July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಕೊಕ್ಕಡ ಶಾಖೆಯು ಸ್ಥಳಾಂತರಗೊಂಡು ಉದ್ಘಾಟನೆ

ಕೊಕ್ಕಡ: ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ, ಉಜಿರೆ ಇದರ ಕೊಕ್ಕಡ ಶಾಖೆಯು ಶ್ರೀದೇವಿ ಕಾಂಪ್ಲೆಕ್ಸ್ ಗೆ ಸ್ಥಳಾಂತರಗೊಂಡು ಕಾರ್ಯನಿರ್ವಹಣೆ ಪ್ರಾರಂಭಿಸಿದೆ.

ಹೊಸ ಕಟ್ಟಡದಲ್ಲಿ ಶಾಖೆ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಬ್ಯಾಂಕ್ ಇದರ ನಿರ್ದೇಶಕರು ಮತ್ತು ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ ದೀಪ ಬೆಳಗಿಸಿ ನೆರವೇರಿಸಿ ಮಾತನಾಡಿ ರಬ್ಬರ್ ಬೆಳೆಗಾರರ ಹಿತಾಸಕ್ತಿಗಾಗಿ ಕಾರ್ಯನಿರ್ವಹಿಸುತ್ತಿರುವಂತಹ ಸಂಸ್ಥೆಯ ಶಾಖೆಯು ಉತ್ತಮವಾಗಿ ಕಾರ್ಯನಿರ್ವಹಿಸಿ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಕಟ್ಟಡದ ಮಾಲಿಕರಾದ ವಸಂತ ರಾವ್ ಇವರನ್ನು ಗೌರವಿಸಲಾಯಿತು. ರಬ್ಬರ್ ಸೊಸೈಟಿ ಅಧ್ಯಕ್ಷ ಶ್ರೀಧರ್ ಜಿ. ಭಿಡೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಉಪಾಧ್ಯಕ್ಷ ಅನಂತ ಭಟ್ ಎಂ ಇವರು ಅತಿಥಿಗಳನ್ನು ಸ್ವಾಗತಿಸಿದರು ಹಾಗೂ ಸಂಘದ ನಿರ್ದೇಶಕರುಗಳಾದ ಗ್ರೇಶಿಯನ್ ವೇಗಸ್, ಕೆ. ಬಾಲಕೃಷ್ಣ ಗೌಡ, ಹೆಚ್ ಪದ್ಮಗೌಡ, ಕೆ. ಜೆ. ಆಗಸ್ಟಿನ್, ಶ್ರೀ ರಾಮ ನಾಯ್ಕ್ , ಭೈರಪ್ಪ, ಹರೀಶ್ ರಾವ್, ಭರತ್ ಕುಮಾರ್ ಹೆಚ್. ಹಾಗೂ ಶಾಜಿ ಪಿ. ಎ. ಉಪಸ್ಥಿತರಿದ್ದರು.

ಶಾಖೆಯ ಪ್ರಬಂಧಕ ಸಂದೇಶ್ ಸಹಕರಿಸಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿಯವರು ಧನ್ಯವಾದ ಸಮರ್ಪಿಸಿದರು.

Related posts

ಫೆ.20-23: ಪಟ್ರಮೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಮತ್ತು ದೈವಗಳ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ – 7 ಸ್ಥಾನ, ಕಾಂಗ್ರೆಸ್ – 5 ಸ್ಥಾನ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಅನುಗ್ರಹ ಆಂ.ಮಾ. ಪ್ರೌಢ ಶಾಲೆಗೆ 96.42% ಫಲಿತಾಂಶ

Suddi Udaya

ಕಳಿಯ : ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಪೂರ್ವಭಾವಿ ಸಭೆ ಹಾಗೂ ಸಮಿತಿ ರಚನೆ

Suddi Udaya

ಇಂದಬೆಟ್ಟು: ಮೇರಿ ವರ್ಗಿಸ್ ನಿಧನ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!