28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇ.ಧ.ಗ್ರಾ.ಯೋ. ಬಿ.ಸಿ ಟ್ರಸ್ಟ್ ಸಿಡ್ಬಿ ಪ್ರಯಾಸ ಸ್ವ ಉದ್ಯೋಗ ಕ್ಕೆ 1ಕೋಟಿ ಪ್ರಗತಿ ನಿಧಿ ಮಜೂರಾತಿ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ )ಗುರುವಾಯನಕೆರೆ/ ಬೆಳ್ತಂಗಡಿ ಸಿಡ್ಬಿ ಪ್ರಯಾಸ ಸ್ವ ಉದ್ಯೋಗ ಕ್ಕೆ 1ಕೋಟಿ ಪ್ರಗತಿ ನಿಧಿ ಮಜೂರಾತಿ ವಿತರಣೆ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕರು ದಿನೇಶ ಡಿ ಪ್ರಸ್ತಾವಿಕ ಮಾತನಾಡಿ ಪೂಜ್ಯರ ಮಾರ್ಗದರ್ಶನದಂತೆ ಸಿಡ್ಬಿ ಪ್ರಯಾಸ ಯೋಜನೆಯು ಸ್ವಸಹಾಯ ಸಂಘಗಳ ಸದಸ್ಯರಿಗೆ ಸ್ವ ಉದ್ಯೋಗ ಕಲ್ಪಿಸಲು ಹಾಗೂ ಸ್ವಾವಲಂಬಿಗಳಾಗಲು ಬೇಕಾದ ಅಗತ್ಯ ಸಹಕಾರವನ್ನು ನೀಡುವ ಯೋಜನೆಯಾಗಿದೆ ಯೋಜನೆಯ ಮೂಲ ಸ್ವಾವಲಂಬಿ ಬದುಕನ್ನು ಯುವ ಜನತೆ ಕಟ್ಟಿಕೊಳ್ಳಬೇಕು ಎಂಬ ಉನ್ನತ ಚಿಂತನೆಯಾಗಿದೆ ದಿನನಿತ್ಯ ಆದಾಯ ಬರುವ ವ್ಯವಹಾರಕ್ಕೆ ಪೂರಕವಾಗಿ ಕಿರಾಣಿ ಅಂಗಡಿ, ಹೋಟೆಲ್, ಹೂವಿನ ಅಂಗಡಿ, ಬೇಕರಿ ಮತ್ತು ಚಾಟ್ಸ್ ಅಂಗಡಿ, ಕೃಷಿ ಉತ್ಪನ್ನಗಳಿಗೆ ಇತರೆ ಉದ್ದೇಶ ಗಳಿಗೆ 50,000 ರಿಂದ 5 ಲಕ್ಷದವರೆಗೆ ಸಿಡ್ಬಿ ಪ್ರಗತಿ ನಿಧಿಯನ್ನು ದಾಖಲೆ ಅನುಗುಣವಾಗಿ ವಿತರಿಸಲಾಗುವುದು, ತಾಲೂಕಿನ ಪ್ರಗತಿ ಬಂಧು ಸ್ವ ಸಹಾಯ ತಂಡದ ಸ್ವ ಉದ್ಯೋಗ ಮಾಡುವ ಸದಸ್ಯರು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ಪ್ರಾಸವಿಕವಾಗಿ ಮಾತನಾಡಿದರು.

ರೂಟ್ ಸೆಟ್ ಸಂಸ್ಥೆಯ ಕರುಣಾಕರವರು ಮಾತನಾಡಿ ಸ್ವ ಉದ್ಯೋಗ ಆಯ್ಕೆ ಮಾಡುವಾಗ ಗಮನಿಸಬೇಕಾದ ಅವಶ್ಯಕತೆ ಬಗ್ಗೆ ಲಾಭ ನಷ್ಟದ ಬಗ್ಗೆ ಗ್ರಾಹಕರಲ್ಲಿ ವ್ಯವಹಾರದ ರೀತಿ ಬಗ್ಗೆ ತರಬೇತಿಯನ್ನು ಪಡೆದು ಸ್ವ ಉದ್ಯೋಗ ಮಾಡುವುದು ಸೂಕ್ತ ನಮ್ಮ ಸಂಸ್ಥೆಯಲ್ಲಿ ಎಲ್ಲಾ ಸ್ವ ಉದ್ಯೋಗದ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಸಿಡ್ಬಿ ಯೋಜನಾಧಿಕಾರಿಗಳು ಶ್ರೀಮತಿ ಅನುಷಾ ಸಿಡ್ಬಿ ಯೋಜನೆಗೆ ನೀಡಬೇಕಾದ ದಾಖಲಾತಿ ಯ ಬಗ್ಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಗುರುವಾಯನಕೆರೆ ಯೋಜನಾಧಿಕಾರಿಗಳು ಅಶೋಕ ಬಿ, ಕೃಷಿ ಮೇಲ್ವಿಚಾರಕರು ಕೃಷ್ಣ ಮೇಲ್ವಿಚಾರಕರು ಯಶೋದ, ಕಛೇರಿ ಪ್ರಬಂಧಕರು ಆಕಾಶ್, ಹಾಗೂ ಸ್ವ ಉದ್ಯೋಗ ಮಾಡುವ ಸದಸ್ಯರು ಉಪಸಿತರಿದ್ದರು.

Related posts

ಆಡಳಿತ ಪಕ್ಷ ರಾಜ್ಯಪಾಲರಿಂದ ಮಾಡಿಸಿರುವ ಭಾಷಣ ಕೇವಲ ಸಾಹಿತ್ಯಿಕವಾಗಿ ರಂಜನೀಯವಾಗಿತ್ತೇ ಹೊರತು ಅಭಿವೃದ್ಧಿಯ ಚಿಂತನೆ ಇಲ್ಲದೆ ನೀರಸವಾಗಿತ್ತು: ಎಂ.ಎಲ್‌.ಸಿ ಪ್ರತಾಪಸಿಂಹ ನಾಯಕ್

Suddi Udaya

ನಿಡ್ಲೆ ಗ್ರಾಮ ಪಂಚಾಯತ್ ವತಿಯಿಂದ ಮಕ್ಕಳ ಗ್ರಾಮಸಭೆ

Suddi Udaya

ಮುಂಡಾಜೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ, ಆಟಿ ತಿನಿಸಿನ ಸಹಭೋಜನ, ಆಟಿಕಳೆಂಜ ಪ್ರದರ್ಶನ

Suddi Udaya

ಹೆಚ್‌ಡಿಎಫ್‌ಸಿ ಬ್ಯಾಂಕ್ ಬೆಳ್ತಂಗಡಿ ಶಾಖೆಯಲ್ಲಿ ಸಿಡಿಎಂ ಸೌಲಭ್ಯ ಆರಂಭ

Suddi Udaya

ನಾರಾವಿ:”ಸನ್ನಿಧಿ” ಪ್ಯಾಲೇಸ್ ಡೊಂಕುಬೆಟ್ಟು ವೀರಮ್ಮ ಸಂಜೀವ ಸಾಲಿಯನ್ ಮತ್ತು ಮಕ್ಕಳಿಂದ ದೈಪಾಲಬೆಟ್ಟು ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಮುಖಾಯಾಮ ಮಂಟಪ ದುರಸ್ತಿಗೆ ಮರಮಟ್ಟು ಹಾಗೂ ಭಂಡಾರಕ್ಕೆ ಪಲ್ಲಕ್ಕಿ ಸಮರ್ಪಣೆ

Suddi Udaya

ಜು.7: ಧರ್ಮಸ್ಥಳದಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya
error: Content is protected !!