24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇ.ಧ.ಗ್ರಾ.ಯೋ. ಬಿ.ಸಿ ಟ್ರಸ್ಟ್ ಸಿಡ್ಬಿ ಪ್ರಯಾಸ ಸ್ವ ಉದ್ಯೋಗ ಕ್ಕೆ 1ಕೋಟಿ ಪ್ರಗತಿ ನಿಧಿ ಮಜೂರಾತಿ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ )ಗುರುವಾಯನಕೆರೆ/ ಬೆಳ್ತಂಗಡಿ ಸಿಡ್ಬಿ ಪ್ರಯಾಸ ಸ್ವ ಉದ್ಯೋಗ ಕ್ಕೆ 1ಕೋಟಿ ಪ್ರಗತಿ ನಿಧಿ ಮಜೂರಾತಿ ವಿತರಣೆ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕರು ದಿನೇಶ ಡಿ ಪ್ರಸ್ತಾವಿಕ ಮಾತನಾಡಿ ಪೂಜ್ಯರ ಮಾರ್ಗದರ್ಶನದಂತೆ ಸಿಡ್ಬಿ ಪ್ರಯಾಸ ಯೋಜನೆಯು ಸ್ವಸಹಾಯ ಸಂಘಗಳ ಸದಸ್ಯರಿಗೆ ಸ್ವ ಉದ್ಯೋಗ ಕಲ್ಪಿಸಲು ಹಾಗೂ ಸ್ವಾವಲಂಬಿಗಳಾಗಲು ಬೇಕಾದ ಅಗತ್ಯ ಸಹಕಾರವನ್ನು ನೀಡುವ ಯೋಜನೆಯಾಗಿದೆ ಯೋಜನೆಯ ಮೂಲ ಸ್ವಾವಲಂಬಿ ಬದುಕನ್ನು ಯುವ ಜನತೆ ಕಟ್ಟಿಕೊಳ್ಳಬೇಕು ಎಂಬ ಉನ್ನತ ಚಿಂತನೆಯಾಗಿದೆ ದಿನನಿತ್ಯ ಆದಾಯ ಬರುವ ವ್ಯವಹಾರಕ್ಕೆ ಪೂರಕವಾಗಿ ಕಿರಾಣಿ ಅಂಗಡಿ, ಹೋಟೆಲ್, ಹೂವಿನ ಅಂಗಡಿ, ಬೇಕರಿ ಮತ್ತು ಚಾಟ್ಸ್ ಅಂಗಡಿ, ಕೃಷಿ ಉತ್ಪನ್ನಗಳಿಗೆ ಇತರೆ ಉದ್ದೇಶ ಗಳಿಗೆ 50,000 ರಿಂದ 5 ಲಕ್ಷದವರೆಗೆ ಸಿಡ್ಬಿ ಪ್ರಗತಿ ನಿಧಿಯನ್ನು ದಾಖಲೆ ಅನುಗುಣವಾಗಿ ವಿತರಿಸಲಾಗುವುದು, ತಾಲೂಕಿನ ಪ್ರಗತಿ ಬಂಧು ಸ್ವ ಸಹಾಯ ತಂಡದ ಸ್ವ ಉದ್ಯೋಗ ಮಾಡುವ ಸದಸ್ಯರು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ಪ್ರಾಸವಿಕವಾಗಿ ಮಾತನಾಡಿದರು.

ರೂಟ್ ಸೆಟ್ ಸಂಸ್ಥೆಯ ಕರುಣಾಕರವರು ಮಾತನಾಡಿ ಸ್ವ ಉದ್ಯೋಗ ಆಯ್ಕೆ ಮಾಡುವಾಗ ಗಮನಿಸಬೇಕಾದ ಅವಶ್ಯಕತೆ ಬಗ್ಗೆ ಲಾಭ ನಷ್ಟದ ಬಗ್ಗೆ ಗ್ರಾಹಕರಲ್ಲಿ ವ್ಯವಹಾರದ ರೀತಿ ಬಗ್ಗೆ ತರಬೇತಿಯನ್ನು ಪಡೆದು ಸ್ವ ಉದ್ಯೋಗ ಮಾಡುವುದು ಸೂಕ್ತ ನಮ್ಮ ಸಂಸ್ಥೆಯಲ್ಲಿ ಎಲ್ಲಾ ಸ್ವ ಉದ್ಯೋಗದ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಸಿಡ್ಬಿ ಯೋಜನಾಧಿಕಾರಿಗಳು ಶ್ರೀಮತಿ ಅನುಷಾ ಸಿಡ್ಬಿ ಯೋಜನೆಗೆ ನೀಡಬೇಕಾದ ದಾಖಲಾತಿ ಯ ಬಗ್ಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಗುರುವಾಯನಕೆರೆ ಯೋಜನಾಧಿಕಾರಿಗಳು ಅಶೋಕ ಬಿ, ಕೃಷಿ ಮೇಲ್ವಿಚಾರಕರು ಕೃಷ್ಣ ಮೇಲ್ವಿಚಾರಕರು ಯಶೋದ, ಕಛೇರಿ ಪ್ರಬಂಧಕರು ಆಕಾಶ್, ಹಾಗೂ ಸ್ವ ಉದ್ಯೋಗ ಮಾಡುವ ಸದಸ್ಯರು ಉಪಸಿತರಿದ್ದರು.

Related posts

ನಾವೂರು :ಕಿರ್ನಡ್ಕ ನಿವಾಸಿ ಪ್ರದೀಪ್ ಹೃದಯಾಘಾತದಿಂದ ನಿಧನ

Suddi Udaya

ಮಧ್ಯಪ್ರದೇಶದಲ್ಲಿ ನಡೆದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ: ಎಸ್. ಡಿ. ಎಂ ಆಂ.ಮಾ. ಶಾಲೆ ರಾಜ್ಯ ಪಠ್ಯಕ್ರಮದ, ವಿದ್ಯಾರ್ಥಿಗಳಾದ ಅಧಿಶ್ ಬಿ. ಸಿ ಮತ್ತು ಸಚಿತ್ ಭಟ್ ಅತ್ಯುತ್ತಮ ಸಂಶೋಧನೆ ಯ ಹೆಗ್ಗಳಿಕೆ

Suddi Udaya

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಅಡಿಕೆ ಕೃಷಿಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವಂತೆ ಕೇಂದ್ರ ಕೃಷಿ ಸಚಿವರಿಗೆ ಸಂಸದ ಚೌಟ ಮನವಿ

Suddi Udaya

ಮಾ.9: ಲಾಯಿಲ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಅಷ್ಠಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya

ಹರೀಶ್ ಪೂಂಜ ಗೆಲುವು: ಬಂದಾರು ಗ್ರಾಮದ ಬೈಪಾಡಿ,ಮೈರೋಳ್ತಡ್ಕ, ಪಾಣೆಕಲ್ಲು ವಾರ್ಡ್ ಗಳಲ್ಲಿ ಸಂಭ್ರಮಾಚರಣೆ

Suddi Udaya
error: Content is protected !!