23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶಾಸಕ ಹರೀಶ್ ಪೂಂಜರ ಜನಸ್ಪಂದನಾ ಕಾರ್ಯಕ್ರಮದಲ್ಲಿ ಪ್ರಸ್ತಾಪವಾದ ಸಮಸ್ಯೆಗೆ ಸ್ಪಂದಿಸಿದ ಅರಣ್ಯ ಇಲಾಖೆ ಅಧಿಕಾರಿಗಳು

ಇಂದಬೆಟ್ಟು : ಇಂದಬೆಟ್ಟು ಚರ್ಚ್ ಹಾಲ್ ಸಭಾಂಗಣದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರ ಅಧ್ಯಕ್ಷತೆಯಲ್ಲಿ ಇಂದಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಸ್ಪಂದನ ಕಾರ್ಯಕ್ರಮದಲ್ಲಿ ಲಿಂಗಾಂತ್ಯಾರು, ಬೆದ್ರಪಲ್ಕೆ, ಎರ್ಮಲ ಭಾಗದ ಜನರು ತಿಳಿಸಿದ ಬೇಡಿಕೆಯಾದ ಗ್ರಾಮದ ಗಡಿ ಭಾಗದ ಕುಟುಂಬಗಳಿಗೆ ಹಕ್ಕು ಪತ್ರ ಸಿಗದ ಕಾರಣ ಶಾಸಕ ಹರೀಶ್ ಪೂಂಜಾ ರವರ ಸೂಚನೆ ಮೇರೆಗೆ ಅರಣ್ಯಾ ಇಲಾಖೆ ಅಧಿಕಾರಿಗಳಾದ ವಲಯ ಅರಣ್ಯ ಅಧಿಕಾರಿಯಾದ ತ್ಯಾಗರಾಜ್ ಟಿ.ಎನ್, ಉಪ್ಪಿನಂಗಡಿ ಉಪ ವಲಯ ಅರಣ್ಯ ಅಧಿಕಾರಿ ರಾಘವೇಂದ್ರ. ಕೆ, ಹಾಗೂ ಗಸ್ತು ಅರಣ್ಯಪಾಲಕರಾದ ಪ್ರತಾಪ್ ಸ್ಥಳಕ್ಕೆ ಡಿ.11 ರಂದು ಆಗಮಿಸಿ ವಾಸ್ತವ ಸ್ಥಿತಿಯನ್ನು ಅವಲೋಕಿಸಿದರು ಮುಂದಿನ ದಿನಗಳಲ್ಲಿ ಕಾನೂನಾತ್ಮಕವಾಗಿ ಶಾಶ್ವತ ಪರಿಹಾರ ಕಂಡುಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರಾದ ಶ್ರೀಕಾಂತ್ ಎಸ್ ಇಂದಬೆಟ್ಟು, ಗ್ರಾಮಸ್ಥರಾದ ವಿ.ಜೆ ದೇವಸಿ ಎರ್ಮಲ, ರಾಮ ಮೊಯಿಲಿ ಬಂಗಾಡಿ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Related posts

ಹತ್ಯಡ್ಕ: ನವೋದಯ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಧರ್ಮಸ್ಥಳ ಶತಾಯಿಷಿ ಮತದಾರರಿಗೆ ಚುನಾವಣಾ ಆಯೋಗದಿಂದ ಗೌರವಪೂರ್ವಕ ಸನ್ಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya

ಶಿಶಿಲ: ಶಿವಕೀರ್ತಿ ನಿಲಯದಲ್ಲಿ‌ “ಹನುಮ‌ ಜಯಂತಿ” ಆಚರಣೆ

Suddi Udaya

ಬೆಳ್ತಂಗಡಿ: ತಾಲೂಕು ಮಟ್ಟದ ಪ.ಜಾತಿ ಪ. ಪಂಗಡದ ಹಿತರಕ್ಷಣಾ ಸಮಿತಿ ಸಭೆ

Suddi Udaya

ಬೆಳಾಲು ಹಾ.ಉ.ಸ. ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ನಿರ್ದೇಶಕರಿಗೆ ಗೆಲುವು

Suddi Udaya

ಚಾರ್ಮಾಡಿ ನಿವಾಸಿ ಸತ್ಯನಾರಾಯಣ ನಾಯಕ್ ನಿಧನ

Suddi Udaya
error: Content is protected !!