮೂರು ವಿದ್ಯಾರ್ಥಿಗಳಿಗೆ ಜೇಸಿಐ ಭಾರತ ವಿದ್ಯಾರ್ಥಿವೇತನ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 73.64 ಮತದಾನ

Suddi Udaya

“ಸಿಂಧೂರ್” ಅರ್ಥಪೂರ್ಣವಾದ ಆಪರೇಷನ್: ಪೀತಾಂಬರ ಹೆರಾಜೆ

Suddi Udaya

ಉಜಿರೆ: ಗುರಿಪಳ್ಳಕ್ಕೆ ಸಂಪರ್ಕ ಕಲ್ಪಿಸುವ ಅಂಬಡಬೆಟ್ಟು ಸೇತುವೆ ಶಿಥಿಲ: ಘನ ವಾಹನಗಳ ಸಂಚಾರ ನಿಷೇಧ: ಬದಲಿ ರಸ್ತೆಗಳನ್ನು ಬಳಸಿಕೊಂಡು ಸಂಚರಿಸುವಂತೆ ಸೂಚನೆ

Suddi Udaya

ಕೇಳ್ತಾಜೆ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪ್ರಬಂಧ ಸ್ಪರ್ಧೆ: ಅರ್ಪಿತಾ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!