37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಬೆಳಗಾವಿ ಅಧಿವೇಶನ: ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ಏಕೆ?: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಈ ಭಾರಿಯ ಬೆಳೆ ವಿಮೆಯ ವಿತರಣೆಯಲ್ಲಿ ಕರಾವಳಿ ಭಾಗದ ಅಡಿಕೆ ಹಾಗೂ ಕರಿಮೆಣಸು ಬೆಳೆಗಾರರಿಗೆ ಅತೀ ಹೆಚ್ಚು ಮಳೆಯಿಂದಾಗಿ ಕೃಷಿಗೆ ಗರಿಷ್ಠ ಮಟ್ಟದ ಹಾನಿ ಉಂಟಾಗಿದ್ದರು ಅತ್ಯಂತ ಕಡಿಮೆ ವಿಮಾ ಪರಿಹಾರ ಬಂದಿದ್ದು ಈ ನಿಟ್ಟಿನಲ್ಲಿ ಸರ್ಕಾರ ಗಮನ ಹರಿಸಿ ರೈತರಿಗೆ ಅನುಕೂಲವಾಗುವಂತೆ ಅತ್ಯಂತ ಹೆಚ್ಚಿನ ಮೊತ್ತದ ಪರಿಹಾರವನ್ನು ಒದಗಿಸುವಂತೆ ಶಾಸಕ ಹರೀಶ್ ಪೂಂಜ ಸರ್ಕಾರವನ್ನು ಸದನದಲ್ಲಿ ಒತ್ತಾಯಿಸಿದರು.

ಇಳಂತಿಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 2023ರಲ್ಲಿ 3,791 ಮಿ.ಮೀ. ಮಳೆ ಬಿದ್ದಿರುವುದಾಗಿ ಮಳೆಮಾಪಕ ಯಂತ್ರದಲ್ಲಿ ದಾಖಲಾಗಿದೆ. 58ಸಾವಿರ ರೂ. ವಿಮೆ ಸಿಕ್ಕಿತ್ತು. 2024ರಲ್ಲಿ 4,876 ಮಿ.ಮೀ. ಮಳೆಯಾಗಿತ್ತಾದರೂ ವಿಮೆ ಪರಿಹಾರ ಸಿಕ್ಕಿದ್ದು ಮಾತ್ರ 25,000 ರೂಪಾಯಿ. ಈ ತಾರತಮ್ಯ ಏಕೆ? ಇದಕ್ಕೆ ಏನು ಮಾನದಂಡ? ಹೆಚ್ಚು ಮಳೆ ಬಿದ್ದರೂ ಕಡಿಮೆ ವಿಮೆ ಪರಿಹಾರ ಏಕೆ? ಅಡಿಕೆ, ಕರಿಮೆಣಸು, ರಬ್ಬರ್‌ ಬೆಳೆಗಾರರಿಗೆ ಇದರಿಂದ ಸಾಕಷ್ಟು ನಷ್ಟ ಆಗುತ್ತಿದೆ ಎಂದು ಗಮನ ಸೆಳೆದರು.

Related posts

ಅ.24: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕಣಿಯೂರು ನಿವೃತ್ತ ಶಿಕ್ಷಕಿ ಹರ್ಷಲಾರವರಿಗೆ ಕ್ಲಸ್ಟರ್ ವತಿಯಿಂದ ಸನ್ಮಾನ

Suddi Udaya

ಮತದಾರರ ಪಟ್ಟಿ ಮ್ಯಾಪಿಂಗ್ ಮಾಡಿಸಿ-ಜಿಲ್ಲಾ ಚುನಾವಣಾಧಿಕಾರಿ

Suddi Udaya

ನೆರಿಯ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ: ಸತತ 15 ನೇ ಬಾರಿಗೆ ಪ್ರಥಮ ಸ್ಥಾನ ಪಡೆದ ಬಂದಾರು ಸ.ಉ. ಹಿ. ಪ್ರಾ. ಶಾಲಾ ವಿದ್ಯಾರ್ಥಿಗಳ ತಂಡ

Suddi Udaya

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಟೈಲರ್ ಬಿ. ಕೃಷ್ಣ ಮಡಿವಾಳ ನಿಧನ

Suddi Udaya
error: Content is protected !!