23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿವರದಿ

ಬಂದಾರು: ಕಳೆದು ಹೋಗಿದ್ದ ರೂ.2.50 ಲಕ್ಷ ಮೌಲ್ಯದ ಚಿನ್ನ ಹಾಗೂ 10 ಸಾವಿರ ನಗದನ್ನು ಹಿಂದುರುಗಿಸಿ ಕೊಟ್ಟು ಮಾನವೀಯ ಮೆರೆದ ವಿನಯ್ ನಿವೇದಿತಾ

ಉಪ್ಪಿನಂಗಡಿ: ಡಿ.10ರಂದು ಬಂದಾರು ಗ್ರಾಮದ ಅಂಡಿಲ ನಿವಾಸಿ ದೀಕ್ಷಾ ರಕ್ಷಿತ್ ರವರ ಕಳೆದು ಹೋಗಿದ್ದ ರೂ.2.50 ಲಕ್ಷ ಮೌಲ್ಯದ ಚಿನ್ನ ಹಾಗೂ 10 ಸಾವಿರ ನಗದು ಇದ್ದ ಪರ್ಸ್ ನ್ನು ಹಿಂದಿರುಗಿಸಿ ಕೊಟ್ಟ ವಿನಯ್ ನಿವೇದಿತಾ ರವರಿಗೆ ದೀಕ್ಷಾ ರಕ್ಷಿತ್ ದಂಪತಿಗಳು ಕೃತಜ್ಞತೆ ಸಲ್ಲಿಸಿ, ಸನ್ಮಾನಿಸಿದರು.

ಘಟನೆ ವಿವರ: ಬಂದಾರು ಗ್ರಾಮದ ಅಂಡಿಲ ನಿವಾಸಿ ರಕ್ಷಿತ್ ಇವರ ಪತ್ನಿ ದೀಕ್ಷಾ ರಕ್ಷಿತ್ ರವರ ರೂ 2.50 ಲಕ್ಷ ಮೌಲ್ಯದ ಚಿನ್ನ ಹಾಗೂ 10 ಸಾವಿರ ನಗದು ಇದ್ದ ಪರ್ಸ್ ಉಪ್ಪಿನಂಗಡಿ ಹೋಟೆಲ್ ನಲ್ಲಿ ಡಿ.10 ರಂದು ಸಂಜೆ ಕೈ ತಪ್ಪಿ ಕಳೆದು ಹೋಗಿದ್ದು, ಮನೆಗೆ ಹೋಗಿ ನೋಡುವಾಗ ಚಿನ್ನ, ನಗದು ಕಳೆದು ಹೋಗಿರುವ ಬಗ್ಗೆ ಅರಿವಾಗುತ್ತದೆ, ತಕ್ಷಣ ತನ್ನ ಸಂಬಂಧಿಕರಲ್ಲಿ ತಿಳಿಸಿ ಪರಿಶೀಲಿಸಿದಾಗ ಯಾರಿಗೆ ಸಿಕ್ಕಿದೆ ಎನ್ನುವುದು ತಿಳಿಯುತ್ತದೆ. ಡಿ.11ರಂದು ಬಜತ್ತೂರು ಗ್ರಾಮದ ವಲಾಲ್ ಬೆದ್ರೂಡಿ ನಿವಾಸಿ ವಿನಯ್ ನಿವೇದಿತಾ ರವರು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಭೇಟಿ ನೀಡಿ ವಾರಸುದಾರರಿಗೆ ಚಿನ್ನ, ನಗದು ಹಸ್ತಾಂತರ ಮಾಡಿದರು. ಇವರನ್ನು ದೀಕ್ಷಾ ರಕ್ಷಿತ್ ದಂಪತಿಗಳು ಕೃತಜ್ಞತೆ ಸಲ್ಲಿಸಿ, ಸನ್ಮಾನಿಸಿದರು. ಉಪ್ಪಿನಂಗಡಿ ಪೊಲೀಸ್ ಅಧಿಕಾರಿ ವರ್ಗಕ್ಕೂ ಕೃತಜ್ಞತೆ ಸಲ್ಲಿಸಿದರು.

Related posts

ಬಳಂಜ ಬೊಂಟ್ರೋಟ್ಟುಗುತ್ತು ದೈವಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ವರ್ಧಂತಿ ನೇಮೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಔಷಧ‌‌ ನಿಯಂತ್ರಣ ಇಲಾಖೆ ಮಂಗಳೂರು ಹಾಗೂ ಔಷಧ ವ್ಯಾಪಾರಸ್ಥರ ಸಂಘ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನೂತನ ಸಮಿತಿ ಪದಗ್ರಹಣ

Suddi Udaya

ನಡ: ಸಿಡಿಲು ಬಡಿದು 2 ವರ್ಷದ ಮಗು ಅಸ್ವಸ್ತ

Suddi Udaya

ವೇಣೂರು ಸೇವಾ ಶರಧಿ ವಿಶ್ವಸ್ತ ಮಂಡಳಿ ರಜತ ಸಂಭ್ರಮ, ಭಾರತೀ ಕಲಾ ಮಂಟಪದ ಉದ್ಘಾಟನೆ

Suddi Udaya

ನೆರಿಯ: ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿ ಜೋನ್ಸಾನ್ ಗೆ ನ್ಯಾಯಾಂಗ ಬಂಧನ

Suddi Udaya
error: Content is protected !!