30.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಲ್.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆ ಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಶನ್‌ ಟ್ರಸ್ಟ್( ರಿ) ನಡೆಸುತ್ತಿರುವ ಎಲ್.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆ ಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಸಮರ್ಥ ಸಂಪತ್ತು ನಿರ್ಮಾಣದ ಮಾರ್ಗಗಳು – ಮ್ಯೂಚುವಲ್ ಫಂಡ್ಸ್ ಮತ್ತು ಹೂಡಿಕೆದಾರ ಜಾಗೃತಿ”ಎಂಬ ವಿಷಯದ ಮೇಲೆ ಮಾಹಿತಿ ಕಾರ್ಯಾಗಾರವನ್ನು ಡಿ.11 ರಂದು ಆಯೋಜಿಸಲಾಯಿತು. ಕಾರ್ಯಕ್ರಮದ ಉದ್ದೇಶ ವಿದ್ಯಾರ್ಥಿಗಳಿಗೆ ಹೂಡಿಕೆ, ಮ್ಯೂಚುವಲ್ ಫಂಡ್ಸ್, ಮತ್ತು ಸಮರ್ಪಕ ಹಣಕಾಸು ಯೋಜನೆಗಳ ಮಹತ್ವವನ್ನು ತಿಳಿಸುವುದಾಗಿತ್ತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅರ್ಜುನ ಮಹೇಶ್ ಅವರು ಹಾಜರಿದ್ದರು. ಅವರು ಪ್ರಸ್ತುತ ಫೈನಾನ್ಸ್ ಕ್ಷೇತ್ರದಲ್ಲಿ ತಜ್ಞರಾಗಿ, ಶಿಕ್ಷಕರಾಗಿಯು ಸೇವೆ ಸಲ್ಲಿಸುತ್ತಿದ್ದು, ಮ್ಯೂಚುವಲ್ ಫಂಡ್ಸ್, ಹೂಡಿಕೆ ತಂತ್ರಗಳು, ಮತ್ತು ಹಣಕಾಸು ನಿರ್ವಹಣೆಯ ಆಯಾಮಗಳನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು. ಯುವ ಪೀಳಿಗೆ ಹಣಕಾಸು ಜಾಗೃತಿಯನ್ನು ಬೆಳೆಸಿಕೊಳ್ಳುವುದು ಅತ್ಯಂತ ಅಗತ್ಯವೆಂದು ಅವರು ತಮ್ಮ ಉಪನ್ಯಾಸದಲ್ಲಿ ಹೇಳಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೋ, ಸಂಯೋಜಕರಾದ ಯಶವಂತ್. ಜಿ. ನಾಯಕ್, ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.
ಫಾತಿಮಾ ತೃತೀಯ ಬಿ. ಕಾಮ್ ಸ್ವಾಗತಿಸಿ, ಸುಪ್ರಿಯಾ ತೃತೀಯ ಬಿ.ಕಾಮ್ ವಂದಿಸಿದರು.

Related posts

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya

ಮೂಡುಬಿದಿರೆ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ 35ನೇ ಶಾಖೆ ಉದ್ಘಾಟನೆ

Suddi Udaya

ಸುಲ್ಕೇರಿಮೊಗ್ರು: ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿಯ ವತಿಯಿಂದ ವಿ. ಹರೀಶ್ ನೆರಿಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ನ.5: ಬೆಳ್ತಂಗಡಿ ಧರ್ಮಪ್ರಾಂತ್ಯದ ಎರಡನೆಯ ಧರ್ಮಾಧ್ಯಕ್ಷರಾದ ಅತೀ ವಂದನೀಯ ಜೇಮ್ಸ್ ಪಟ್ಟೇರಿಲ್ ಪಟ್ಟಾಭಿಷೇಕ

Suddi Udaya

ಸುಲ್ಕೇರಿಮೊಗ್ರು ಮಳೆಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಇಂದುಗ್ರಾಂ.ಪಂ. ಆಡಳಿತ ಮಂಡಳಿ ಭೇಟಿ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅರ್ಚಕ ಚಂದ್ರಶೇಖರ್ ಭಟ್ ನಿಧನ

Suddi Udaya
error: Content is protected !!