22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪದವಿಪೂರ್ವ ಕಾಲೇಜುಗಳ ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ : ಉಜಿರೆ ಎಸ್ ಡಿ ಎಮ್ ಪದವಿ ಪೂರ್ವ ಕಾಲೇಜಿನ ಮೂರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಉಜಿರೆ: ಸಾರ್ವಜನಿಕ ಶಿಕ್ಷಣ ಇಲಾಖೆ (ಪದವಿ ಪೂರ್ವ) ಇವರು ಉಡುಪಿಯ ಪೂರ್ಣಪ್ರಜ್ಞಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆಸಿದ ಮೈಸೂರು ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಬಹುಮಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಪ್ರಥಮ ಪಿಯುಸಿ ವಿಭಾಗದ ಪೆನ್ಸಿಲ್ ಸ್ಕೆಚ್ ಸ್ಪರ್ಧೆಯಲ್ಲಿ ಸಾತ್ವಿಕ್ ಭಟ್ ಪ್ರಥಮ ಸ್ಥಾನ, ದ್ವಿತೀಯ ಪಿಯುಸಿ ವಿಭಾಗದ ಪೆನ್ಸಿಲ್ ಸ್ಕೆಚ್ ಸ್ಪರ್ಧೆಯಲ್ಲಿ ಪ್ರೀತಮ್ ಶೆಟ್ಟಿಗಾರ್ ತೃತೀಯ ಸ್ಥಾನ,ಏಕ ಪಾತ್ರಾಭಿನಯ ಸ್ಪರ್ಧೆಯಲ್ಲಿ ಹಂಸಿನಿ ಭಿಡೆ ತೃತೀಯ ಸ್ಥಾನ ಪಡೆದು ತುಮಕೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕಯಾಗಿದ್ದಾರೆ.

ವಿದ್ಯಾರ್ಥಿಗಳ ಸಾಧನೆಯನ್ನು ಸಂಸ್ಥೆಯ ಕಾರ್ಯದರ್ಶಿಗಳಾದ ಡಾ.ಸತೀಶ್ಚಂದ್ರ ಎಸ್, ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಬಿ, ಉಪ ಪ್ರಾಂಶುಪಾಲರಾದ ರಾಜೇಶ್ ಬಿ, ಸಾಂಸ್ಕೃತಿಕ ಸಮಿತಿಯ ಸಂಯೋಜಕರಾದ ನಾಗರಾಜ್ ಬಿ. ಅಭಿನಂದಿಸಿದ್ದಾರೆ. ಉಪನ್ಯಾಸಕಿಯರಾದ ಶ್ರೀಮತಿ ಅಮೃತಾ ಎನ್, ಶ್ರೀಮತಿ ಸುಚೇತಾ, ಶ್ರೀಮತಿ ಅಂಬಿಕಾ ಹಾಗು ಸಾಂಸ್ಕೃತಿಕ ಸಮಿತಿಯ ಉಪನ್ಯಾಸಕರು ವಿದ್ಯಾರ್ಥಿಗಳಿಗೆ ತರಭೇತಿ ನೀಡಿದ್ದರು.

Related posts

ಧರ್ಮಸ್ಥಳ ಪ್ರಕರಣ ಎಸ್.ಐ.ಟಿ ತನಿಖೆ ಪೂರ್ಣಗೊಂಡಿಲ್ಲ: ಪ್ರಣವ್ ಮೊಹಂತಿ

Suddi Udaya

ಬೆದ್ರಬೆಟ್ಟು ಅರ್ರಿಫಾಯ್ಯಾ ಮಸೀದಿಯಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ

Suddi Udaya

ಮಾಜಿ ಶಾಸಕ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ನಿಂದ ನಾಳೆ ಅಂಗಡಿ ಮುಂಗಟ್ಟು ಬಂದ್ ಮಾಡಿ ಶ್ರದ್ಧಾಂಜಲಿ ಅರ್ಪಣೆ

Suddi Udaya

ಸುನ್ನೀ ಜಂ-ಇಯ್ಯತುಲ್ ಮುಅಲ್ಲಿಮೀನ್ ಎಸ್.ಜೆ ಎಮ್ ಮುರ ರೇಂಜ್-324 ವಾರ್ಷಿಕ ಮಹಾಸಭೆ

Suddi Udaya

ಗೇರುಕಟ್ಟೆ ಕುಳಾಯಿ ಶ್ರೀ ಮಹಮ್ಮಾಯಿ ದೇವರಿಗೆ ಗೋಂದಲ ಪೂಜೆ

Suddi Udaya

ಮಡಂತ್ಯಾರು : ಕುಕ್ಕಳದಲ್ಲಿ ಅಪಾಯದಂಚಿನಲ್ಲಿರುವ ವಿದ್ಯುತ್ ಕಂಬ

Suddi Udaya
error: Content is protected !!