May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಲ್.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆ ಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಶನ್‌ ಟ್ರಸ್ಟ್( ರಿ) ನಡೆಸುತ್ತಿರುವ ಎಲ್.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆ ಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಸಮರ್ಥ ಸಂಪತ್ತು ನಿರ್ಮಾಣದ ಮಾರ್ಗಗಳು – ಮ್ಯೂಚುವಲ್ ಫಂಡ್ಸ್ ಮತ್ತು ಹೂಡಿಕೆದಾರ ಜಾಗೃತಿ”ಎಂಬ ವಿಷಯದ ಮೇಲೆ ಮಾಹಿತಿ ಕಾರ್ಯಾಗಾರವನ್ನು ಡಿ.11 ರಂದು ಆಯೋಜಿಸಲಾಯಿತು. ಕಾರ್ಯಕ್ರಮದ ಉದ್ದೇಶ ವಿದ್ಯಾರ್ಥಿಗಳಿಗೆ ಹೂಡಿಕೆ, ಮ್ಯೂಚುವಲ್ ಫಂಡ್ಸ್, ಮತ್ತು ಸಮರ್ಪಕ ಹಣಕಾಸು ಯೋಜನೆಗಳ ಮಹತ್ವವನ್ನು ತಿಳಿಸುವುದಾಗಿತ್ತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅರ್ಜುನ ಮಹೇಶ್ ಅವರು ಹಾಜರಿದ್ದರು. ಅವರು ಪ್ರಸ್ತುತ ಫೈನಾನ್ಸ್ ಕ್ಷೇತ್ರದಲ್ಲಿ ತಜ್ಞರಾಗಿ, ಶಿಕ್ಷಕರಾಗಿಯು ಸೇವೆ ಸಲ್ಲಿಸುತ್ತಿದ್ದು, ಮ್ಯೂಚುವಲ್ ಫಂಡ್ಸ್, ಹೂಡಿಕೆ ತಂತ್ರಗಳು, ಮತ್ತು ಹಣಕಾಸು ನಿರ್ವಹಣೆಯ ಆಯಾಮಗಳನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು. ಯುವ ಪೀಳಿಗೆ ಹಣಕಾಸು ಜಾಗೃತಿಯನ್ನು ಬೆಳೆಸಿಕೊಳ್ಳುವುದು ಅತ್ಯಂತ ಅಗತ್ಯವೆಂದು ಅವರು ತಮ್ಮ ಉಪನ್ಯಾಸದಲ್ಲಿ ಹೇಳಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೋ, ಸಂಯೋಜಕರಾದ ಯಶವಂತ್. ಜಿ. ನಾಯಕ್, ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.
ಫಾತಿಮಾ ತೃತೀಯ ಬಿ. ಕಾಮ್ ಸ್ವಾಗತಿಸಿ, ಸುಪ್ರಿಯಾ ತೃತೀಯ ಬಿ.ಕಾಮ್ ವಂದಿಸಿದರು.

Related posts

ಪಡಂಗಡಿ:ಎಡೆಬಿಡದೆ ಸುರಿಯುತ್ತಿರುವ ಗಾಳಿ ಮಳೆ, ಮನೆಗೆ ಗುಡ್ಡ ಕುಸಿತ, ಹಾನಿ

Suddi Udaya

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ : ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 13504 ಅಂತರದಿಂದ ಮುನ್ನಡೆ

Suddi Udaya

ಬೆಳ್ತಂಗಡಿ: ಕಿನ್ಯಮ್ಮ ಸಭಾಭವನದ ಉದ್ದಿಮೆ ಪರವಾನಿಗೆ ರದ್ದುಗೊಳಿಸಿದ ಆದೇಶ ಹಿಂಪಡೆದ ಪಟ್ಟಣ ಪಂಚಾಯತ್

Suddi Udaya

ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ ಫ್ರೆಶರ್ಸ್ ಡೇ, ವಿದ್ಯಾರ್ಥಿ ಪರಿಷತ್ ಉದ್ಘಾಟನೆ ಹಾಗೂ ಪ್ರತಿಭಾ ಸನ್ಮಾನ

Suddi Udaya

ಮಾಲಾಡಿ: ಕೆತ್ತಿಗುಡ್ಡೆ ಹೊಸ ರಸ್ತೆ ಮತ್ತು ಸಂಪರ್ಕ ಸೇತುವೆ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಒಂದು ಲಕ್ಷ ಮಂಜೂರು

Suddi Udaya

ಗುರುವಾಯನಕೆರೆ ಗೆಳೆಯರ ಬಳಗದ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!