September 6, 2026
ಗ್ರಾಮಾಂತರ ಸುದ್ದಿವರದಿ

ಬಂದಾರು: ಕಳೆದು ಹೋಗಿದ್ದ ರೂ.2.50 ಲಕ್ಷ ಮೌಲ್ಯದ ಚಿನ್ನ ಹಾಗೂ 10 ಸಾವಿರ ನಗದನ್ನು ಹಿಂದುರುಗಿಸಿ ಕೊಟ್ಟು ಮಾನವೀಯ ಮೆರೆದ ವಿನಯ್ ನಿವೇದಿತಾ

ಉಪ್ಪಿನಂಗಡಿ: ಡಿ.10ರಂದು ಬಂದಾರು ಗ್ರಾಮದ ಅಂಡಿಲ ನಿವಾಸಿ ದೀಕ್ಷಾ ರಕ್ಷಿತ್ ರವರ ಕಳೆದು ಹೋಗಿದ್ದ ರೂ.2.50 ಲಕ್ಷ ಮೌಲ್ಯದ ಚಿನ್ನ ಹಾಗೂ 10 ಸಾವಿರ ನಗದು ಇದ್ದ ಪರ್ಸ್ ನ್ನು ಹಿಂದಿರುಗಿಸಿ ಕೊಟ್ಟ ವಿನಯ್ ನಿವೇದಿತಾ ರವರಿಗೆ ದೀಕ್ಷಾ ರಕ್ಷಿತ್ ದಂಪತಿಗಳು ಕೃತಜ್ಞತೆ ಸಲ್ಲಿಸಿ, ಸನ್ಮಾನಿಸಿದರು.

ಘಟನೆ ವಿವರ: ಬಂದಾರು ಗ್ರಾಮದ ಅಂಡಿಲ ನಿವಾಸಿ ರಕ್ಷಿತ್ ಇವರ ಪತ್ನಿ ದೀಕ್ಷಾ ರಕ್ಷಿತ್ ರವರ ರೂ 2.50 ಲಕ್ಷ ಮೌಲ್ಯದ ಚಿನ್ನ ಹಾಗೂ 10 ಸಾವಿರ ನಗದು ಇದ್ದ ಪರ್ಸ್ ಉಪ್ಪಿನಂಗಡಿ ಹೋಟೆಲ್ ನಲ್ಲಿ ಡಿ.10 ರಂದು ಸಂಜೆ ಕೈ ತಪ್ಪಿ ಕಳೆದು ಹೋಗಿದ್ದು, ಮನೆಗೆ ಹೋಗಿ ನೋಡುವಾಗ ಚಿನ್ನ, ನಗದು ಕಳೆದು ಹೋಗಿರುವ ಬಗ್ಗೆ ಅರಿವಾಗುತ್ತದೆ, ತಕ್ಷಣ ತನ್ನ ಸಂಬಂಧಿಕರಲ್ಲಿ ತಿಳಿಸಿ ಪರಿಶೀಲಿಸಿದಾಗ ಯಾರಿಗೆ ಸಿಕ್ಕಿದೆ ಎನ್ನುವುದು ತಿಳಿಯುತ್ತದೆ. ಡಿ.11ರಂದು ಬಜತ್ತೂರು ಗ್ರಾಮದ ವಲಾಲ್ ಬೆದ್ರೂಡಿ ನಿವಾಸಿ ವಿನಯ್ ನಿವೇದಿತಾ ರವರು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಭೇಟಿ ನೀಡಿ ವಾರಸುದಾರರಿಗೆ ಚಿನ್ನ, ನಗದು ಹಸ್ತಾಂತರ ಮಾಡಿದರು. ಇವರನ್ನು ದೀಕ್ಷಾ ರಕ್ಷಿತ್ ದಂಪತಿಗಳು ಕೃತಜ್ಞತೆ ಸಲ್ಲಿಸಿ, ಸನ್ಮಾನಿಸಿದರು. ಉಪ್ಪಿನಂಗಡಿ ಪೊಲೀಸ್ ಅಧಿಕಾರಿ ವರ್ಗಕ್ಕೂ ಕೃತಜ್ಞತೆ ಸಲ್ಲಿಸಿದರು.

Related posts

ದಾರುನ್ನೂರ್ ಮಸೀದಿ ನಿರ್ಮಿಸಿದ ಶೈಖ್ ಅಬ್ದುಲ್ ರವರ ಪುತ್ರ ಖಾಲಿದ್ ಅಲ್ ಝುಬೈರ್ ರಿಗೆ ಸನ್ಮಾನ

Suddi Udaya

ನಿವೃತ್ತ ಉಪತಹಶೀಲ್ದಾರ್, ಪ್ರಗತಿಪರ ಕೃಷಿಕ, ನಾಳ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಗುಂಡೂರಾವ್ ವಿಧಿವಶ

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ ಉತ್ಸವದಲ್ಲಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಗೌರವಾರ್ಪಣೆ

Suddi Udaya

ಉಜಿರೆ ಶ್ರೀ. ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಪ್ರತಿಭಾ ಪುರಸ್ಕಾರ

Suddi Udaya

ಭಾರೀ ಮಳೆ: ಕಿಲ್ಲೂರು ರಸ್ತೆಗೆ ನುಗ್ಗಿದ ನೆರೆ ನೀರು

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಭಾರಿಯಾಗಿ ಯತೀಶ್ ಆರ್‍ವಾರ ನೇಮಕ

Suddi Udaya
error: Content is protected !!