27 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಲ್.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆ ಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಶನ್‌ ಟ್ರಸ್ಟ್( ರಿ) ನಡೆಸುತ್ತಿರುವ ಎಲ್.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆ ಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಸಮರ್ಥ ಸಂಪತ್ತು ನಿರ್ಮಾಣದ ಮಾರ್ಗಗಳು – ಮ್ಯೂಚುವಲ್ ಫಂಡ್ಸ್ ಮತ್ತು ಹೂಡಿಕೆದಾರ ಜಾಗೃತಿ”ಎಂಬ ವಿಷಯದ ಮೇಲೆ ಮಾಹಿತಿ ಕಾರ್ಯಾಗಾರವನ್ನು ಡಿ.11 ರಂದು ಆಯೋಜಿಸಲಾಯಿತು. ಕಾರ್ಯಕ್ರಮದ ಉದ್ದೇಶ ವಿದ್ಯಾರ್ಥಿಗಳಿಗೆ ಹೂಡಿಕೆ, ಮ್ಯೂಚುವಲ್ ಫಂಡ್ಸ್, ಮತ್ತು ಸಮರ್ಪಕ ಹಣಕಾಸು ಯೋಜನೆಗಳ ಮಹತ್ವವನ್ನು ತಿಳಿಸುವುದಾಗಿತ್ತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅರ್ಜುನ ಮಹೇಶ್ ಅವರು ಹಾಜರಿದ್ದರು. ಅವರು ಪ್ರಸ್ತುತ ಫೈನಾನ್ಸ್ ಕ್ಷೇತ್ರದಲ್ಲಿ ತಜ್ಞರಾಗಿ, ಶಿಕ್ಷಕರಾಗಿಯು ಸೇವೆ ಸಲ್ಲಿಸುತ್ತಿದ್ದು, ಮ್ಯೂಚುವಲ್ ಫಂಡ್ಸ್, ಹೂಡಿಕೆ ತಂತ್ರಗಳು, ಮತ್ತು ಹಣಕಾಸು ನಿರ್ವಹಣೆಯ ಆಯಾಮಗಳನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು. ಯುವ ಪೀಳಿಗೆ ಹಣಕಾಸು ಜಾಗೃತಿಯನ್ನು ಬೆಳೆಸಿಕೊಳ್ಳುವುದು ಅತ್ಯಂತ ಅಗತ್ಯವೆಂದು ಅವರು ತಮ್ಮ ಉಪನ್ಯಾಸದಲ್ಲಿ ಹೇಳಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೋ, ಸಂಯೋಜಕರಾದ ಯಶವಂತ್. ಜಿ. ನಾಯಕ್, ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.
ಫಾತಿಮಾ ತೃತೀಯ ಬಿ. ಕಾಮ್ ಸ್ವಾಗತಿಸಿ, ಸುಪ್ರಿಯಾ ತೃತೀಯ ಬಿ.ಕಾಮ್ ವಂದಿಸಿದರು.

Related posts

ಕೊಕ್ಕಡ : ಕುಡಾಲ ವ್ಯಾಪ್ತಿಯಲ್ಲಿ ಆನೆ ಸಂಚಾರ

Suddi Udaya

ಸಚಿವರಾಗಿ ಆಯ್ಕೆಯಾದ ಯುಟಿ ಖಾದರ್ ರವರಿಗೆ ಗೆಜ್ಜೆಗಿರಿಯ ಸಮಿತಿಯಿಂದ ಅಭಿನಂದನೆ

Suddi Udaya

ಮಚ್ಚಿನ: ಶ್ರೀ ವಿದ್ಯಾಸಾಗರ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ: ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಬೆಳ್ತಂಗಡಿ ಸೆಂಟರ್ ವತಿಯಿಂದ ಇಂಜಿನಿಯರ್ಸ್ ಡೇ ಆಚರಣೆ

Suddi Udaya

ನೆರಿಯಾ ಗ್ರಾಮದಲ್ಲಿ “ಮಲೆಕುಡಿಯ ಬುಡಕಟ್ಟು ಕುಟುಂಬಗಳೊಂದಿಗೆ ಶೈಕ್ಷಣಿಕ ವಿನಿಮಯ”

Suddi Udaya

ವೈಯಕ್ತಿಕ ದ್ವೇಷದ ವಿಚಾರವಾಗಿ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪುಗಳು: ಶಿರ್ಲಾಲು ಗ್ರಾಮಸಭೆಯಲ್ಲಿ ದೇವಸ್ಥಾನದ ಬ್ರಹ್ಮಕಲಶದ ಹಣದ ವಿಚಾರದಲ್ಲಿ ಹೊಡೆದಾಟ

Suddi Udaya
error: Content is protected !!