ಬೆಳ್ತಂಗಡಿ: ಕಲ್ಬುರ್ಗಿಯ ಕರದಾಳು ಶ್ರೀ ನಾರಾಯಣ ಗುರು ಶಕ್ತಿ ಪೀಠದ ಬ್ರಹ್ಮಶ್ರೀ ಪ್ರಣವಾನಂದ ಸ್ವಾಮೀಜಿಯವರನ್ನು ಶಾಸಕ ಹರೀಶ್ ಪೂಂಜ ಬೆಳಗಾವಿಯಲ್ಲಿ ಡಿ.11ರಂದು ಭೇಟಿಯಾಗಿ ಆಶೀರ್ವಾದ ಪಡೆದರು.

ಸ್ವಾಮೀಜಿಯವರು ಜನವರಿ ತಿಂಗಳಿನಲ್ಲಿ ಈಡಿಗ, ಬಿಲ್ಲವ, ನಾಮಧಾರಿ, ದೀವರ, ತೀಯ ಸಮುದಾಯಗಳ ಹಲವು ಬೇಡಿಕೆಗಳ ಈಡೇರಿಕೆಗಾಗಿ 41 ದಿನಗಳ ಕಾಲ 700 ಕಿಲೋಮೀಟರ್ ಐತಿಹಾಸಿಕ ಪಾದಯಾತ್ರೆಯನ್ನು ಕೈಗೊಳ್ಳಲಿರುವ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಕಣಿಯೂರು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಹೇಶ್ ಕೋಟ್ಯಾನ್ ಜೇoಕ್ಯಾರ್ ಉಪಸ್ಥಿತರಿದ್ದರು.












