25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮರ್ಹೂಮ್ ಅಝ್ರಿನ್ ಸಿದ್ದೀಕ್ ಇವರ ಸ್ಮರಣಾರ್ಥ ಬೃಹತ್ ರಕ್ತದಾನ ಶಿಬಿರ

ಬೆಳ್ತಂಗಡಿ: ಮರ್ಹೂಮ್ ಅಝ್ರಿನ್ ಸಿದ್ದೀಕ್ ಇವರ ಸ್ಮರಣಾರ್ಥದ ಭಾಗವಾಗಿ ಹಯಾತುಲ್ ಇಸ್ಲಾಂ ಮದರಸ ಬೀಟಿಗೆ ಹಾಗೂ ಮರ್ಹೂಂ ಹೈದರ್ ನಿರ್ಸಾಲ್ ಬ್ಲಡ್ ಡೋನರ್ಸ್ ಫಾರಂ ಹಾಗೂ ಬ್ಲಡ್ ಡೋನರ್ಸ್ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಯೇನಪೋಯ ಆಸ್ಪತ್ರೆ ಇವರ ಸಹಯೋಗದದೊಂದಿಗೆ ಬೃಹತ್ ರಕ್ತದಾನ ಶಿಬಿರ ಕಕ್ಕಿಂಜೆಯ ಮದರಸ ವಠಾರದಲ್ಲಿ ನಡೆಯಿತು.

ಅಹ್ಮದ್ ಕುಂಞಿ ಮುಸ್ಲಿಯಾರ್ ದುವಾ ಆಶೀರ್ವಾದದೊಂದಿಗೆ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಬ್ದುಲ್ ಖಾದರ್ (ಪುತ್ತು) ವಹಿಸಿದ್ದರು. ರಫೀಕ್ ಫೈಝಿ ಖತೀಬರು ಜಲಾಲಿಯನಗರ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ತೌಸೀಫ್ ಫೈಝಿ ಖತೀಬರು ಇಸ್ಲಾಂಬಾದ್ ಹಾಗೂ ಅಕ್ಬರ್ ಬೆಳ್ತಂಗಡಿ ಅಧ್ಯಕ್ಷರು ಎಸ್‌ಡಿಪಿಐ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ರಕ್ತದಾನ ಮಹತ್ವದ ಕುರಿತು ಮಾತುಗಳನ್ನಾಡಿದರು.

ವೇದಿಕೆಯಲ್ಲಿ ಸ್ವದಕತ್ ದಾರಿಮಿ ಕತ್ತರಿಗುಡ್ಡೆ, ಅಬೂಬಕ್ಕರ್ ಮುಸ್ಲಿಯಾರ್, ಉಮರ್ ಮುಸ್ಲಿಯಾರ್, ಹಾರಿಸ್ ಹನೀಫಿ, ಮುಸ್ತಫಾ ಜಿ. ಕೆ ಎಸ್‌ಡಿಪಿಐ ಬೆಂಬಲಿತ ಪಂಚಾಯತ್ ಸದಸ್ಯರು ಕುವೆಟ್ಟು, ಹಕೀಮ್ ಜಿಕೆ ಎಸ್.ವೈ.ಎಸ್ ಕಕ್ಕಿಂಜೆ, ಉಸ್ಮಾನ್ ಕಲ್ಲಡ್ಕ ಅಧ್ಯಕ್ಷರು ಎಸ್‌ಡಿಪಿಐ ಚಾರ್ಮಾಡಿ, ಇಸ್ಮಾಯಿಲ್ ಅಧ್ಯಕ್ಷರು ಮುಹಿಯುದ್ದೀನ್ ಜುಮಾ ಮಸೀದಿ ಕಕ್ಕಿಂಜೆ, ಇಸ್ಮಾಯಿಲ್ ಕೆ. ಗೌರವಾಧ್ಯಕ್ಷರು ಹಯಾತುಲ್ ಇಸ್ಲಾಂ ಮದರಸ ಬೀಟಿಗೆ, ಸಿದ್ದೀಕ್ ಯು. ಪಿ. ಸದಸ್ಯರು ಗ್ರಾಮ ಪಂಚಾಯತ್ ಚಾರ್ಮಾಡಿ, ಹಾಜಿ ಸುಲೈಮಾನ್ ಹೋಟೆಲ್ ಚಾರ್ಮಾಡಿ ಅಧ್ಯಕ್ಷರು ಓಎಒ ಇಸ್ಲಾಂಬಾಂದ್ ಚಾರ್ಮಾಡಿ, ಅಬ್ದುಲ್ ಖಾದರ್ (ಮೋನಾಕ) ಮಾಜಿ ಅಧ್ಯಕ್ಷರು MJM ಜಲಾಲಿಯ ನಗರ ಚಾರ್ಮಾಡಿ, ಡಾಕ್ಟರ್ಸ್ ಮತ್ತು ಸಿಬ್ಬಂದಿಗಳು ಯೆನೋಪೊಯಾ ಆಸ್ಪತ್ರೆ ಮಂಗಳೂರು, ಅಹಮ್ಮದ್ ಕುಂಞ ಮುಸ್ಲಿಯಾರ್ ಬೀಟಿಗೆ, ಪಕೀರಬ್ಬ ಯು.ಪಿ, ರಫೀಕ್ ಯು. ಪಿ. ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಅಶ್ರಫ್ ಚಾರ್ಮಾಡಿ ಕಾರ್ಯಕ್ರಮವನ್ನು ನಿರೂಪಿಸಿದರು.

ರಕ್ತದಾನ ಶಿಬಿರದಲ್ಲಿ ದಾನಿಗಳಿಂದ ಒಟ್ಟು ಎಪ್ಪತ್ತೈದು ಯುನಿಟ್ ರಕ್ತವನ್ನು ಸಂಗ್ರಹಿಸಲಾಯಿತು.

Related posts

ವಾಣಿ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಪ.ಪೂ. ಕಾಲೇಜುಗಳ ಯೋಗಾಸನ ಸ್ಪರ್ಧೆ

Suddi Udaya

ಬೆಳ್ತಂಗಡಿ: ಜೆಇಇ ಪರೀಕ್ಷೆಯಲ್ಲಿ ಎಕ್ಸಲೆಂಟ್ ಕಾಲೇಜು ಮೂಡಬಿದ್ರಿ ವಿದ್ಯಾರ್ಥಿ ಶಿಶಿರ್ ಹೆಚ್ ಶೆಟ್ಟಿ ಜಿಲ್ಲೆಗೆ ಪ್ರಥಮ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿ ಜನ್ಮ ಕಲ್ಯಾಣೋತ್ಸವ ಆಚರಣೆ

Suddi Udaya

ಉಡುಪಿ ಹಾಗೂ ದ.ಕ. ಜಿಲ್ಲಾ ಭಾರತೀಯ ಅರಸೇನಾಪಡೆಗಳ ಮಾಜಿ ಯೋಧರ ಸಂಘದ ವಾರ್ಷಿಕ ಸಭೆ, ಪ್ರತಿಭಾ ಪುರಸ್ಕಾರ, ಮಾಜಿ ಯೋಧರ ಕುಟುಂಬ ಸಮ್ಮಿಲನ ಹಾಗೂ ಮನೋರಂಜನಾ ಕಾರ್ಯಕ್ರಮ

Suddi Udaya

ಚಿನ್ನಯ್ಯ ಸಹೋದರಿ ಎಸ್.ಐ.ಟಿ ಕಚೇರಿಗೆ ಹಾಜರು

Suddi Udaya

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದ ವಿದ್ಯಾರ್ಥಿಗಳಿಂದ ಜಿಲ್ಲಾ ನ್ಯಾಯಾಲಯಕ್ಕೆ ಭೇಟಿ

Suddi Udaya
error: Content is protected !!