September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಬೆಳಗಾವಿ ಅಧಿವೇಶನ: ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ಏಕೆ?: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಈ ಭಾರಿಯ ಬೆಳೆ ವಿಮೆಯ ವಿತರಣೆಯಲ್ಲಿ ಕರಾವಳಿ ಭಾಗದ ಅಡಿಕೆ ಹಾಗೂ ಕರಿಮೆಣಸು ಬೆಳೆಗಾರರಿಗೆ ಅತೀ ಹೆಚ್ಚು ಮಳೆಯಿಂದಾಗಿ ಕೃಷಿಗೆ ಗರಿಷ್ಠ ಮಟ್ಟದ ಹಾನಿ ಉಂಟಾಗಿದ್ದರು ಅತ್ಯಂತ ಕಡಿಮೆ ವಿಮಾ ಪರಿಹಾರ ಬಂದಿದ್ದು ಈ ನಿಟ್ಟಿನಲ್ಲಿ ಸರ್ಕಾರ ಗಮನ ಹರಿಸಿ ರೈತರಿಗೆ ಅನುಕೂಲವಾಗುವಂತೆ ಅತ್ಯಂತ ಹೆಚ್ಚಿನ ಮೊತ್ತದ ಪರಿಹಾರವನ್ನು ಒದಗಿಸುವಂತೆ ಶಾಸಕ ಹರೀಶ್ ಪೂಂಜ ಸರ್ಕಾರವನ್ನು ಸದನದಲ್ಲಿ ಒತ್ತಾಯಿಸಿದರು.

ಇಳಂತಿಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 2023ರಲ್ಲಿ 3,791 ಮಿ.ಮೀ. ಮಳೆ ಬಿದ್ದಿರುವುದಾಗಿ ಮಳೆಮಾಪಕ ಯಂತ್ರದಲ್ಲಿ ದಾಖಲಾಗಿದೆ. 58ಸಾವಿರ ರೂ. ವಿಮೆ ಸಿಕ್ಕಿತ್ತು. 2024ರಲ್ಲಿ 4,876 ಮಿ.ಮೀ. ಮಳೆಯಾಗಿತ್ತಾದರೂ ವಿಮೆ ಪರಿಹಾರ ಸಿಕ್ಕಿದ್ದು ಮಾತ್ರ 25,000 ರೂಪಾಯಿ. ಈ ತಾರತಮ್ಯ ಏಕೆ? ಇದಕ್ಕೆ ಏನು ಮಾನದಂಡ? ಹೆಚ್ಚು ಮಳೆ ಬಿದ್ದರೂ ಕಡಿಮೆ ವಿಮೆ ಪರಿಹಾರ ಏಕೆ? ಅಡಿಕೆ, ಕರಿಮೆಣಸು, ರಬ್ಬರ್‌ ಬೆಳೆಗಾರರಿಗೆ ಇದರಿಂದ ಸಾಕಷ್ಟು ನಷ್ಟ ಆಗುತ್ತಿದೆ ಎಂದು ಗಮನ ಸೆಳೆದರು.

Related posts

ಕೋಳಿ ಅಂಕ ಅಪರಾಧವಾಗಿದ್ದು ಕಾನೂನು ಪಾಲಿಸುವಂತೆ ಪೊಲೀಸರಿಗೆ ಡೈರೆಕ್ಟರ್ ಜನರಲ್ ಆದೇಶ

Suddi Udaya

ಬೆಳ್ತಂಗಡಿ ಶ್ರೀ ನಾರಾಯಣ ಸ್ವಾಮಿ ಸೇವಾ ಸಂಘದಿಂದ ಕೆ. ವಸಂತ ಬಂಗೇರ ರವರಿಗೆ ಗೌರವಾರ್ಪಣೆ

Suddi Udaya

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ- ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದಲ್ಲಿ ‘ತ್ರಿಪದಿ ಬ್ರಹ್ಮ, ಸಂತ ಕವಿ ಸವ೯ಜ್ಞ’ ಜಯಂತಿ ಆಚರಣೆ

Suddi Udaya

ರಾಜ್ಯಮಟ್ಟದ ಕರಾಟೆ ಚಾಂಪಿಯನ್ ಶಿಪ್: ಉಜಿರೆಯ ಹಿಮಾನ್ಸ್ ಕುಮಿಟೆಯಲ್ಲಿ ದ್ವಿತೀಯ ಹಾಗೂ ಕಟಾದಲ್ಲಿ ಪ್ರಥಮ ಸ್ಥಾನ

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣ: ಚಿನ್ನಯ್ಯನಿಗೆ ಜೀವ ಬೆದರಿಕೆ ಹಿನ್ನೆಲೆ ರಕ್ಷಣೆ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ರಕ್ಷಾಬಂಧನ

Suddi Udaya
error: Content is protected !!