July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಗಾವಿ ಅಧಿವೇಶನದ ನಡುವೆ ಕೆಸಿಎ ಕ್ರೀಡಾಂಗಣದಲ್ಲಿ ಕ್ರಿಕೆಟ್ ಆಡಿದ ಶಾಸಕರುಗಳು: ಗಮನ ಸೆಳೆದ ಶಾಸಕ ಹರೀಶ್ ಪೂಂಜರ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶನ

ಬೆಳಗಾವಿ: ವಿಧಾನಸಭೆಯ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ರಾಜ್ಯದ ಸಮಸ್ಯೆಗಳು, ಹೊಸ ಮಸೂದೆಗಳು ಸೇರಿದಂತೆ ವಿವಿಧ ಚರ್ಚೆಗಳು, ವಾಕ್ಸಮರಗಳು ಅಧಿವೇಶನದಲ್ಲಿ ಕಂಡು ಬರುತ್ತಿದೆ. ಈ ಮಧ್ಯೆ, ಡಿ.12ರಂದು ಅಧಿವೇಶನ ಆರಂಭಕ್ಕೂ ಮುನ್ನ ಮುಂಜಾನೆಯ ಸಮಯದಲ್ಲಿ ಕೆಸಿಎ ಕ್ರೀಡಾಂಗಣದಲ್ಲಿ ಮಾಧ್ಯಮ ಮಿತ್ರರ ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷರು ಸೇರಿದಂತೆ ಬಿಜೆಪಿ ಶಾಸಕರು, ಪಕ್ಷದ ಮುಖಂಡರು ಕ್ರಿಕೆಟ್ ಆಡಿ ಗಮನ ಸೆಳೆದಿದ್ದಾರೆ.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶನವು ಜನರ ಗಮನ ಸೆಳೆದಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅನುಭವ ಹಂಚಿಕೊಂಡ ಶಾಸಕರು “ಬೆಳಗಾವಿಯ ಅಧಿವೇಶನದ ನಡುವೆ ಬೆಳಗ್ಗೆ ಮಾಧ್ಯಮ ಸ್ನೇಹಿತರ ಜೊತೆ ಬೆಳಗಾವಿಯ ಕೆಸಿಎ ಕ್ರೀಡಾಂಗಣದಲ್ಲಿ ಬಿಜೆಪಿ ರಾಜ್ಯಧ್ಯಕ್ಷರಾದ ಬಿವೈ ವಿಜಯೇಂದ್ರ, ಶಾಸಕ ಮಿತ್ರರು, ಪಕ್ಷದ ಮುಖಂಡರು ಮತ್ತಿತರರೊಂದಿಗೆ ಕ್ರಿಕೆಟ್ ಆಡಿದರು, ಹಲವಾರು ಒತ್ತಡದ ಮಧ್ಯೆ ಕ್ರೀಡೆಯಲ್ಲಿ ತೊಡಗಿಸಿಕೊಂಡಾಗ ದೇಹಕ್ಕೆ ಉಲ್ಲಾಸ ಮತ್ತು ಮನಸ್ಸಿಗೆ ಸಂತೋಷವನ್ನು ನೀಡಿ ನಮ್ಮ ದೈಹಿಕ ಸಧೃಡತೆಯನ್ನು ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ.” ಎಂದಿದ್ದಾರೆ.

Related posts

ದಿ| ವಸಂತ ಬಂಗೇರರ ಮನೆಗೆ ರಾಜ್ಯದ ಮಾಜಿ ಸಚಿವ ಪಿ.ಜಿ. ಆರ್ ಸಿಂಧ್ಯ ಭೇಟಿ

Suddi Udaya

ಶಿರಸಿಯ ನಾರಾಯಣ ಆರ್ ಕೋಮಾರ್ ರವರಿಂದ ಸೇವಾಧಾಮಕ್ಕೆ ಧನ ಸಹಾಯ

Suddi Udaya

ಉಜಿರೆಯಲ್ಲಿ ಅರೆಭಾಷೆ ಅಭಿಮಾನಿ ಬಳಗದಿಂದ “ಆಟಿನ ನೆಂಪುಗ ” ಕಾರ್ಯಕ್ರಮ

Suddi Udaya

ಅಳದಂಗಡಿ ಹಾಲು ಉತ್ಪಾದಕರ ಸಹಕಾರ ಸಂಘದ ಸುವರ್ಣ ಮಹೋತ್ಸವ ಸಂಪನ್ನ: ಉತ್ತಮ ಹೈನುಗಾರರು ಹಾಗೂ ಮಾಜಿ ಅಧ್ಯಕ್ಷರುಗಳಿಗೆ ಸನ್ಮಾನ

Suddi Udaya

ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿಯ ನೂತನ ಅಧ್ಯಕ್ಷರಾಗಿ ಆನಂದ, ಕಾರ್ಯದರ್ಶಿಯಾಗಿ ಸಂದೀಪ್ ಆಯ್ಕೆ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ

Suddi Udaya
error: Content is protected !!