ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳೆ ವಿಮಾ ಪರಿಹಾರ ಯೋಜನೆಯಲ್ಲಿ ತಾರತಮ್ಯ ಕಳಿಯ ಸಹಕಾರಿ ಸಂಘದ ಅಧ್ಯಕ್ಷ ವಸಂತ ಮಜಲು ಖಂಡನೆ

ಬೆಳ್ತಂಗಡಿ: ತೋಟಗಾರಿಕೆ ಇಲಾಖೆಯಡಿ 2024-25ನೇ ಸಾಲಿನಲ್ಲಿ ಪ್ರಕೃತಿ ವಿಕೋಪದಿಂದ ಹಾನಿಯಾದ ಬೆಳೆಗಳಿಗೆ ನೀಡಲಾದ ಬೆಳೆ ವಿಮಾ ಪರಿಹಾರ ಮೊತ್ತ ದಲ್ಲಿ ಬಹಳಷ್ಟು ತಾರತಮ್ಯ ಮಾಡಲಾಗಿದ್ದು, ಇದನ್ನು ಉಗ್ರವಾಗಿ ಖಂಡಿಸುತ್ತೇವೆ ಎಂದು ಕಳಿಯ ಕೃಪಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ವಸಂತ ಮಜಲು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಬಾರಿ ಬೆಳೆವಿಮಾ ಯೋಜನೆ ಮಂಜುರಾತಿಯಲ್ಲಿ ತಾರತಮ್ಯ ಮಾಡಲಾಗಿದ್ದು, ಕೃಷಿಕ ರೈತರಿಗೆ ಅನ್ಯಾಯವಾಗಿದೆ. ಇದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ, ಕೃಷಿಕರ ಪರವಾಗಿ ಯಾವುದೇ ರೀತಿಯ ಕಾನೂನು ಹೋರಾಟಕ್ಕೂ ನಾವು ಸಿದ್ಧರಾಗಿದ್ದೇವೆ. ಕೃಷಿಯನ್ನೇ ನಂಬಿ ಬದುಕುವ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಆದರೆ ಬೆಳೆವಿಮಾ ಯೋಜನೆ ಪರಿಹಾರ ನೀಡುವಲ್ಲಿ ಅನ್ಯಾಯವಾಗಿದೆ. ಈ ರೀತಿ ಕೃಷಿಕರಿಗೆ ಅನ್ಯಾಯವಾಗುವಲ್ಲಿ ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಹಾಗೂ ವಿಮಾ ಕಂಪೆನಿಯ ಬಗ್ಗೆ ಬಹಳಷ್ಟು ಸಂಶಯ ಮೂಡುತ್ತಿದೆ ಎಂದು ತಿಳಿಸಿದ್ದಾರೆ.

Related posts

ತೆಕ್ಕಾರು ಗ್ರಾ.ಪಂ. ಅಧ್ಯಕ್ಷರಾಗಿ ರಹಿಯಾನತ್, ಉಪಾಧ್ಯಕ್ಷರಾಗಿ ಪುಷ್ಪಾ ಆಯ್ಕೆ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ಉರುವಾಲು : ಬೈತಾರು ಕಾರಿಂಜ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya

ಮೈಸೂರಿನಲ್ಲಿ ಬಾಲಕಿಯರ ವಿಭಾಗದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟ: ಜಿದ್ದಾಜಿದ್ದಿನ ಪಂದ್ಯಾವಳಿಯಲ್ಲಿ ಸತತ 9ನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಬಂದಾರು ಶಾಲೆ

Suddi Udaya

ನಾಲ್ಕೂರು: ನಿಟ್ಟಡ್ಕ ಪಲ್ಕೆಯಲ್ಲಿ ಅತ್ಯಂತ ಶ್ರದ್ಧಾ ಭಕ್ತಿಯ ರಾಶಿಪೂಜೆ

Suddi Udaya

ಆ 21: ಜೆಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ಸಿ.ಆರ್ ರಿಕೇಶ್ ಶರ್ಮಾ ಬೆಳ್ತಂಗಡಿಗೆ

Suddi Udaya
error: Content is protected !!