July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಪರಿಸರದಲ್ಲಿ ಚಿರತೆ ಓಡಾಟ: ಗ್ರಾಮಸ್ಥರಲ್ಲಿ ಭಯದ ವಾತವರಣ

ಮಚ್ಚಿನ ಗ್ರಾಮದ ಅನಯನಕಾಡು, ಮುಡಿಪಿರೆ, ಕೈಲಾ ಕುರುಡಂಗೆ ಪರಿಸರದಲ್ಲಿ ಚಿರತೆ ತಿರುಗಾಡುತ್ತಿದ್ದು ಜನರು ಭಯಪಡುವಂತಾಗಿದೆ. ಸ್ಥಳೀಯರಾದ ಉದಯ ಇವರು ರಾತ್ರಿ 11ರ ಸಮಯ ಬೈಕಲ್ಲಿ ಸಂಚರಿಸುವ ವೇಳೆ ಅನಯನ ಕಾಡು ರಸ್ತೆಯಲ್ಲಿ ಚಿರತೆ ಎದುರು ಬಂದ ಘಟನೆ ಇತ್ತೀಚಿಗೆ ನಡೆದಿದೆ.

ಮುಡಿಪಿರೆ ಪರಿಸರದಲ್ಲಿ ದಿವಾಕರ ಹಾಗೂ ಇತರರಿಗೂ ಎದುರಾದ ಘಟನೆ ನಡೆದಿದೆ. ದೊಡ್ಡದಾದ ಚಿರತೆಯು ತಿರುಗಾಡುತ್ತಿದ್ದು ರಾತ್ರಿ ಹಾಗೂ ಮುಂಜಾನೆಯ ಮೇಲೆ ಜನರ ಎದುರು ಪ್ರತ್ಯಕ್ಷವಾಗುತ್ತಿದ್ದು ಜನರು ಸಂಚರಿಸಲು ಭಯಪಡುವಂತಾಗಿದೆ. ದಿನನಿತ್ಯ ರಸ್ತೆಯಲ್ಲಿ ಶಾಲಾ ಮಕ್ಕಳು ನಡೆದುಕೊಂಡು ಹೋಗುವ ಈ ರಸ್ತೆಯಲ್ಲಿ ಪೊದೆಗಳು ಮುತ್ತಿಕೊಂಡಿದ್ದು ಕಾಡು ಪ್ರಾಣಿಗಳು ಅವಿತಿದ್ದರು ಗೋಚರಿಸದಂತಾಗಿದೆ. ಈ ಚಿರತೆಯಿಂದ ದೊಡ್ಡ ಅನಾಹುತ ಆಗುವ ಮುನ್ನ ಗ್ರಾಮ ಪಂಚಾಯಿತಿ ಹಾಗೂ ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಒತ್ತಾಯವಾಗಿದೆ.
✍️ವರದಿ: ಹರ್ಷ ಬಳ್ಳಮಂಜ

Related posts

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ “ಸೌಭಾಗ್ಯ” ಲೋಕಾರ್ಪಣೆ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ: ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ

Suddi Udaya

ಧರ್ಮಸ್ಥಳ: ಉಚಿತ ಸಾಮೂಹಿಕ ವಿವಾಹದ ನೋಂದಣಿ ಕಛೇರಿ ಉದ್ಘಾಟನೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
error: Content is protected !!