September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಮಾಸಿಕ ಆರೋಗ್ಯ ಜಾಗೃತಿ

ಪುಂಜಾಲಕಟ್ಟೆ: ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ ) , ಉಜಿರೆ ಮತ್ತು ಗ್ರಾಮ ಪಂಚಾಯತ್ ಮಡಂತ್ಯಾರು ಇದರ ಸಹಯೋಗದೊಂದಿಗೆ ಮಾಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮ ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಅನಿತಾ ಬರೆಟ್ಟೋ ಮಾತನಾಡಿ, ಹೆಣ್ಣು ಮಕ್ಕಳು ಪ್ರೌಢಾವಸ್ಥೆಯ‌ ಸಮಯದಲ್ಲಿ ದೈಹಿಕವಾಗಿ ಹಾಗೂ ಮಾನಸಿಕವಾಗಿ ತಮ್ಮಲ್ಲಿ ಬದಲಾವಣೆಯಾದಾಗ ವಿಚಲಿತ ರಾಗದೆ ತಮ್ಮ ಆರೋಗ್ಯದ ಬಗ್ಗೆ ಗಮನ ಹರಿಸುವುದು ಉತ್ತಮ ಎಂದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಡಾ . ಭಾಷಿಣಿ (BNYS) ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ ಉಜಿರೆ, ಇವರು ಮಾತನಾಡಿ ಮುಟ್ಟಿನ ಸಮಯದಲ್ಲಿ ಆರೋಗ್ಯದ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯ ಇದು ನೈಸರ್ಗಿಕವಾಗಿ ಹೆಣ್ಣು ಮಕ್ಕಳಲ್ಲಿ ಆಗುವ ಪ್ರಕ್ರಿಯೆ ನಾಚಿಕೆ ಪಡುವ ವಿಷಯವಲ್ಲ ಇದರ ಬಗ್ಗೆ ಮುಕ್ತವಾಗಿ ಮಾತನಾಡಬಹುದು ಎಂದು ಇಂದು ಅಭಿಪ್ರಾಯ ಪಟ್ಟರು.
ಹಾಗೂ ಪೌಷ್ಟಿಕ ಆಹಾರ ಸೇವನೆ, ಯೋಗ ಇತ್ಯಾದಿಗಳನ್ನು ಮಾಡುವುದರಿಂದ ತೀವ್ರ ಹೊಟ್ಟೆ ನೋವನ್ನು ತಡೆಗಟ್ಟಬಹುದು ಎಂದು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು.

ಕಾರ್ಯಕ್ರಮದಲ್ಲಿ ಡಾ. ಭಾಷಿಣಿ ಅವರಿಗೆ ಕಿರು ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.

ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳಾದ ಸೌಮ್ಯ ಸ್ವಾಗತಿಸಿದರು, ಚರಿಷ್ಮಾ ವಂದಿಸಿದರು. ಉಷಾ ಕಾರ್ಯಕ್ರಮ ನಿರೂಪಿಸಿದರು.

Related posts

ಹೊಸಂಗಡಿ: ಇಂದಿರಾ ‘ಗಾಂಧಿ ವಸತಿ ಶಾಲೆಯಲ್ಲಿ ಔಷಧೀಯ ವನ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

Suddi Udaya

ರೂ.2.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕೊಕ್ರಾಡಿ ಪ್ರೌಢಶಾಲೆ- ಕಾಲೇಜಿನ ನೂತನ ಕೊಠಡಿಗಳ ಉದ್ಘಾಟನೆ

Suddi Udaya

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಮಂಗಳೂರು ಶಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವೆಂಕಟೇಶ್ ವೈ ಆಯ್ಕೆ

Suddi Udaya

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಗಣಿತಶಾಸ್ತ್ರ ಕಾರ್ಯಾಗಾರ

Suddi Udaya

ಭೀಕರ ಗಾಳಿ ಮಳೆ: ಕುವೆಟ್ಟು ವರಕಬೆ ಬಳಿ ರಸ್ತೆಗೆ ಬಿದ್ದ ಮರ: ಸಂಚಾರಕ್ಕೆ ಅಡಚಣೆ

Suddi Udaya

ಧರ್ಮಸ್ಥಳ: ವಿಜಯ ಕ್ರೆಡಿಟ್ ಸೊಸೈಟಿಗೆ ಡಿ. ಹರ್ಷೇಂದ್ರ ಕುಮಾರ್ ಭೇಟಿ

Suddi Udaya
error: Content is protected !!