23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಪರಿಸರದಲ್ಲಿ ಚಿರತೆ ಓಡಾಟ: ಗ್ರಾಮಸ್ಥರಲ್ಲಿ ಭಯದ ವಾತವರಣ

ಮಚ್ಚಿನ ಗ್ರಾಮದ ಅನಯನಕಾಡು, ಮುಡಿಪಿರೆ, ಕೈಲಾ ಕುರುಡಂಗೆ ಪರಿಸರದಲ್ಲಿ ಚಿರತೆ ತಿರುಗಾಡುತ್ತಿದ್ದು ಜನರು ಭಯಪಡುವಂತಾಗಿದೆ. ಸ್ಥಳೀಯರಾದ ಉದಯ ಇವರು ರಾತ್ರಿ 11ರ ಸಮಯ ಬೈಕಲ್ಲಿ ಸಂಚರಿಸುವ ವೇಳೆ ಅನಯನ ಕಾಡು ರಸ್ತೆಯಲ್ಲಿ ಚಿರತೆ ಎದುರು ಬಂದ ಘಟನೆ ಇತ್ತೀಚಿಗೆ ನಡೆದಿದೆ.

ಮುಡಿಪಿರೆ ಪರಿಸರದಲ್ಲಿ ದಿವಾಕರ ಹಾಗೂ ಇತರರಿಗೂ ಎದುರಾದ ಘಟನೆ ನಡೆದಿದೆ. ದೊಡ್ಡದಾದ ಚಿರತೆಯು ತಿರುಗಾಡುತ್ತಿದ್ದು ರಾತ್ರಿ ಹಾಗೂ ಮುಂಜಾನೆಯ ಮೇಲೆ ಜನರ ಎದುರು ಪ್ರತ್ಯಕ್ಷವಾಗುತ್ತಿದ್ದು ಜನರು ಸಂಚರಿಸಲು ಭಯಪಡುವಂತಾಗಿದೆ. ದಿನನಿತ್ಯ ರಸ್ತೆಯಲ್ಲಿ ಶಾಲಾ ಮಕ್ಕಳು ನಡೆದುಕೊಂಡು ಹೋಗುವ ಈ ರಸ್ತೆಯಲ್ಲಿ ಪೊದೆಗಳು ಮುತ್ತಿಕೊಂಡಿದ್ದು ಕಾಡು ಪ್ರಾಣಿಗಳು ಅವಿತಿದ್ದರು ಗೋಚರಿಸದಂತಾಗಿದೆ. ಈ ಚಿರತೆಯಿಂದ ದೊಡ್ಡ ಅನಾಹುತ ಆಗುವ ಮುನ್ನ ಗ್ರಾಮ ಪಂಚಾಯಿತಿ ಹಾಗೂ ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಒತ್ತಾಯವಾಗಿದೆ.
✍️ವರದಿ: ಹರ್ಷ ಬಳ್ಳಮಂಜ

Related posts

ವಾಣಿಜ್ಯ ವಿಭಾಗದ ಅಂತರ್ ಕಾಲೇಜು ಸ್ಪರ್ಧೆ: ನಡ ಪದವಿ ಪೂರ್ವ ಕಾಲೇಜಿಗೆ ಬಹುಮಾನ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲೆಗೆ ನೆರಿಯ ಪೆಟ್ರೋ ನೆಟ್ ಸಂಸ್ಥೆಯಿಂದ ಡಿಜಿಟಲ್ ಪ್ರಾಜೆಕ್ಟರ್ ಹಸ್ತಾಂತರ

Suddi Udaya

ಉಜಿರೆ :ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ‘ಪೋಷಕರ ಸಭೆ ‘

Suddi Udaya

ಕೊಕ್ಕಡ: EduNest ಅಕಾಡೆಮಿ ಕೋಚಿಂಗ್ ಕೇಂದ್ರ ಉದ್ಘಾಟನೆ

Suddi Udaya

ಅರಸಿನಮಕ್ಕಿ: ಆಟೋ ಚಾಲಕ ಕೊರಗಪ್ಪ ಗೌಡ ನಿಧನ

Suddi Udaya

ರಾಜಕೇಸರಿ ಟ್ರಸ್ಟ್ ನಿಂದ ಸವಣಾಲು ಸ.ಹಿ.ಪ್ರಾ.ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ,ಪೆನ್ ವಿತರಣೆ

Suddi Udaya
error: Content is protected !!