May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಲ್.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆ ಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಶನ್‌ ಟ್ರಸ್ಟ್( ರಿ) ನಡೆಸುತ್ತಿರುವ ಎಲ್.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆ ಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಸಮರ್ಥ ಸಂಪತ್ತು ನಿರ್ಮಾಣದ ಮಾರ್ಗಗಳು – ಮ್ಯೂಚುವಲ್ ಫಂಡ್ಸ್ ಮತ್ತು ಹೂಡಿಕೆದಾರ ಜಾಗೃತಿ”ಎಂಬ ವಿಷಯದ ಮೇಲೆ ಮಾಹಿತಿ ಕಾರ್ಯಾಗಾರವನ್ನು ಡಿ.11 ರಂದು ಆಯೋಜಿಸಲಾಯಿತು. ಕಾರ್ಯಕ್ರಮದ ಉದ್ದೇಶ ವಿದ್ಯಾರ್ಥಿಗಳಿಗೆ ಹೂಡಿಕೆ, ಮ್ಯೂಚುವಲ್ ಫಂಡ್ಸ್, ಮತ್ತು ಸಮರ್ಪಕ ಹಣಕಾಸು ಯೋಜನೆಗಳ ಮಹತ್ವವನ್ನು ತಿಳಿಸುವುದಾಗಿತ್ತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅರ್ಜುನ ಮಹೇಶ್ ಅವರು ಹಾಜರಿದ್ದರು. ಅವರು ಪ್ರಸ್ತುತ ಫೈನಾನ್ಸ್ ಕ್ಷೇತ್ರದಲ್ಲಿ ತಜ್ಞರಾಗಿ, ಶಿಕ್ಷಕರಾಗಿಯು ಸೇವೆ ಸಲ್ಲಿಸುತ್ತಿದ್ದು, ಮ್ಯೂಚುವಲ್ ಫಂಡ್ಸ್, ಹೂಡಿಕೆ ತಂತ್ರಗಳು, ಮತ್ತು ಹಣಕಾಸು ನಿರ್ವಹಣೆಯ ಆಯಾಮಗಳನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು. ಯುವ ಪೀಳಿಗೆ ಹಣಕಾಸು ಜಾಗೃತಿಯನ್ನು ಬೆಳೆಸಿಕೊಳ್ಳುವುದು ಅತ್ಯಂತ ಅಗತ್ಯವೆಂದು ಅವರು ತಮ್ಮ ಉಪನ್ಯಾಸದಲ್ಲಿ ಹೇಳಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೋ, ಸಂಯೋಜಕರಾದ ಯಶವಂತ್. ಜಿ. ನಾಯಕ್, ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.
ಫಾತಿಮಾ ತೃತೀಯ ಬಿ. ಕಾಮ್ ಸ್ವಾಗತಿಸಿ, ಸುಪ್ರಿಯಾ ತೃತೀಯ ಬಿ.ಕಾಮ್ ವಂದಿಸಿದರು.

Related posts

ಪಡಂಗಡಿಯಲ್ಲಿ ಶ್ರೀ ಕಟಿಲೇಶ್ವರಿ ಟ್ರೇಡರ್ಸ್ ಶುಭಾರಂಭ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಮಚ್ಚಿನ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಾಲಾ ಸಂಸತ್ತಿನ ಪ್ರಮಾಣ ವಚನ

Suddi Udaya

ಕನ್ಯಾಡಿII ಸ.ಉ.ಹಿ.ಪ್ರಾ. ಶಾಲೆಗೆ ಪೆಟ್ರೋನೆಟ್ ಎಂ.ಹೆಚ್.ಬಿ ಲಿಮಿಟೆಡ್ ಕಂಪನಿಯಿಂದ ಕಂಪ್ಯೂಟರ್ ಮತ್ತು ಕಂಪ್ಯೂಟರ್ ಟೇಬಲ್ ಕೊಡುಗೆ

Suddi Udaya

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ: ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ 25 ವಿದ್ಯಾರ್ಥಿಗಳು ಉತ್ತೀರ್ಣ

Suddi Udaya

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂತೋಷ್ ಮಚ್ಚಗುರಿ

Suddi Udaya
error: Content is protected !!