May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧೈರ್ಯ ಸಮಾಹಿತ ನವೀನ್ UIPM ವರ್ಲ್ಡ್ ಚಾಂಪಿಯನ್‌ಷಿಪ್‌ ನಲ್ಲಿ ದ್ವಿತೀಯ ಸ್ಥಾನ

ಬೆಳ್ತಂಗಡಿ: ನಡ ಗ್ರಾಮದ ಮಂಚಕಲ್ ಕಿರಣ್ ನಿಲಯದ ನಿವಾಸಿ, ನವೀನ್ ಸಂಜೀವ ಅವರ ಪುತ್ರ ಹಾಗೂ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಡಿ.ಆರ್.ಸಂಜೀವ ಗೌಡ ಡೊಡಡ್ಕ ಶಿರಾಡಿ ಅವರ ಮೊಮ್ಮಗ ಧೈರ್ಯ ಸಮಾಹಿತ ನವೀನ್ ಅವರು ದಕ್ಷಿಣ ಆಫ್ರಿಕಾದ ಮೊಸೆಲ್ ಬೇಯಲ್ಲಿ ನಡೆಯುವ UIPM ವರ್ಲ್ಡ್ ಚಾಂಪಿಯನ್‌ಷಿಪ್‌ನಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಭಾರತದ ಕೀರ್ತಿ ಬೆಳಗಿದ್ದಾರೆ.

ಕೇಂದ್ರ ವಿದ್ಯಾಲಯದ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿರುವ ಇವರು ಡಿ.6 ರಿಂದ ಡಿ.16 ರವರೆಗೆ ದ.ಆಫ್ರಿಕಾದ ಮೋಸೆಲ್ ಬೇಯ ಸಂತೊಸ್ ಬೀಚ್‌ನಲ್ಲಿ ವಿಶ್ವದ 32 ರಾಷ್ಟ್ರಗಳ 1800 ಕ್ಕೂ ಹೆಚ್ಚು ಯುವ ಕ್ರೀಡಾಪಟುಗಳ ಜೊತೆ ಸ್ಪರ್ಧಿಸುವಲ್ಲಿ, ಕರ್ನಾಟಕದಿಂದ ಅರ್ಹತೆ ಪಡೆದ ಇಬ್ಬರಲ್ಲಿ ಧೈರ್ಯ ಒಬ್ಬನಾಗಿ ಭಾರತವನ್ನು ಪ್ರತಿನಿಧಿಸಿದ್ದರು. ಅವನು ಬಯಾಥ್ಲೆ, ಟ್ರಯಾಥ್ಲೆ ಮತ್ತು ಲೇಸರ್ ರನ್ ವಿಭಾಗಗಳಲ್ಲಿ ಸ್ಪರ್ಧಿಸಿದರು. ಇವು ಆಧುನಿಕ ಪೆಂಟಾಥ್ಲಾನ್‌ನ ಅತ್ಯಂತ ದೊಡ್ಡ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಒಂದಾಗಿದೆ. ಇದರಲ್ಲಿ ಬೆಳ್ಳಿ ಪದಕ ಪಡೆದು ಸಾಧನೆ ತೋರಿದ್ದಾರೆ.

Related posts

ಬೆಳ್ತಂಗಡಿ ಗ್ರಾಮೀಣ ಮತ್ತು ನಗರ ಕಾಂಗ್ರೆಸ್ ಎಸ್ ಸಿ ಘಟಕದ ನೂತನ ಅಧ್ಯಕ್ಷರ ಮತ್ತು ಜಿಲ್ಲಾ ಉಪಾಧ್ಯಕ್ಷರ ನೇಮಕ

Suddi Udaya

ಸುದ್ದಿಉದಯ ವಾರಪತ್ರಿಕೆಯ ದೀಪಾವಳಿ ವಿಶೇಷಾಂಕ, ಹೇ ಶಾರದೇ, ಕೃಷ್ಣ ವೇಷ ಸ್ಪರ್ಧೆಗಳ ಬಹುಮಾನ ವಿತರಣೆ

Suddi Udaya

ಉಜಿರೆ: ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ “ಮಹಿಳಾ ಯಕ್ಷಸಂಭ್ರಮ” ಉದ್ಘಾಟನೆ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಿಂದ ಈದ್ ಮಿಲಾದ್ ರ್‍ಯಾಲಿ

Suddi Udaya

ಅ.10: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಮಡಂತ್ಯಾರು ಹಾಗೂ ಬಳ್ಳಮಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕೊಯ್ಯೂರು: ದೆoತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಳದ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!