July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿಯಲ್ಲಿ Vakrangee ಯುಪಿಐ ಮಿನಿ ಎಟಿಎಂ ಕೇಂದ್ರ ಶುಭಾರಂಭ

ಅಳದಂಗಡಿ: ಮುಂಬೈ ಮೂಲದ Vakrangee ಸಂಸ್ಥೆಯ ವಿನೂತನ ತಂತ್ರಜ್ಞಾನಗಳನ್ನೊಳಗೊಂಡ ಯುಪಿಐ ಮಿನಿ ಎಟಿಎಂ ಕೇಂದ್ರವು ಸ್ವರಾಜ್ ಬಂಗೇರರವರ ಮಾಲಕತ್ವದಲ್ಲಿ ಅಳದಂಗಡಿಯ ಸ್ವರಾಜ್ ಟವರ್ಸ್ ಕಟ್ಟಡದಲ್ಲಿ ಶುಭಾರಂಭಗೊಂಡಿತು.

ನೂತನ ಎ.ಟಿ.ಎಂ ಕೇಂದ್ರವನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರವರು ಉದ್ಘಾಟಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಅಳದಂಗಡಿ ಸಂತ ಪೀಟರ್ ಕ್ಲೇವರ್ ಚರ್ಚ್ ನ ಧರ್ಮ ಗುರುಗಳಾದ ರೆ| ಫಾ| ಎಲೈಯಸ್ ಡಿಸೋಜ, ಡಾ.ಎಮ್.ಎನ್ ತುಳುಪುಲೆ, ಸುಲ್ಕೇರಿ ಶ್ರೀ ರಾಮ ಶಾಲೆಯ ಅಧ್ಯಕ್ಷ ರಾಜು , ಕಾಶಿಪಟ್ಣ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಖ್ಯಾತ ನಾಟಿ ವೈದ್ಯರಾದ ಬೇಬಿ ಪೂಜಾರಿ, ಪದ್ಯೋಡಿ ಅಶೋಕ್ ಕೋಟ್ಯಾನ್, ಶಶಿಧರ್ ಶೆಟ್ಟಿ ಅಳದಂಗಡಿ, ನಾರಾವಿ ಹೆಗ್ಡೆ ಫರ್ನಿಚರ್ಸ್ ನ ಮಾಲಕರಾದ ರೋಶನ್ ಹೆಗ್ಡೆ, ದಿ ಕ್ಯಾಪ್ಸಿ ಸಮೂಹ ಸಂಸ್ಥೆಯ ದಕ್ಷಿಣ್ ಭವನ್ ಹೋಟೆಲ್ ನ ಮಾಲಕರಾದ ಅನಿಲ್ ಅಂಚನ್, ಶರತ್ ಚಂದ್ರ, VAKRANGEE ATM ಕೇಂದ್ರದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮುಖ್ಯಸ್ಥರಾದ ಅಭಿಜಿತ್ ಜೈನ್ ಮತ್ತು ಮಾರ್ಕೆಟಿಂಗ್ ಮುಖ್ಯಸ್ಥರಾದ ಪ್ರವೀಣ್ ರವರು ಭಾಗವಹಿಸಿ ನೂತನ ಯುಪಿಐ ಎಟಿಎಂ ಕೇಂದ್ರಕ್ಕೆ ಶುಭಾಶಂಸನೆಗೈದರು.ಈ ಸಂದರ್ಭದಲ್ಲಿ ಸ್ವರಾಜ್ ಟವರ್ಸ್ ನ ಮಾಲಕರಾದ ಸೋಮನಾಥ ಬಂಗೇರ, ಸ್ವರಾಜ್ ಬಂಗೇರ ಸಹಿತ ಊರ-ಪರ ಊರ ಗ್ರಾಹಕ ಬಂಧುಗಳು, ಹಿತೈಷಿಗಳು ಉಪಸ್ಥಿತರಿದ್ದರು.

ಅಳದಂಗಡಿಯಲ್ಲಿ Vakrangee ಸಂಸ್ಥೆಯ ಪ್ರಪ್ರಥಮ ಯುಪಿಐ ಮಿನಿ ಎಟಿಎಂ ಕೇಂದ್ರವು ಇದಾಗಿದ್ದು ನೂತನ ಎ.ಟಿ.ಎಂ ಕೇಂದ್ರದಲ್ಲಿ ಎಲ್ಲಾ ಬ್ಯಾಂಕಿನ ಕಾರ್ಡ್ ಗಳ ಮೂಲಕ ನಗದನ್ನು ಪಡೆಯಬಹುದಾದ ವ್ಯವಸ್ಥೆಯ ಜೊತೆಗೆ ಅತ್ಯಂತ ಸರಳ ರೀತಿಯಲ್ಲಿ ತಮ್ಮ ಮೊಬೈಲ್ ನಿಂದ ಗೂಗಲ್ ಪೇ ಅಥವಾ ಫೋನ್ ಪೇ ಮೂಲಕ ಸ್ಕ್ಯಾನರ್ ಬಳಸಿ ನಗದನ್ನು ಪಡೆಯುವ ವಿನೂತನ ವ್ಯವಸ್ಥೆಯು ಇರಲಿದ್ದು ನೂತನ ಸುಸಜ್ಜಿತ ಕೇಂದ್ರವು ಸಾರ್ವಜನಿಕ ಸೇವೆಗೆ ದಿನದ 24 ಗಂಟೆಯೂ ತೆರೆದಿರುತ್ತದೆ. ಅಳದಂಗಡಿ ಮತ್ತು ಆಸುಪಾಸಿನ ಗ್ರಾಮಗಳ ಸಾರ್ವಜನಿಕ ಬಂಧುಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಎ.ಟಿ.ಎಂ ಕೇಂದ್ರದ ಮಾಲಕರಾದ ಸ್ವರಾಜ್ ಬಂಗೇರರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

Related posts

ಗುರುವಾಯನಕೆರೆ ಭೂಷಣ್ ಬಾರ್ ಮಾಲಕ ಭಾಸ್ಕರ್ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಕಡಬದ ನವ ಜೀವನ ಸದಸ್ಯರಿಂದ ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಸರ್ಕಾರ ಬಂದು ಎರಡು ವರ್ಷ ಆದರೂ ನಡೆಯದ‌ ತಾಲೂಕು ಕೆಡಿಪಿ ಸಭೆ: ತಾಲೂಕು ಪಂಚಾಯತ್ ಮುಂದೆ ಯುವ ಕಾಂಗ್ರೆಸ್ ಬೆಳ್ತಂಗಡಿ ಪ್ರತಿಭಟನೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ: ಶ್ರೀಉಮಾಮಹೇಶ್ವರ ದೇವರಿಗೆ ಪಂಚಾಮೃತ ಅಭಿಷೇಕ: ಬ್ರಹ್ಮಕಲಶಾಭಿಷೇಕ

Suddi Udaya

ಕವನವಾಚನ ಸ್ಪರ್ಧೆಯಲ್ಲಿ ಕರಾಯ ಸ.ಪ್ರೌ. ಶಾಲೆಯ ವಿದ್ಯಾರ್ಥಿನಿ ಆಯಿಷತ್ ರಿಶ್ಬಾ ಪ್ರಥಮ ಸ್ಥಾನ

Suddi Udaya

ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಕೇಂದ್ರ ಕಛೇರಿಗೆ ಅಂತಾರಾಷ್ಟ್ರೀಯ ಕಬ್ಬಡ್ಡಿ ತರಬೇತುದಾರ ರವೀಂದ್ರ ಶೆಟ್ಟಿ ಭೇಟಿ

Suddi Udaya
error: Content is protected !!