September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಗಾವಿ ಅಧಿವೇಶನದ ನಡುವೆ ಕೆಸಿಎ ಕ್ರೀಡಾಂಗಣದಲ್ಲಿ ಕ್ರಿಕೆಟ್ ಆಡಿದ ಶಾಸಕರುಗಳು: ಗಮನ ಸೆಳೆದ ಶಾಸಕ ಹರೀಶ್ ಪೂಂಜರ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶನ

ಬೆಳಗಾವಿ: ವಿಧಾನಸಭೆಯ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ರಾಜ್ಯದ ಸಮಸ್ಯೆಗಳು, ಹೊಸ ಮಸೂದೆಗಳು ಸೇರಿದಂತೆ ವಿವಿಧ ಚರ್ಚೆಗಳು, ವಾಕ್ಸಮರಗಳು ಅಧಿವೇಶನದಲ್ಲಿ ಕಂಡು ಬರುತ್ತಿದೆ. ಈ ಮಧ್ಯೆ, ಡಿ.12ರಂದು ಅಧಿವೇಶನ ಆರಂಭಕ್ಕೂ ಮುನ್ನ ಮುಂಜಾನೆಯ ಸಮಯದಲ್ಲಿ ಕೆಸಿಎ ಕ್ರೀಡಾಂಗಣದಲ್ಲಿ ಮಾಧ್ಯಮ ಮಿತ್ರರ ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷರು ಸೇರಿದಂತೆ ಬಿಜೆಪಿ ಶಾಸಕರು, ಪಕ್ಷದ ಮುಖಂಡರು ಕ್ರಿಕೆಟ್ ಆಡಿ ಗಮನ ಸೆಳೆದಿದ್ದಾರೆ.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶನವು ಜನರ ಗಮನ ಸೆಳೆದಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅನುಭವ ಹಂಚಿಕೊಂಡ ಶಾಸಕರು “ಬೆಳಗಾವಿಯ ಅಧಿವೇಶನದ ನಡುವೆ ಬೆಳಗ್ಗೆ ಮಾಧ್ಯಮ ಸ್ನೇಹಿತರ ಜೊತೆ ಬೆಳಗಾವಿಯ ಕೆಸಿಎ ಕ್ರೀಡಾಂಗಣದಲ್ಲಿ ಬಿಜೆಪಿ ರಾಜ್ಯಧ್ಯಕ್ಷರಾದ ಬಿವೈ ವಿಜಯೇಂದ್ರ, ಶಾಸಕ ಮಿತ್ರರು, ಪಕ್ಷದ ಮುಖಂಡರು ಮತ್ತಿತರರೊಂದಿಗೆ ಕ್ರಿಕೆಟ್ ಆಡಿದರು, ಹಲವಾರು ಒತ್ತಡದ ಮಧ್ಯೆ ಕ್ರೀಡೆಯಲ್ಲಿ ತೊಡಗಿಸಿಕೊಂಡಾಗ ದೇಹಕ್ಕೆ ಉಲ್ಲಾಸ ಮತ್ತು ಮನಸ್ಸಿಗೆ ಸಂತೋಷವನ್ನು ನೀಡಿ ನಮ್ಮ ದೈಹಿಕ ಸಧೃಡತೆಯನ್ನು ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ.” ಎಂದಿದ್ದಾರೆ.

Related posts

ನಿಡ್ಲೆ ಪ್ರಾ.ಕೃ.ಪ. ಸ.ಸಂಘದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸಹಕಾರ ಸಪ್ತಾಹ ಆಚರಣೆ ಮತ್ತು ಕೊಬ್ಬರಿ ಎಣ್ಣೆಗಿರಣಿ ಉದ್ಘಾಟನೆ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜಿಗೆ ಡಾ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಶಾಲಾ ಸುರಕ್ಷತೆ ಮತ್ತು ವಿಪತ್ತು ನಿರ್ವಹಣೆ ಅರಿವು ತರಬೇತಿ ಕಾರ್ಯಕ್ರಮ

Suddi Udaya

ಕನ್ಯಾಡಿ ಸೇವಾಭಾರತಿ ನೇತೃತ್ವದಲ್ಲಿ ಮಹಿಳೆಯರಿಗಾಗಿ ಒಂದು ತಿಂಗಳ ಉಚಿತ ಟೈಲರಿಂಗ್ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಕಳಿಯ ಗ್ರಾಮ ಪಂಚಾಯತ್ ಅರಿವು ಕೇಂದ್ರದ ಸಭೆ

Suddi Udaya

ನೀರಿನ ವ್ಯವಸ್ಥೆ ಕಲ್ಪಿಸಿದ ಶಾಸಕ ಹರೀಶ್ ಪೂಂಜರವರಿಗೆ ವೇಣೂರು ಪ್ರೌಢಶಾಲಾ ವತಿಯಿಂದ ಸನ್ಮಾನ

Suddi Udaya
error: Content is protected !!