May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇ.ಧ.ಗ್ರಾ.ಯೋ. ಬಿ.ಸಿ ಟ್ರಸ್ಟ್ ಸಿಡ್ಬಿ ಪ್ರಯಾಸ ಸ್ವ ಉದ್ಯೋಗ ಕ್ಕೆ 1ಕೋಟಿ ಪ್ರಗತಿ ನಿಧಿ ಮಜೂರಾತಿ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ )ಗುರುವಾಯನಕೆರೆ/ ಬೆಳ್ತಂಗಡಿ ಸಿಡ್ಬಿ ಪ್ರಯಾಸ ಸ್ವ ಉದ್ಯೋಗ ಕ್ಕೆ 1ಕೋಟಿ ಪ್ರಗತಿ ನಿಧಿ ಮಜೂರಾತಿ ವಿತರಣೆ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕರು ದಿನೇಶ ಡಿ ಪ್ರಸ್ತಾವಿಕ ಮಾತನಾಡಿ ಪೂಜ್ಯರ ಮಾರ್ಗದರ್ಶನದಂತೆ ಸಿಡ್ಬಿ ಪ್ರಯಾಸ ಯೋಜನೆಯು ಸ್ವಸಹಾಯ ಸಂಘಗಳ ಸದಸ್ಯರಿಗೆ ಸ್ವ ಉದ್ಯೋಗ ಕಲ್ಪಿಸಲು ಹಾಗೂ ಸ್ವಾವಲಂಬಿಗಳಾಗಲು ಬೇಕಾದ ಅಗತ್ಯ ಸಹಕಾರವನ್ನು ನೀಡುವ ಯೋಜನೆಯಾಗಿದೆ ಯೋಜನೆಯ ಮೂಲ ಸ್ವಾವಲಂಬಿ ಬದುಕನ್ನು ಯುವ ಜನತೆ ಕಟ್ಟಿಕೊಳ್ಳಬೇಕು ಎಂಬ ಉನ್ನತ ಚಿಂತನೆಯಾಗಿದೆ ದಿನನಿತ್ಯ ಆದಾಯ ಬರುವ ವ್ಯವಹಾರಕ್ಕೆ ಪೂರಕವಾಗಿ ಕಿರಾಣಿ ಅಂಗಡಿ, ಹೋಟೆಲ್, ಹೂವಿನ ಅಂಗಡಿ, ಬೇಕರಿ ಮತ್ತು ಚಾಟ್ಸ್ ಅಂಗಡಿ, ಕೃಷಿ ಉತ್ಪನ್ನಗಳಿಗೆ ಇತರೆ ಉದ್ದೇಶ ಗಳಿಗೆ 50,000 ರಿಂದ 5 ಲಕ್ಷದವರೆಗೆ ಸಿಡ್ಬಿ ಪ್ರಗತಿ ನಿಧಿಯನ್ನು ದಾಖಲೆ ಅನುಗುಣವಾಗಿ ವಿತರಿಸಲಾಗುವುದು, ತಾಲೂಕಿನ ಪ್ರಗತಿ ಬಂಧು ಸ್ವ ಸಹಾಯ ತಂಡದ ಸ್ವ ಉದ್ಯೋಗ ಮಾಡುವ ಸದಸ್ಯರು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ಪ್ರಾಸವಿಕವಾಗಿ ಮಾತನಾಡಿದರು.

ರೂಟ್ ಸೆಟ್ ಸಂಸ್ಥೆಯ ಕರುಣಾಕರವರು ಮಾತನಾಡಿ ಸ್ವ ಉದ್ಯೋಗ ಆಯ್ಕೆ ಮಾಡುವಾಗ ಗಮನಿಸಬೇಕಾದ ಅವಶ್ಯಕತೆ ಬಗ್ಗೆ ಲಾಭ ನಷ್ಟದ ಬಗ್ಗೆ ಗ್ರಾಹಕರಲ್ಲಿ ವ್ಯವಹಾರದ ರೀತಿ ಬಗ್ಗೆ ತರಬೇತಿಯನ್ನು ಪಡೆದು ಸ್ವ ಉದ್ಯೋಗ ಮಾಡುವುದು ಸೂಕ್ತ ನಮ್ಮ ಸಂಸ್ಥೆಯಲ್ಲಿ ಎಲ್ಲಾ ಸ್ವ ಉದ್ಯೋಗದ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಸಿಡ್ಬಿ ಯೋಜನಾಧಿಕಾರಿಗಳು ಶ್ರೀಮತಿ ಅನುಷಾ ಸಿಡ್ಬಿ ಯೋಜನೆಗೆ ನೀಡಬೇಕಾದ ದಾಖಲಾತಿ ಯ ಬಗ್ಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಗುರುವಾಯನಕೆರೆ ಯೋಜನಾಧಿಕಾರಿಗಳು ಅಶೋಕ ಬಿ, ಕೃಷಿ ಮೇಲ್ವಿಚಾರಕರು ಕೃಷ್ಣ ಮೇಲ್ವಿಚಾರಕರು ಯಶೋದ, ಕಛೇರಿ ಪ್ರಬಂಧಕರು ಆಕಾಶ್, ಹಾಗೂ ಸ್ವ ಉದ್ಯೋಗ ಮಾಡುವ ಸದಸ್ಯರು ಉಪಸಿತರಿದ್ದರು.

Related posts

ಕಳೆoಜ: ನಾಟಿ ವೈದ್ಯೆ ಕಮಲ ನಿಧನ

Suddi Udaya

ಮೇಲಂತಬೆಟ್ಟು ಕಲ್ಲಿನ‌ ಕೋರೆ ಪ್ರಕರಣಕ್ಕೂ ನನಗೂ ಯಾವುದೇ ರೀತಿಯ ಸಂಬಂಧವಿಲ್ಲ; ಜು.8 ಮಾರಿಗುಡಿ ಕ್ಷೇತ್ರದಲ್ಲಿ ಪ್ರಮಾಣ; ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಹೇಳಿಕೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಣ್ಣಿನ ತಪಾಸಣಾ ಶಿಬಿರ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಟ ದೇವರಾಜ್ ಕುಟುಂಬ ಸಮೇತ ಭೇಟಿ

Suddi Udaya

ಲಾಯಿಲ: ಸ.ಹಿ.ಪ್ರಾ. ಶಾಲಾ ಮುಖ್ಯ ಶಿಕ್ಷಕಿ ರಾಜೇಶ್ವರಿ ಬಿ.ಎಸ್. ಸೇವಾ ನಿವೃತ್ತಿ

Suddi Udaya

ಜಾತಕ ತೋರಿಸಲು ಬಂದ ಯುವತಿಯ ಹಿಂದೆ ಬಿದ್ದ ಜ್ಯೋತಿಷಿ: ವಿವಾಹಯಾಗುವಂತೆ ಒತ್ತಾಯಿಸಿ ಮಾಟಮಂತ್ರ ಮಾಡಿದ ಜ್ಯೋತಿಷಿಯನ್ನು ಬಂಧಿಸಿದ ಪೊಲೀಸರು

Suddi Udaya
error: Content is protected !!