23.2 C
ಪುತ್ತೂರು, ಬೆಳ್ತಂಗಡಿ
August 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧೈರ್ಯ ಸಮಾಹಿತ ನವೀನ್ UIPM ವರ್ಲ್ಡ್ ಚಾಂಪಿಯನ್‌ಷಿಪ್‌ ನಲ್ಲಿ ದ್ವಿತೀಯ ಸ್ಥಾನ

ಬೆಳ್ತಂಗಡಿ: ನಡ ಗ್ರಾಮದ ಮಂಚಕಲ್ ಕಿರಣ್ ನಿಲಯದ ನಿವಾಸಿ, ನವೀನ್ ಸಂಜೀವ ಅವರ ಪುತ್ರ ಹಾಗೂ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಡಿ.ಆರ್.ಸಂಜೀವ ಗೌಡ ಡೊಡಡ್ಕ ಶಿರಾಡಿ ಅವರ ಮೊಮ್ಮಗ ಧೈರ್ಯ ಸಮಾಹಿತ ನವೀನ್ ಅವರು ದಕ್ಷಿಣ ಆಫ್ರಿಕಾದ ಮೊಸೆಲ್ ಬೇಯಲ್ಲಿ ನಡೆಯುವ UIPM ವರ್ಲ್ಡ್ ಚಾಂಪಿಯನ್‌ಷಿಪ್‌ನಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಭಾರತದ ಕೀರ್ತಿ ಬೆಳಗಿದ್ದಾರೆ.

ಕೇಂದ್ರ ವಿದ್ಯಾಲಯದ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿರುವ ಇವರು ಡಿ.6 ರಿಂದ ಡಿ.16 ರವರೆಗೆ ದ.ಆಫ್ರಿಕಾದ ಮೋಸೆಲ್ ಬೇಯ ಸಂತೊಸ್ ಬೀಚ್‌ನಲ್ಲಿ ವಿಶ್ವದ 32 ರಾಷ್ಟ್ರಗಳ 1800 ಕ್ಕೂ ಹೆಚ್ಚು ಯುವ ಕ್ರೀಡಾಪಟುಗಳ ಜೊತೆ ಸ್ಪರ್ಧಿಸುವಲ್ಲಿ, ಕರ್ನಾಟಕದಿಂದ ಅರ್ಹತೆ ಪಡೆದ ಇಬ್ಬರಲ್ಲಿ ಧೈರ್ಯ ಒಬ್ಬನಾಗಿ ಭಾರತವನ್ನು ಪ್ರತಿನಿಧಿಸಿದ್ದರು. ಅವನು ಬಯಾಥ್ಲೆ, ಟ್ರಯಾಥ್ಲೆ ಮತ್ತು ಲೇಸರ್ ರನ್ ವಿಭಾಗಗಳಲ್ಲಿ ಸ್ಪರ್ಧಿಸಿದರು. ಇವು ಆಧುನಿಕ ಪೆಂಟಾಥ್ಲಾನ್‌ನ ಅತ್ಯಂತ ದೊಡ್ಡ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಒಂದಾಗಿದೆ. ಇದರಲ್ಲಿ ಬೆಳ್ಳಿ ಪದಕ ಪಡೆದು ಸಾಧನೆ ತೋರಿದ್ದಾರೆ.

Related posts

ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿಯ ನಡೆಯನ್ನು ವಿರೋಧಿಸಿ ಮದ್ದಡ್ಕದಲ್ಲಿ ಬಿತ್ತಿಪತ್ರ ಪ್ರದರ್ಶನ

Suddi Udaya

ಕುವೆಟ್ಟು :ಶ್ರೀ ಗುರುನಾರಾಯಣ‌ ಸ್ವಾಮಿ ಸೇವಾ‌ ಸಂಘ ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ, ಕುವೆಟ್ಟು ಗ್ರಾಮ ಸಮಿತಿಯಿಂದ  ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆ

Suddi Udaya

ಶಿಬರಾಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಮತದಾನ ಆರಂಭ

Suddi Udaya

ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನ ಫಲಿತಾಂಶ: ಶ್ರೀಧ.ಮ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಕರಾಯ ಶ್ರೀ ಕೃಷ್ಣ ಭಜನಾಮಂದಿರದಲ್ಲಿ ಕುಣಿತ ಭಜನಾ ತರಬೇತಿ

Suddi Udaya
error: Content is protected !!