23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಮಾಸಿಕ ಆರೋಗ್ಯ ಜಾಗೃತಿ

ಪುಂಜಾಲಕಟ್ಟೆ: ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ ) , ಉಜಿರೆ ಮತ್ತು ಗ್ರಾಮ ಪಂಚಾಯತ್ ಮಡಂತ್ಯಾರು ಇದರ ಸಹಯೋಗದೊಂದಿಗೆ ಮಾಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮ ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಅನಿತಾ ಬರೆಟ್ಟೋ ಮಾತನಾಡಿ, ಹೆಣ್ಣು ಮಕ್ಕಳು ಪ್ರೌಢಾವಸ್ಥೆಯ‌ ಸಮಯದಲ್ಲಿ ದೈಹಿಕವಾಗಿ ಹಾಗೂ ಮಾನಸಿಕವಾಗಿ ತಮ್ಮಲ್ಲಿ ಬದಲಾವಣೆಯಾದಾಗ ವಿಚಲಿತ ರಾಗದೆ ತಮ್ಮ ಆರೋಗ್ಯದ ಬಗ್ಗೆ ಗಮನ ಹರಿಸುವುದು ಉತ್ತಮ ಎಂದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಡಾ . ಭಾಷಿಣಿ (BNYS) ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ ಉಜಿರೆ, ಇವರು ಮಾತನಾಡಿ ಮುಟ್ಟಿನ ಸಮಯದಲ್ಲಿ ಆರೋಗ್ಯದ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯ ಇದು ನೈಸರ್ಗಿಕವಾಗಿ ಹೆಣ್ಣು ಮಕ್ಕಳಲ್ಲಿ ಆಗುವ ಪ್ರಕ್ರಿಯೆ ನಾಚಿಕೆ ಪಡುವ ವಿಷಯವಲ್ಲ ಇದರ ಬಗ್ಗೆ ಮುಕ್ತವಾಗಿ ಮಾತನಾಡಬಹುದು ಎಂದು ಇಂದು ಅಭಿಪ್ರಾಯ ಪಟ್ಟರು.
ಹಾಗೂ ಪೌಷ್ಟಿಕ ಆಹಾರ ಸೇವನೆ, ಯೋಗ ಇತ್ಯಾದಿಗಳನ್ನು ಮಾಡುವುದರಿಂದ ತೀವ್ರ ಹೊಟ್ಟೆ ನೋವನ್ನು ತಡೆಗಟ್ಟಬಹುದು ಎಂದು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು.

ಕಾರ್ಯಕ್ರಮದಲ್ಲಿ ಡಾ. ಭಾಷಿಣಿ ಅವರಿಗೆ ಕಿರು ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.

ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳಾದ ಸೌಮ್ಯ ಸ್ವಾಗತಿಸಿದರು, ಚರಿಷ್ಮಾ ವಂದಿಸಿದರು. ಉಷಾ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿಯಲ್ಲಿ ಬೈಕ್ ಮತ್ತು ಕಾರು ಡಿಕ್ಕಿ : ಬೈಕ್ ಸವಾರನಿಗೆ ಗಾಯ

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ಕೃಷಿಕ ಪಿ ಶಾಂತರಾಮ ಹೃದಯಾಘಾತದಿಂದ ನಿಧನ

Suddi Udaya

ಬೆಳಾಲು ಹಾ.ಉ.ಸ. ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ನಿರ್ದೇಶಕರಿಗೆ ಗೆಲುವು

Suddi Udaya

ಕಳೆಂಜ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ತೆರವು ಪ್ರಕರಣ: ಕತ೯ವ್ಯಕ್ಕೆ ಅಡ್ಡಿ ಆರೋಪಿಸಿ ಶಾಸಕರ ಮೇಲೆ ಆರ್.ಎಫ್.ಓ ದೂರು : ಪ್ರಕರಣ ದಾಖಲು

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಪ್ರಸಿದ್ದ ಉದ್ಯಮಿ ಮೋಹನ್ ಕುಮಾರ್ ಅವರನ್ನು ಭೇಟಿಯಾದ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಮೋಹಿತ್

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ನೈತಿಕ ಪೊಲೀಸ್ ಗಿರಿ: ಸೂಕ್ತ ಕ್ರಮಕ್ಕೆ ಆಗ್ರಹಿಸಿ ಎಸ್‌ವೈಎಸ್ ಬೆಳ್ತಂಗಡಿ ಝೋನ್ ನಿಂದ ತಹಶೀಲ್ದಾರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya
error: Content is protected !!