23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿಗಳ ಸಭೆ:ಶಾಲಾ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಬಗ್ಗೆ ಸಮಗ್ರ ಚರ್ಚೆ :ಹಿರಿಯ ವಿದ್ಯಾರ್ಥಿ ಸಂಘದ ಸಮಿತಿ ರಚನೆ:ಅಧ್ಯಕ್ಷರಾಗಿ ವಾಸುದೇವ ಸೋಮಯಾಜಿ, ಕಾರ್ಯದರ್ಶಿಯಾಗಿ ಪೂರ್ಣಿಮಾ

ಬೆಳ್ತಂಗಡಿ : ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿಗಳ ಸಭೆಯು ಡಿ.13ರಂದು ಪ್ರೌಢಶಾಲಾ ವಿಭಾಗದ ಶಾಲೆಯ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿ ನಡೆಯಿತು.

ಶಾಲಾ ಮುಖ್ಯ ಶಿಕ್ಷಕಿ ಪೂರ್ಣಿಮಾ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಬಾಲ್ಯ ಎನ್ನುವುದು ಮರೆಯಲಾಗದ ಜೀವನ ಭಾಗ. ಅಂತಹ ಬಾಲ್ಯದ ಶೈಕಷಣಿಕ ಜೀವನಕ್ಕೆ ಹಿಂತಿರುಗಲು ಸಾಧ್ಯವಾಗದಿದ್ದರೂ ನೆನಪನ್ನು ಮರುಕಳಿಸಲು ಸಭೆಯಲ್ಲಿ ನೆರೆದಿದ್ದೇವೆ. ಇಲ್ಲಿರುವ ಉತ್ತಮ ಶಿಕ್ಷಕ ವೃಂದದಿAದ ಕಲಿಕೆಯ ಗುಣಮಟ್ಟ ಅಭಿವೃದ್ಧಿ ಹೊಂದಿದೆ. ಶಾಲೆಯ ಅಭಿವೃದ್ಧಿಗಾಗಿ ಹಳೆ ವಿದ್ಯಾರ್ಥಿಗಳ ಸಹಕಾರ ಬೇಕಿದೆ ಎಂದರು.

ಸಭೆಯಲ್ಲಿ ನೂತನ ಹಿರಿಯ ವಿದ್ಯಾರ್ಥಿ ಸಂಘದ ಸಮಿತಿಯನ್ನು ರಚನೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಜಗದೀಶ್ ರಾವ್ ಮುಗುಳಿ, ಅಧ್ಯಕ್ಷರಾಗಿ ವಾಸುದೇವ ಸೋಮಯಾಜಿ, ಉಪಾಧ್ಯಕ್ಷರಾಗಿ ಪ್ರಮೋದ್ ಆರ್ ನಾಯಕ್ ಮತ್ತು ಪೀತಾಂಬರ ಹೇರಾಜೆ, ಕಾರ್ಯದರ್ಶಿಯಾಗಿ ಪೂರ್ಣಿಮಾ, ಜತೆ ಕಾರ್ಯದರ್ಶಿಯಾಗಿ ಅಕ್ಬರ್, ಸುರೇಶ್ ರಾವ್, ವೆಂಕಪ್ಪ ಗೌಡ, ಸಂಘಟನಾ ಕಾರ್ಯದರ್ಶಿಯಾಗಿ ವಿಶ್ವನಾಥ್ ಶೆಟ್ಟಿ, ಜೇಮ್ಸ್ ಡಿಸೋಜಾ, ವಿನಯ್, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಉದಯ ಕುಮಾರ್, ಸುರಕ್ಷಾ, ಮಾಧ್ಯಮ ಕಾರ್ಯದರ್ಶಿಯಾಗಿ ಪ್ರಸಾದ್ ಮತ್ತು ನಸ್ರೀನ್ ಅವರನ್ನು ಆಯ್ಕೆ ಮಾಡಲಾಯಿತು.

ಸಭೆಯಲ್ಲಿ ಹಿರಿಯ ವಿದ್ಯಾರ್ಥಿಗಳು ತಮ್ಮ ಪರಿಚಯ ಮಾಡಿಕೊಂಡು ಶಾಲೆಯ ಅಭಿವೃದ್ಧಿಯ ಚಿಂತನೆಯ ಬಗ್ಗೆ, ಭೌತಿಕ ಮಟ್ಟ ಮತ್ತು ವಿದ್ಯಾ ಮಟ್ಟ ಹೆಚ್ಚಿಸಲು ಬೇಕಾದ ಅಗತ್ಯ ಕ್ರಮಗಳ ಬಗ್ಗೆ, ಸ್ಥಳೀಯ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮದ ಬಗ್ಗೆ ಚರ್ಚಿಸಲಾಯಿತು. ಬಾಲ್ಯದ ಶೈಕ್ಷಣಿಕ ಜೀವನವನ್ನು ಸವಿದ ಬಗ್ಗೆ, ಹಿಂದಿನ ಕಾಲದಲ್ಲಿ ವಿದ್ಯಾರ್ಥಿಗಳು ವಿದ್ಯೆ ಪಡೆಯಲು ಪಡುತ್ತಿದ್ದ ಹರಸಾಹಸದ ಬಗ್ಗೆ, ಕನಸನ್ನು ನನಸಾಗಿಸಲು ವಿದ್ಯಾರ್ಥಿಗಳು ಮಾಡಿದ ತ್ಯಾಗದ ಬಗ್ಗೆ ಹಿರಿಯ ವಿದ್ಯಾರ್ಥಿಗಳು ಅಭಿಪ್ರಾಯ ವ್ಯಕ್ತಪಡಿಸಿದರು. ಶಾಲಾ ಅಭಿವೃದ್ಧಿಗೆ ಪಣತೊಟ್ಟ ಮುಖ್ಯ ಶಿಕ್ಷಕರ ಹಾಗೂ ಶಿಕ್ಷಕ ವರ್ಗದವರ ಶ್ರಮವನ್ನು ಮೆಚ್ಚಿ ಅಭಿನಂದಿಸಲಾಯಿತು.

ಸಭೆಯಲ್ಲಿ ಶಾಲೆಯ ಹಿರಿಯ ವಿದ್ಯಾರ್ಥಿಗಳನ್ನು ಗುರುತಿಸಿ ಸಮಿತಿ ರಚಿಸುವ ಬಗ್ಗೆ ಚರ್ಚಿಸಲಾಯಿತು. ವಿದ್ಯಾರ್ಥಿಗಳ ಸಾಧನೆಗೆ ಸರಕಾರಿ ಶಾಲೆಯೂ ಹೇಗೆ ಅವಕಾಶ ನೀಡುತ್ತದೆ ಎಂಬುದರ ಬಗ್ಗೆಯೂ ಸಭೆಯಲ್ಲಿ ಅಭಿಪ್ರಾಯ ಹಂಚಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು, ಸಿಬ್ಬಂದಿ ವರ್ಗದವರು ಹಾಗೂ ಶಾಲೆಯ ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಶಾಲೆಯ ಗಣಿತ ವಿಭಾಗ ಶಿಕ್ಷಕ ಸುರೇಶ್ ಶೆಟ್ಟಿ ಸ್ವಾಗತಿಸಿದರು. ಆಂಗ್ಲ ಭಾಷಾ ಶಿಕ್ಷಕ ನಾರಾಯಣ ವಂದಿಸಿದರು.

Related posts

ಲಾಯಿಲ ತರಬೇತಿ ಕೇಂದ್ರದಲ್ಲಿ ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಭಾರತ್ ಬೀಡಿ ಕಂಪೆನಿ ಉಳಿಸಿ ಭಾರತ್ ಬೀಡಿ ಕಂಪೆನಿ ಎದುರು ಸಿಐಟಿಯು ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ರವರ 134 ನೇ ಜನ್ಮದಿನಾಚರಣೆ

Suddi Udaya

ಪಟ್ರಮೆ ಬಸ್ ನಿಲ್ದಾಣದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಂಚೆ ಕಛೇರಿ ಶ್ರೀ ವಿಷ್ಣು ಕಾಂಪ್ಲೆಕ್ಸ್‌ನ ಕಟ್ಟಡಕ್ಕೆ ಸ್ಥಳಾಂತರ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದಿಂದ ಆರೋಗ್ಯ ಇಲಾಖೆ ನೌಕರರಿಗೆ ಉಚಿತ ಸಮವಸ್ತ್ರ ವಿತರಣೆ

Suddi Udaya
error: Content is protected !!