25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಮಾಸಿಕ ಆರೋಗ್ಯ ಜಾಗೃತಿ

ಪುಂಜಾಲಕಟ್ಟೆ: ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ ) , ಉಜಿರೆ ಮತ್ತು ಗ್ರಾಮ ಪಂಚಾಯತ್ ಮಡಂತ್ಯಾರು ಇದರ ಸಹಯೋಗದೊಂದಿಗೆ ಮಾಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮ ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಅನಿತಾ ಬರೆಟ್ಟೋ ಮಾತನಾಡಿ, ಹೆಣ್ಣು ಮಕ್ಕಳು ಪ್ರೌಢಾವಸ್ಥೆಯ‌ ಸಮಯದಲ್ಲಿ ದೈಹಿಕವಾಗಿ ಹಾಗೂ ಮಾನಸಿಕವಾಗಿ ತಮ್ಮಲ್ಲಿ ಬದಲಾವಣೆಯಾದಾಗ ವಿಚಲಿತ ರಾಗದೆ ತಮ್ಮ ಆರೋಗ್ಯದ ಬಗ್ಗೆ ಗಮನ ಹರಿಸುವುದು ಉತ್ತಮ ಎಂದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಡಾ . ಭಾಷಿಣಿ (BNYS) ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ ಉಜಿರೆ, ಇವರು ಮಾತನಾಡಿ ಮುಟ್ಟಿನ ಸಮಯದಲ್ಲಿ ಆರೋಗ್ಯದ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯ ಇದು ನೈಸರ್ಗಿಕವಾಗಿ ಹೆಣ್ಣು ಮಕ್ಕಳಲ್ಲಿ ಆಗುವ ಪ್ರಕ್ರಿಯೆ ನಾಚಿಕೆ ಪಡುವ ವಿಷಯವಲ್ಲ ಇದರ ಬಗ್ಗೆ ಮುಕ್ತವಾಗಿ ಮಾತನಾಡಬಹುದು ಎಂದು ಇಂದು ಅಭಿಪ್ರಾಯ ಪಟ್ಟರು.
ಹಾಗೂ ಪೌಷ್ಟಿಕ ಆಹಾರ ಸೇವನೆ, ಯೋಗ ಇತ್ಯಾದಿಗಳನ್ನು ಮಾಡುವುದರಿಂದ ತೀವ್ರ ಹೊಟ್ಟೆ ನೋವನ್ನು ತಡೆಗಟ್ಟಬಹುದು ಎಂದು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು.

ಕಾರ್ಯಕ್ರಮದಲ್ಲಿ ಡಾ. ಭಾಷಿಣಿ ಅವರಿಗೆ ಕಿರು ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.

ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳಾದ ಸೌಮ್ಯ ಸ್ವಾಗತಿಸಿದರು, ಚರಿಷ್ಮಾ ವಂದಿಸಿದರು. ಉಷಾ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜೇನು ಕೃಷಿ ತರಬೇತಿ

Suddi Udaya

ಎಸ್.ವೈಎಸ್ ಉರುವಾಲು ಪದವು ಸರ್ಕಲ್ ಮಹಾಸಭೆ, ಸಮಿತಿ ರಚನೆ

Suddi Udaya

ಮಹಾರಾಷ್ಟ್ರದ ಕಂಪ್ಟೀಯಲ್ಲಿ ನಡೆದ ಅಖಿಲ ಭಾರತ ಮಟ್ಟದ ಎನ್‌ಸಿಸಿ ತರಬೇತಿಯಲ್ಲಿ ಮಡಂತ್ಯಾರ್‌ನ ಸೇಕ್ರೆಡ್ ಹಾರ್ಟ್ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ಎನ್‌ಸಿಸಿ ಅಧಿಕಾರಿ ಸಂಜೀತ್ ಶೆಟ್ಟಿಯವರಿಗೆ ಪ್ರಥಮ ಸ್ಥಾನ

Suddi Udaya

ರೀಜೆಂಟ್ ಮಳಿಗೆ ಅಳದಂಗಡಿಯಿಂದ- ಗರ್ಡಾಡಿ ಹೊನ್ನಕಟ್ಟೆಗೆ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಭಾಷಾ ಕೈ ಬರಹದ ತರಬೇತಿ ಕಾರ್ಯಾಗಾರ

Suddi Udaya

ಪಣಕಜೆ : ಚರಂಡಿಗೆ ವಾಲಿದ ಕೆಎಸ್ಆರ್ ಟಿಸಿ ಬಸ್ಸು

Suddi Udaya
error: Content is protected !!