July 23, 2026
ಅಪರಾಧ ಸುದ್ದಿ

ಪತ್ರಕರ್ತನಿಗೆ ಜೀವ ಬೆದರಿಕೆ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಖಂಡನೆ,-ಕ್ರಮಕ್ಕೆ ಆಗ್ರಹ

ಬೆಳ್ತಂಗಡಿ: ವರದಿ ಮಾಡಿದ್ದನ್ನೆ ನೆಪವಾಗಿರಿಸಿಕೊಂಡು ಪತ್ರಕರ್ತರೊಬ್ಬರಿಗೆ ಜೀವ ಬೆದರಿಕೆ ಹಾಕಿದ ಘಟನೆ ಕಳಿಯ ಗ್ರಾಮದ ನಾಳ ಎಂಬಲ್ಲಿ ಡಿ 03 ನಡೆದಿದೆ.

ಮಡಂತ್ಯಾರು ವಲಯದ ಉದಯವಾಣಿ ವರದಿಗಾರ ಕೆ.ಎನ್.ಗೌಡ ಎಂಬವರು ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಡಿಸೆಂಬರ್ 3 ರಂದು ವ್ಯವಸ್ಥಾಪನಾ ಸಮಿತಿ ಹಾಗೂ ಗ್ರಾಮಸ್ಥರ ಸಭೆ ನಡೆದಿದ್ದು, ಈ ವೇಳೆ ವ್ಯವಸ್ಥಾಪನಾ ಸಮಿತಿಯ ಕಾರ್ಯ ವೈಖರಿ ಬಗ್ಗೆ ಕೆಲವರು ಅಸಾಮಾಧಾನ ಹೊರಹಾಕಿದ್ದರು.‌ಈ ಬಗ್ಗೆ ವರದಿ ಮಾಡಿದ ಹಿನ್ನೆಲೆಯಲ್ಲಿ ಹರೀಶ್ ಎಂಬವರು ಪೋನ್ ಮೂಲಕ ಕಾಲರ್ ಪಟ್ಟಿ ಹಿಡಿದು ಎಳೆಯುತ್ತೆನೆ ಎಂದಿದ್ದಲ್ಲದೇ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಬೆಳ್ತಂಗಡಿ ಪತ್ರಕರ್ತರ ಸಂಘ ಖಂಡನೆ,ಕ್ರಮಕ್ಕೆ ಆಗ್ರಹ:

ಪತ್ರಕರ್ತನಿಗೆ ಜೀವ ಬೆದರಿಕೆ ಒಡ್ಡಿರುವ ಬಗ್ಗೆ ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಖಂಡನೆ ವ್ಯಕ್ತಪಡಿಸಿದೆಯಲ್ಲದೆ, ಈಗಾಗಲೇ ಬೆಳ್ತಂಗಡಿ ಠಾಣೆಗೆ ದೂರು ನೀಡಲಾಗಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು, ಎಂದು ಆಗ್ರಹಿಸಿದೆ.

Related posts

ಬೆಳ್ತಂಗಡಿ : ಕೊಯ್ಯೂರಿನಲ್ಲಿ ಕಾರ್ಮಿಕನ ಮೇಲೆ ಹಲ್ಲೆ ಪ್ರಕರಣ ಆರೋಪಿ ಉಜ್ಜಲ್ ಗೌಡನಿಗೆ ಜಾಮೀನು ಮಂಜೂರು

Suddi Udaya

ಮುಗೇರಡ್ಕ ನೇತ್ರಾವತಿ ನದಿಯ ಪಂಪ್ ಹೌಸ್ ಬಳಿ ಬಲೆ ಬಿಟ್ಟು ಮೀನು ಹಿಡಿಯಲು ಹೋದ ಯುವಕ ನೀರು ಪಾಲು: ಶವ ಪತ್ತೆ

Suddi Udaya

ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಅಪರಿಚಿತ ಮೃತದೇಹ ಪತ್ತೆ

Suddi Udaya

ಮೈಸೂರಿನಲ್ಲಿ ನಾಪತ್ತೆಯಾಗಿದ್ದ ಸ್ಕೂಟರ್ ಉಜಿರೆಯಲ್ಲಿ ಪತ್ತೆ: ಬೆಳ್ತಂಗಡಿ ಸಂಚಾರಿ ಪೊಲೀಸರಿಂದ ಸ್ಕೂಟರ್ ಪತ್ತೆ ಹಚ್ಚಿ ಮಾಲೀಕರಿಗೆ ಹಸ್ತಾಂತರ

Suddi Udaya

ಮುಂಡಾಜೆ ಸೀಟು ಬಳಿ ಬೊಲೇರೋ ಬೈಕ್ ಗೆ ಡಿಕ್ಕಿ : ಶಾಲಾ ಬಾಲಕಿ ಆಸ್ಪತ್ರೆಯಲ್ಲಿ ಮೃತ್ಯು

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಕ್ರಮಕ್ಕೆ ವೇಣೂರು ಪೊಲೀಸ್ ಠಾಣೆಗೆ ಮನವಿ

Suddi Udaya
error: Content is protected !!