25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿ

ಪತ್ರಕರ್ತನಿಗೆ ಜೀವ ಬೆದರಿಕೆ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಖಂಡನೆ,-ಕ್ರಮಕ್ಕೆ ಆಗ್ರಹ

ಬೆಳ್ತಂಗಡಿ: ವರದಿ ಮಾಡಿದ್ದನ್ನೆ ನೆಪವಾಗಿರಿಸಿಕೊಂಡು ಪತ್ರಕರ್ತರೊಬ್ಬರಿಗೆ ಜೀವ ಬೆದರಿಕೆ ಹಾಕಿದ ಘಟನೆ ಕಳಿಯ ಗ್ರಾಮದ ನಾಳ ಎಂಬಲ್ಲಿ ಡಿ 03 ನಡೆದಿದೆ.

ಮಡಂತ್ಯಾರು ವಲಯದ ಉದಯವಾಣಿ ವರದಿಗಾರ ಕೆ.ಎನ್.ಗೌಡ ಎಂಬವರು ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಡಿಸೆಂಬರ್ 3 ರಂದು ವ್ಯವಸ್ಥಾಪನಾ ಸಮಿತಿ ಹಾಗೂ ಗ್ರಾಮಸ್ಥರ ಸಭೆ ನಡೆದಿದ್ದು, ಈ ವೇಳೆ ವ್ಯವಸ್ಥಾಪನಾ ಸಮಿತಿಯ ಕಾರ್ಯ ವೈಖರಿ ಬಗ್ಗೆ ಕೆಲವರು ಅಸಾಮಾಧಾನ ಹೊರಹಾಕಿದ್ದರು.‌ಈ ಬಗ್ಗೆ ವರದಿ ಮಾಡಿದ ಹಿನ್ನೆಲೆಯಲ್ಲಿ ಹರೀಶ್ ಎಂಬವರು ಪೋನ್ ಮೂಲಕ ಕಾಲರ್ ಪಟ್ಟಿ ಹಿಡಿದು ಎಳೆಯುತ್ತೆನೆ ಎಂದಿದ್ದಲ್ಲದೇ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಬೆಳ್ತಂಗಡಿ ಪತ್ರಕರ್ತರ ಸಂಘ ಖಂಡನೆ,ಕ್ರಮಕ್ಕೆ ಆಗ್ರಹ:

ಪತ್ರಕರ್ತನಿಗೆ ಜೀವ ಬೆದರಿಕೆ ಒಡ್ಡಿರುವ ಬಗ್ಗೆ ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಖಂಡನೆ ವ್ಯಕ್ತಪಡಿಸಿದೆಯಲ್ಲದೆ, ಈಗಾಗಲೇ ಬೆಳ್ತಂಗಡಿ ಠಾಣೆಗೆ ದೂರು ನೀಡಲಾಗಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು, ಎಂದು ಆಗ್ರಹಿಸಿದೆ.

Related posts

ಪಿಕಪ್ ವಾಹನ ಮತ್ತು ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಆಸ್ಪತ್ರೆಯಲ್ಲಿ ಮೃತ್ಯು

Suddi Udaya

ಪಿಲ್ಯ: ಕೋಳಿ ಅಂಕಕ್ಕೆ ವೇಣೂರು ಪೊಲೀಸರ ದಾಳಿ : ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳ ವಶ

Suddi Udaya

ಅಕ್ರಮ ಕಸಾಯಿಖಾನೆಗೆ ಬೆಳ್ತಂಗಡಿ ಪೊಲೀಸ್ ದಾಳಿ: ದನದ ಮಾಂಸ ಹಾಗೂ ಇಬ್ಬರು ಆರೋಪಿಗಳ ಬಂಧನ

Suddi Udaya

ಚಾರ್ಮಾಡಿಯಲ್ಲಿ ಮತದಾನ ವಿಳಂಬ : ಡಿ ಮಸ್ಟರಿಂಗ್ ಕೇಂದ್ರ ಕ್ಕೆ ಹೊರಟ ವಾಹನ ತಡೆಗಟ್ಟಿದ ಜನರ‌ ಮೇಲೆ ಪೊಲೀಸರ ಲಾಠಿಚಾರ್ಜ್ : ಹಲವಾರು ಮಂದಿಗೆ ಗಾಯ

Suddi Udaya

ಕೊಕ್ಕಡ: ಮನೆಯಲ್ಲಿಟ್ಟ ಚಿನ್ನಾಭರಣ ಕಳ್ಳತನ

Suddi Udaya

ಕನ್ಯಾಡಿ ಲಾಡ್ಜ್ ನಲ್ಲಿ ಅಕ್ರಮ ಜೂಜಾಟ: ಧರ್ಮಸ್ಥಳ ಪೊಲೀಸರಿಂದ ದಾಳಿ: 11 ಮಂದಿಯ ಬಂಧನ ; ರೂ.3 ಲಕ್ಷ ನಗದು ವಶ

Suddi Udaya
error: Content is protected !!