26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಲ್.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆ ಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಶನ್‌ ಟ್ರಸ್ಟ್( ರಿ) ನಡೆಸುತ್ತಿರುವ ಎಲ್.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆ ಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಸಮರ್ಥ ಸಂಪತ್ತು ನಿರ್ಮಾಣದ ಮಾರ್ಗಗಳು – ಮ್ಯೂಚುವಲ್ ಫಂಡ್ಸ್ ಮತ್ತು ಹೂಡಿಕೆದಾರ ಜಾಗೃತಿ”ಎಂಬ ವಿಷಯದ ಮೇಲೆ ಮಾಹಿತಿ ಕಾರ್ಯಾಗಾರವನ್ನು ಡಿ.11 ರಂದು ಆಯೋಜಿಸಲಾಯಿತು. ಕಾರ್ಯಕ್ರಮದ ಉದ್ದೇಶ ವಿದ್ಯಾರ್ಥಿಗಳಿಗೆ ಹೂಡಿಕೆ, ಮ್ಯೂಚುವಲ್ ಫಂಡ್ಸ್, ಮತ್ತು ಸಮರ್ಪಕ ಹಣಕಾಸು ಯೋಜನೆಗಳ ಮಹತ್ವವನ್ನು ತಿಳಿಸುವುದಾಗಿತ್ತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅರ್ಜುನ ಮಹೇಶ್ ಅವರು ಹಾಜರಿದ್ದರು. ಅವರು ಪ್ರಸ್ತುತ ಫೈನಾನ್ಸ್ ಕ್ಷೇತ್ರದಲ್ಲಿ ತಜ್ಞರಾಗಿ, ಶಿಕ್ಷಕರಾಗಿಯು ಸೇವೆ ಸಲ್ಲಿಸುತ್ತಿದ್ದು, ಮ್ಯೂಚುವಲ್ ಫಂಡ್ಸ್, ಹೂಡಿಕೆ ತಂತ್ರಗಳು, ಮತ್ತು ಹಣಕಾಸು ನಿರ್ವಹಣೆಯ ಆಯಾಮಗಳನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು. ಯುವ ಪೀಳಿಗೆ ಹಣಕಾಸು ಜಾಗೃತಿಯನ್ನು ಬೆಳೆಸಿಕೊಳ್ಳುವುದು ಅತ್ಯಂತ ಅಗತ್ಯವೆಂದು ಅವರು ತಮ್ಮ ಉಪನ್ಯಾಸದಲ್ಲಿ ಹೇಳಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೋ, ಸಂಯೋಜಕರಾದ ಯಶವಂತ್. ಜಿ. ನಾಯಕ್, ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.
ಫಾತಿಮಾ ತೃತೀಯ ಬಿ. ಕಾಮ್ ಸ್ವಾಗತಿಸಿ, ಸುಪ್ರಿಯಾ ತೃತೀಯ ಬಿ.ಕಾಮ್ ವಂದಿಸಿದರು.

Related posts

ಶ್ರೀ ಧ.ಮಂ ಪ.ಪೂ ಕಾಲೇಜು : ರಾ. ಸೇ ಯೋಜನಾ ದಿನಾಚರಣೆ ಹಾಗೂ ಪ್ರಾಚಾರ್ಯರಿಗೆ ಅಭಿನಂದನೆ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ವತಿಯಿ೦ದ ರಾಜ್ಯ ಮಹಿಳಾಗೋಷ್ಠಿ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಾನ್ಸೂನ್ ಡೇ

Suddi Udaya

ಹಿರಿಯ ಸಾಹಿತಿ, ಪತ್ರಕರ್ತ ಉಜಿರೆ ಶ್ರೀಮಂಜುನಾಥೇಶ್ವರ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ನಾ ವುಜಿರೆ ನಿಧನ

Suddi Udaya

ಲಾಯಿಲ: ಪಡ್ಲಾಡಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ: ಅಧ್ಯಕ್ಷರಾಗಿ ಹರ್ಷಿತ್ ನಿನ್ನಿಕಲ್ಲು, ಕಾರ್ಯದರ್ಶಿ ವಿನಯ್, ಕೋಶಾಧಿಕಾರಿ ಹರೀಶ್ ಎಲ್.ಆಯ್ಕೆ

Suddi Udaya

ಮುಂಡಾಜೆ: ಸೀಟು ಪ್ರದೇಶದಲ್ಲಿ ವಾಲಿ ನಿಂತಿರುವ ವಿದ್ಯುತ್ ಕಂಬ

Suddi Udaya
error: Content is protected !!