ಅಪರಾಧ ಸುದ್ದಿ

ಪತ್ರಕರ್ತನಿಗೆ ಜೀವ ಬೆದರಿಕೆ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಖಂಡನೆ,-ಕ್ರಮಕ್ಕೆ ಆಗ್ರಹ

ಬೆಳ್ತಂಗಡಿ: ವರದಿ ಮಾಡಿದ್ದನ್ನೆ ನೆಪವಾಗಿರಿಸಿಕೊಂಡು ಪತ್ರಕರ್ತರೊಬ್ಬರಿಗೆ ಜೀವ ಬೆದರಿಕೆ ಹಾಕಿದ ಘಟನೆ ಕಳಿಯ ಗ್ರಾಮದ ನಾಳ ಎಂಬಲ್ಲಿ ಡಿ 03 ನಡೆದಿದೆ.

ಮಡಂತ್ಯಾರು ವಲಯದ ಉದಯವಾಣಿ ವರದಿಗಾರ ಕೆ.ಎನ್.ಗೌಡ ಎಂಬವರು ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಡಿಸೆಂಬರ್ 3 ರಂದು ವ್ಯವಸ್ಥಾಪನಾ ಸಮಿತಿ ಹಾಗೂ ಗ್ರಾಮಸ್ಥರ ಸಭೆ ನಡೆದಿದ್ದು, ಈ ವೇಳೆ ವ್ಯವಸ್ಥಾಪನಾ ಸಮಿತಿಯ ಕಾರ್ಯ ವೈಖರಿ ಬಗ್ಗೆ ಕೆಲವರು ಅಸಾಮಾಧಾನ ಹೊರಹಾಕಿದ್ದರು.‌ಈ ಬಗ್ಗೆ ವರದಿ ಮಾಡಿದ ಹಿನ್ನೆಲೆಯಲ್ಲಿ ಹರೀಶ್ ಎಂಬವರು ಪೋನ್ ಮೂಲಕ ಕಾಲರ್ ಪಟ್ಟಿ ಹಿಡಿದು ಎಳೆಯುತ್ತೆನೆ ಎಂದಿದ್ದಲ್ಲದೇ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಬೆಳ್ತಂಗಡಿ ಪತ್ರಕರ್ತರ ಸಂಘ ಖಂಡನೆ,ಕ್ರಮಕ್ಕೆ ಆಗ್ರಹ:

ಪತ್ರಕರ್ತನಿಗೆ ಜೀವ ಬೆದರಿಕೆ ಒಡ್ಡಿರುವ ಬಗ್ಗೆ ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಖಂಡನೆ ವ್ಯಕ್ತಪಡಿಸಿದೆಯಲ್ಲದೆ, ಈಗಾಗಲೇ ಬೆಳ್ತಂಗಡಿ ಠಾಣೆಗೆ ದೂರು ನೀಡಲಾಗಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು, ಎಂದು ಆಗ್ರಹಿಸಿದೆ.

Related posts

ಪುದುವೆಟ್ಟು: ಹೊಳೆಗೆ‌ ಸ್ನಾನಕ್ಕೆ ಹೋದ ವ್ಯಕ್ತಿ ನಾಪತ್ತೆ

Suddi Udaya

ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ 4ನೇ ಗುರುತು ಮಾಡಿದ ಸ್ಥಳದಲ್ಲಿ ಸಿಗದ ಕಳೇಬರಗಳು ಇಂದಿನ ಕಾರ್ಯಾಚರಣೆ ಅಂತ್ಯ

Suddi Udaya

ಬಂಗ್ಲೆಗುಡ್ಡೆಯಲ್ಲಿ ಎರಡನೇ ದಿನದ ಕಾಯಾ೯ಚರಣೆ: ಎರಡು ಶವದ ಅವಶೇಷಗಳು ಪತ್ತೆ

Suddi Udaya

ಹಾಡು ಹಗಲೇ ಲಾಯಿಲದ ದೇಜಪ್ಪರ ಮನೆಗೆ ನುಗ್ಗಿದ ಕಳ್ಳರು: ರೂ.20 ಸಾವಿರ ನಗದು ಸಹಿತ ರೂ.40 ಸಾವಿರ ಮೌಲ್ಯದ ಚಿನ್ನಾಭರಣ ಕಳವು

Suddi Udaya

ವೇಣೂರು: ಪಲ್ಗುಣಿ ನದಿಯಿಂದ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಪಿಕಪ್‌ ವಾಹನ ವಶ

Suddi Udaya

ಇಂದಬೆಟ್ಟು: ಅತಿಕ್ರಮಣ ತೆರವುಗೊಳಿಸಲು ತಹಶೀಲ್ದಾರ್ ಮಾಡಿದ ಪ್ರಕ್ರಿಯೆಯನ್ನು ರದ್ದುಗೊಳಿಸಿದ ಹೈಕೋರ್ಟು

Suddi Udaya
error: Content is protected !!