26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಲ್.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆ ಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಶನ್‌ ಟ್ರಸ್ಟ್( ರಿ) ನಡೆಸುತ್ತಿರುವ ಎಲ್.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆ ಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಸಮರ್ಥ ಸಂಪತ್ತು ನಿರ್ಮಾಣದ ಮಾರ್ಗಗಳು – ಮ್ಯೂಚುವಲ್ ಫಂಡ್ಸ್ ಮತ್ತು ಹೂಡಿಕೆದಾರ ಜಾಗೃತಿ”ಎಂಬ ವಿಷಯದ ಮೇಲೆ ಮಾಹಿತಿ ಕಾರ್ಯಾಗಾರವನ್ನು ಡಿ.11 ರಂದು ಆಯೋಜಿಸಲಾಯಿತು. ಕಾರ್ಯಕ್ರಮದ ಉದ್ದೇಶ ವಿದ್ಯಾರ್ಥಿಗಳಿಗೆ ಹೂಡಿಕೆ, ಮ್ಯೂಚುವಲ್ ಫಂಡ್ಸ್, ಮತ್ತು ಸಮರ್ಪಕ ಹಣಕಾಸು ಯೋಜನೆಗಳ ಮಹತ್ವವನ್ನು ತಿಳಿಸುವುದಾಗಿತ್ತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅರ್ಜುನ ಮಹೇಶ್ ಅವರು ಹಾಜರಿದ್ದರು. ಅವರು ಪ್ರಸ್ತುತ ಫೈನಾನ್ಸ್ ಕ್ಷೇತ್ರದಲ್ಲಿ ತಜ್ಞರಾಗಿ, ಶಿಕ್ಷಕರಾಗಿಯು ಸೇವೆ ಸಲ್ಲಿಸುತ್ತಿದ್ದು, ಮ್ಯೂಚುವಲ್ ಫಂಡ್ಸ್, ಹೂಡಿಕೆ ತಂತ್ರಗಳು, ಮತ್ತು ಹಣಕಾಸು ನಿರ್ವಹಣೆಯ ಆಯಾಮಗಳನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು. ಯುವ ಪೀಳಿಗೆ ಹಣಕಾಸು ಜಾಗೃತಿಯನ್ನು ಬೆಳೆಸಿಕೊಳ್ಳುವುದು ಅತ್ಯಂತ ಅಗತ್ಯವೆಂದು ಅವರು ತಮ್ಮ ಉಪನ್ಯಾಸದಲ್ಲಿ ಹೇಳಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೋ, ಸಂಯೋಜಕರಾದ ಯಶವಂತ್. ಜಿ. ನಾಯಕ್, ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.
ಫಾತಿಮಾ ತೃತೀಯ ಬಿ. ಕಾಮ್ ಸ್ವಾಗತಿಸಿ, ಸುಪ್ರಿಯಾ ತೃತೀಯ ಬಿ.ಕಾಮ್ ವಂದಿಸಿದರು.

Related posts

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣ ಸಮಾವೇಶ

Suddi Udaya

ಪೆರಾಡಿ : ಪಾಡಿ ನಿವಾಸಿ ವಸಂತ್ ಪೂಜಾರಿ ನಿಧನ

Suddi Udaya

ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಇದರ ವಿಸ್ತ್ರತ ಘಟಕ “ಅಗ್ರಿಲೀಫ್ 2.0” ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯ ಹಾಗೂ ಉನ್ನತೀಕರಣ ಕಾಮಗಾರಿಗಳ ಶಿಲಾನ್ಯಾಸ: ಬಿ.ಪಿ.ಹೆಚ್ ಲ್ಯಾಬ್ ಮತ್ತು 12 ಬೆಡ್ ಗಳ ಐಸೋಲೇಶನ್ ವಾರ್ಡ್ ಕಟ್ಟಡ ಉದ್ಘಾಟನೆ

Suddi Udaya

ಹಿರಿಯ ಸಾಹಿತಿ, ಖ್ಯಾತ ಕಾದಂಬರಿಕಾರ, ಕೆ.ಟಿ.ಗಟ್ಟಿ ನಿಧನಕ್ಕೆ ಪ್ರತಾಪ್ ಸಿಂಹ ನಾಯಕ್ ಸಂತಾಪ

Suddi Udaya

ಡಾ. ಎನ್. ವಿನಯ ಹೆಗ್ಡೆ ನಿಧನಕ್ಕೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!