22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಎಸ್.ಡಿ.ಎಂ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

ಧರ್ಮಸ್ಥಳ: ಧರ್ಮಸ್ಥಳದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ ವಾರ್ಷಿಕ ಪ್ರತಿಭಾ ದಿನಾಚರಣೆಯು ಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣದಲ್ಲಿ ಭವ್ಯವಾಗಿ ಮೂಡಿಬಂದಿತು.

ಸಮಾರಂಭವನ್ನು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಧನ್ಯ ಕುಮಾರ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಬಳಿಕ ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗಾಗಿ ಶಾಲೆಗಳಲ್ಲಿ ಶೈಕ್ಷಣಿಕ, ಸಾಂಸ್ಕೃತಿಕ ಹಾಗು ಕ್ರೀಡೆ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಮತ್ತು ಸ್ಪರ್ಧೆಗಳನ್ನು ಆಯೋಜಿಸಲಾಗುತ್ತದೆ. ಇದು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಿಸುವುದರ ಜೊತೆಗೆ ಭವಿಷ್ಯದಲ್ಲಿ ಪ್ರತಿಭಾವಂತರಾಗಿ ರೂಪಿಸುತ್ತದೆ. ಗುರು ಹಿರಿಯರು ಹಾಗೂ ಪೋಷಕರ ಪ್ರೋತ್ಸಾಹ ಮತ್ತು ಮಾರ್ಗದರ್ಶನವನ್ನು ಸಕರಾತ್ಮಕವಾಗಿ ಅಳವಡಿಸಿಕೊಂಡರೆ ಈ ದಿನದ ಪ್ರತಿಭೆಗಳು ಇನ್ನಷ್ಟು ಉನ್ನತ ಮಟ್ಟದಲ್ಲಿ ಬೆಳಗಬಹುದು ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಕಳೆದ ಸಾಲಿನ ವಾರ್ಷಿಕ ಎಸ್. ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಕುಣಿತ ಜಾನಪದ ಗೀತೆ, ನೃತ್ಯ, ಕುಣಿತ ಭಜನೆ, ಹುಲಿ ಕುಣಿತ, ಯಕ್ಷಗಾನ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಕಾರ್ಯಕ್ರಮವನ್ನು ಧರ್ಮಸ್ಥಳದ ಹೇಮಾವತಿ ವಿ. ಹೆಗ್ಗಡೆ ವೀಕ್ಷಿಸಿ ವಿದ್ಯಾರ್ಥಿಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ವೇದಿಕೆಯಲ್ಲಿ ಶಾಲೆಯ ಸಂಚಾಲಕರಾದ ಅನಂತ ಪದ್ಮನಾಭ ಭಟ್, ಮುಖ್ಯ ಶಿಕ್ಷಕಿ ಜಯ ಶ್ರೀ ಜೈನ್ ಸೇರಿದಂತೆ ಇತರೆ ಪ್ರಮುಖರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಪೋಷಕರು, ಸೇರಿದಂತೆ ಶಿಕ್ಷಕರು ಭಾಗಿಯಾಗಿದ್ದರು. ಕಾರ್ಯಕ್ರಮವನ್ನು ಅಧ್ಯಾಪಕರಾದ ಯುವರಾಜ್ ನಿರೂಪಿಸಿ , ವಂದಿಸಿದರು.

‘ಮಂಜುಳಾ’ ಹಸ್ತಪ್ರತಿ ಬಿಡುಗಡೆ, ಸನ್ಮಾನ :
ಸಮಾರಂಭದಲ್ಲಿ ವಾರ್ಷಿಕ ಶೈಕ್ಷಣಿಕ ಚಟುವಟಿಕೆಗಳ ವರದಿ ಸೇರಿದಂತೆ ವಿದ್ಯಾರ್ಥಿಗಳಿಂದ ವಿರಚಿತವಾದ ಕಥೆ,ಕವನ, ಚಿತ್ರ ಕಥೆ, ಲೇಖನಗಳಿಂದ ವಿಶೇಷವಾಗಿ ತಯಾರಿಸಿದ ಮಂಜುಳಾ ಹಸ್ತ ಪ್ರತಿಯನ್ನು ಡಾ. ಹೇಮಾವತಿ ವಿ. ಹೆಗ್ಗಡೆಯವರು ಬಿಡುಗಡೆಗೊಳಿಸಿದರು. ಇದೇ ಸಂದರ್ಭದಲ್ಲಿ ಶಾಲೆಯ ಬೆಸ್ಟ್ ಔಟ್ ಗೋಯಿಂಗ್ ವಿದ್ಯಾರ್ಥಿನಿ ಪಂಚಮಿ ಯವರಿಗೆ ಪ್ರಶಸ್ತಿ ಪ್ರಧಾನ ಮಾಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿ ಕ್ಷೇಮ ಪಾಲನ ಅಧಿಕಾರಿ ಧನ್ಯ ಕುಮಾರ್, ಶಾಲೆಯ ಮುಖ್ಯಸ್ಥೆ ಜಯ ಶ್ರೀ ಜೈನ್ ಸೇರಿದಂತೆ ಇತರೆ ಅಧ್ಯಾಪಕರು ಉಪಸ್ಥಿತರಿದ್ದರು.

Related posts

ಕಳಿಯ ಗ್ರಾ.ಪಂ. ಆಡಳಿತ ಮಂಡಳಿಯಿಂದ ಜಿಲ್ಲಾಧಿಕಾರಿ ಭೇಟಿ, ಪಂಚಾಯತ್ ವ್ಯಾಪ್ತಿಯಲ್ಲಿ ಜಾಗ ಗುರುತಿಸುವಿಕೆಗಾಗಿ ಮನವಿ ಸಲ್ಲಿಕೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ದೇಶ ಸಹಕಾರಿ ಸಂಘಕ್ಕೆ ತೆಲಂಗಾಣ ಸರಕಾರದ ಸಚಿವ ಪೊನ್ನಂ ಪ್ರಭಾಕರ್ ಭೇಟಿ

Suddi Udaya

ನ.7 ರಂದು ಚುನಾಯಿತ ಸದಸ್ಯರ ಅಧಿಕಾರಾವಧಿ ಮುಗಿಯಲಿರುವ ಬೆಳ್ತಂಗಡಿ ಪಟ್ಟಣ ಪಂಚಾಯತ್‌ ಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡದಂತೆ ರಾಜ್ಯ ಹೈಕೋರ್ಟ್ ಮಧ್ಯಂತರ ತಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮುದಾಯ ಅಭಿವೃದ್ಧಿ ವಿಭಾಗ 507 ಶಾಲೆಗಳಿಗೆ ರೂ. 2.75 ಕೋಟಿ ಮೊತ್ತದ 4,044 ಜೊತೆ ಡೆಸ್ಕ್ -ಬೆಂಚ್ ವಿತರಣೆ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಡಿ.10: ಬೆಳಾಲು ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಕಾರ್ಯಕ್ರಮ

Suddi Udaya

ಲೇಡಿ ಜೆಸಿ ಮತ್ತು ಜೂನಿಯರ್ ಸಮ್ಮೇಳನ: ಜೆಸಿಐ ಉಜಿರೆ ಸಿಟಿ ಘಟಕಕ್ಕೆ ವಲಯದ ಅತ್ಯುತ್ತಮ ಲೇಡಿ ಜೆಸಿ ವಿಂಗ್ ರನ್ನರ್ ಅಪ್ ಪ್ರತಿಷ್ಠಿತ ಪ್ರಶಸ್ತಿಯೊಂದಿಗೆ ಹಲವು ಗೌರವ ಮನ್ನಣೆಗಳು

Suddi Udaya
error: Content is protected !!