May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಂ ಸೆಕೆಂಡರಿ ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ ವಾರ್ಷಿಕ ಪ್ರತಿಭಾ ದಿನಾಚರಣೆಯು ಎಸ್.ಡಿ.ಎಂ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆಯಿತು.

ಸಮಾರಂಭವನ್ನು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಪಠ್ಯದ ಜೊತೆಗೆ ಪಠ್ಯೇತರವಾಗಿ ಸಾಧಿಸಿದ ಮತ್ತು ಭಾಗವಹಿಸಿದ ಎಲ್ಲಾ ನೆನಪುಗಳು ಅವಿಸ್ಮರಣೀಯ. ರತ್ನ ಮಾನಸ ವಿದ್ಯಾರ್ಥಿ ನಿಲಯದಲ್ಲಿರುವ ವಿದ್ಯಾರ್ಥಿಗಳು ವಿಶೇಷವಾಗಿ ಜೀವನ ಶಿಕ್ಷಣವನ್ನು ಕಲಿಯುತ್ತಾರೆ. ಇವೆಲ್ಲ ನಮಗೆ ಹೊಸ ಪಾಠ ಮತ್ತು ಬದುಕಿನ ದಾರಿಯನ್ನು ರೂಪಿಸುತ್ತದೆ. ಎಸ್.ಡಿ.ಎಂ ಸಂಸ್ಥೆ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಕಲ್ಪಿಸಿಕೊಟ್ಟಿರುವ ಎಲ್ಲಾ ವ್ಯವಸ್ಥೆಗಳನ್ನು ಸದುಪಯೋಗ ಪಡಿಸಿಕೊಂಡು ವಿದ್ಯಾರ್ಥಿ ಜೀವನವು ಹಸಿರಾಗಲಿ ಎಂದು ಶುಭ ಹಾರೈಸಿದರು.

ಸಮಾರಂಭದ ವೇದಿಕೆಯಲ್ಲಿ ಉಪಸ್ಥಿತರಿದ್ದ ಬೆಳ್ತಂಗಡಿಯ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಕೇಸರಿ ಮಾತನಾಡಿ, ಎಐ ಮತ್ತು ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಬಹುಮುಖ ಪ್ರತಿಭಾವಂತ ರಾಗಬೇಕು. ಇದು ನಿಮ್ಮ ವ್ಯಕ್ತಿತ್ವವನ್ನು ರೂಪಿಸುತ್ತದೆ. ಈಗಾಗಲೇ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯು ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶವನ್ನು ಕಾಯ್ದುಕೊಂಡಿದೆ. ಮುಂಬರುವ ವಾರ್ಷಿಕ ಪರೀಕ್ಷೆ ಮತ್ತು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ನುಡಿದರು.

ಸಮಾರಂಭದಲ್ಲಿ ಬಹುಮಾನ ವಿಜೇತ ವಿದ್ಯಾರ್ಥಿಗಳಿಗೆ ಅತಿಥಿಗಳು ಪ್ರಶಸ್ತಿ ಪ್ರಧಾನ ಮಾಡಿದರು. ಬಳಿಕ ಶಾಲೆಯ ವಿದ್ಯಾರ್ಥಿ ತಂಡ ತಯಾರಿಸಿದ ಕಥೆ,ಕವನ, ಚಿತ್ರ ಕಥೆ, ಲೇಖನಗಳಿಂದ ವಿಶೇಷವಾಗಿ ತಯಾರಿಸಿದ ಬೆಳಗು ಬಿತ್ತಿ ಪತ್ರಿಕೆಯನ್ನು ಡಾ. ಸತೀಶ್ಚಂದ್ರ ಎಸ್. ಬಿಡುಗಡೆ ಗೊಳಿಸಿದರು. ಸಭಾ ಕಾರ್ಯಕ್ರಮದ ನಂತರ ಶಾಲಾ ವಿದ್ಯಾರ್ಥಿಗಳಿಂದ ಕುಣಿತ ಭಜನೆ, ಯಕ್ಷಗಾನ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

ಕಾರ್ಯಕ್ರಮದ ಆರಂಭದಲ್ಲಿ ತುಳುನಾಡ ವಿಶೇಷ ಆಚರಣೆ ಮತ್ತು ಅಭಿವೃದ್ಧಿಯ ಸಂಕೇತವಾಗಿ ಅತಿಥಿಗಳು ಭತ್ತವನ್ನು ಕಳಶಕ್ಕೆ ಸುರಿದು ಹಿಂಗಾರದ ಸಿರಿಯನ್ನು ಅರಳಿಸಿದ್ದು ಎಲ್ಲರ ಕಣ್ಮನ ಸೆಳೆಯಿತು.ಶಾಲೆಯ ಮುಖ್ಯೋಪಾಧ್ಯಾಯಿನಿ ವಿದ್ಯಾಕಿರಣ ಎಲ್ಲರನ್ನು ಸ್ವಾಗತಿಸಿ, ಶಾಲೆಯ ಶೈಕ್ಷಣಿಕ ವರದಿಯನ್ನು ಮಂಡಿಸಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಂಯೋಜಕ ಎನ್ ಕಾಕತ್ಕಾರ್, ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಧನ್ಯ ಕುಮಾರ್, ರತ್ನ ಮಾನಸ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕ ಯತೀಶ್, ಶಾಲೆಯ ಮುಖ್ಯೋಪಾಧ್ಯಾಯಿನಿ ವಿದ್ಯಾಕಿರಣ, ಶಾಲಾ ವಿದ್ಯಾರ್ಥಿ ನಾಯಕ ಪ್ರೇಮ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಶಾಲೆಯ ಶಿಕ್ಷಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಸೇರಿದಂತೆ ಪೋಷಕರು ಭಾಗಿಯಾಗಿದ್ದರು. ಶಾಲಾ ವಿದ್ಯಾರ್ಥಿಗಳ ತಂಡ ಪ್ರಾರ್ಥನೆ ಹಾಡಿದರು. ಕಾರ್ಯಕ್ರಮವನ್ನು ಶಿಕ್ಷಕರಾದ ರಾಧಾಕೃಷ್ಣ ಜ್ಞಾನೇಶ್ ವಿದ್ಯಾರ್ಥಿಗಳಾದ ನಿಶ್ಚಿತ್ , ಶಹಿಮಾ ಬಾನು ಹಾಗೂ ಮಾನ್ಯ ನಿರೂಪಿಸಿದರು. ಅಧ್ಯಾಪಕ ರವೀಶ್ ಕುಮಾರ್ ವಂದಿಸಿದರು.

Related posts

ಬೆಳ್ತಂಗಡಿ : ಇನ್ಸ್ಪೆಕ್ಟರ್ ಗಂಗ್ಗಿರೆಡ್ಡಿಯನ್ನು ಸುಳ್ಳು ಪ್ರಕರಣದಲ್ಲಿ ಟ್ರ್ಯಾಪ್ ಮಾಡಿಸಿದ್ದ ದೂರುದಾರ ಹಾಗೂ ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಧರ್ಮಾಸ್ಟಳ ನಿತ್ಯಾನಂದ ನಗರ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಕ್ಕೆ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಭೇಟಿ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಗೆ ಸಮಗ್ರ ಪ್ರಶಸ್ತಿ

Suddi Udaya

ಬಂದಾರು ಸ.ಹಿ. ಪ್ರಾ. ಶಾಲೆಯಲ್ಲಿ ಬೂತ್ ಸಂಖ್ಯೆ 217ರಲ್ಲಿ ತ್ರಾಂತಿಕ ದೋಷದಿಂದ ಮತದಾನ ಸ್ಥಗಿತ

Suddi Udaya

ಗೇರುಕಟ್ಟೆ : ಕಳಿಯ, ನ್ಯಾಯತರ್ಪು ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ

Suddi Udaya

ಕಜಕೆ ಸ. ಹಿ ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

Suddi Udaya
error: Content is protected !!