25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪದವಿಪೂರ್ವ ಕಾಲೇಜುಗಳ ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ : ಉಜಿರೆ ಎಸ್ ಡಿ ಎಮ್ ಪದವಿ ಪೂರ್ವ ಕಾಲೇಜಿನ ಮೂರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಉಜಿರೆ: ಸಾರ್ವಜನಿಕ ಶಿಕ್ಷಣ ಇಲಾಖೆ (ಪದವಿ ಪೂರ್ವ) ಇವರು ಉಡುಪಿಯ ಪೂರ್ಣಪ್ರಜ್ಞಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆಸಿದ ಮೈಸೂರು ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಬಹುಮಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಪ್ರಥಮ ಪಿಯುಸಿ ವಿಭಾಗದ ಪೆನ್ಸಿಲ್ ಸ್ಕೆಚ್ ಸ್ಪರ್ಧೆಯಲ್ಲಿ ಸಾತ್ವಿಕ್ ಭಟ್ ಪ್ರಥಮ ಸ್ಥಾನ, ದ್ವಿತೀಯ ಪಿಯುಸಿ ವಿಭಾಗದ ಪೆನ್ಸಿಲ್ ಸ್ಕೆಚ್ ಸ್ಪರ್ಧೆಯಲ್ಲಿ ಪ್ರೀತಮ್ ಶೆಟ್ಟಿಗಾರ್ ತೃತೀಯ ಸ್ಥಾನ,ಏಕ ಪಾತ್ರಾಭಿನಯ ಸ್ಪರ್ಧೆಯಲ್ಲಿ ಹಂಸಿನಿ ಭಿಡೆ ತೃತೀಯ ಸ್ಥಾನ ಪಡೆದು ತುಮಕೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕಯಾಗಿದ್ದಾರೆ.

ವಿದ್ಯಾರ್ಥಿಗಳ ಸಾಧನೆಯನ್ನು ಸಂಸ್ಥೆಯ ಕಾರ್ಯದರ್ಶಿಗಳಾದ ಡಾ.ಸತೀಶ್ಚಂದ್ರ ಎಸ್, ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಬಿ, ಉಪ ಪ್ರಾಂಶುಪಾಲರಾದ ರಾಜೇಶ್ ಬಿ, ಸಾಂಸ್ಕೃತಿಕ ಸಮಿತಿಯ ಸಂಯೋಜಕರಾದ ನಾಗರಾಜ್ ಬಿ. ಅಭಿನಂದಿಸಿದ್ದಾರೆ. ಉಪನ್ಯಾಸಕಿಯರಾದ ಶ್ರೀಮತಿ ಅಮೃತಾ ಎನ್, ಶ್ರೀಮತಿ ಸುಚೇತಾ, ಶ್ರೀಮತಿ ಅಂಬಿಕಾ ಹಾಗು ಸಾಂಸ್ಕೃತಿಕ ಸಮಿತಿಯ ಉಪನ್ಯಾಸಕರು ವಿದ್ಯಾರ್ಥಿಗಳಿಗೆ ತರಭೇತಿ ನೀಡಿದ್ದರು.

Related posts

ಎ.15: ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ ಪ್ರಯುಕ್ತ `ಏಕಾಹ ಭಜನಾ ಕಾರ್ಯಕ್ರಮ ಮತ್ತು ಭಜನಾ ಕಮ್ಮಟೋತ್ಸವ

Suddi Udaya

ಪಟ್ರಮೆ: ಅನಾರು ನಿವಾಸಿ ಶ್ರೀಮತಿ ದೇವಕಿ ನಿಧನ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನೂತನ ಕಟ್ಟಡ ಉದ್ಘಾಟನೆ

Suddi Udaya

ನಡ, ಮಡಂತ್ಯಾರು ಮತ್ತು ಕಲ್ಲೇರಿಯಲ್ಲಿ ಹರೀಶ್ ಪೂಂಜರ ಬಹಿರಂಗ ಪ್ರಚಾರ ಸಭೆ

Suddi Udaya

ಟ್ರೆಕ್ಕಿಂಗ್ ಗೆ ಬಂದು ದಾರಿ ತಪ್ಪಿದ ಬೆಂಗಳೂರಿನ ಯುವಕ ಕಾಡಿನಲ್ಲಿ ಪತ್ತೆ

Suddi Udaya
error: Content is protected !!