24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಪರಿಸರದಲ್ಲಿ ಚಿರತೆ ಓಡಾಟ: ಗ್ರಾಮಸ್ಥರಲ್ಲಿ ಭಯದ ವಾತವರಣ

ಮಚ್ಚಿನ ಗ್ರಾಮದ ಅನಯನಕಾಡು, ಮುಡಿಪಿರೆ, ಕೈಲಾ ಕುರುಡಂಗೆ ಪರಿಸರದಲ್ಲಿ ಚಿರತೆ ತಿರುಗಾಡುತ್ತಿದ್ದು ಜನರು ಭಯಪಡುವಂತಾಗಿದೆ. ಸ್ಥಳೀಯರಾದ ಉದಯ ಇವರು ರಾತ್ರಿ 11ರ ಸಮಯ ಬೈಕಲ್ಲಿ ಸಂಚರಿಸುವ ವೇಳೆ ಅನಯನ ಕಾಡು ರಸ್ತೆಯಲ್ಲಿ ಚಿರತೆ ಎದುರು ಬಂದ ಘಟನೆ ಇತ್ತೀಚಿಗೆ ನಡೆದಿದೆ.

ಮುಡಿಪಿರೆ ಪರಿಸರದಲ್ಲಿ ದಿವಾಕರ ಹಾಗೂ ಇತರರಿಗೂ ಎದುರಾದ ಘಟನೆ ನಡೆದಿದೆ. ದೊಡ್ಡದಾದ ಚಿರತೆಯು ತಿರುಗಾಡುತ್ತಿದ್ದು ರಾತ್ರಿ ಹಾಗೂ ಮುಂಜಾನೆಯ ಮೇಲೆ ಜನರ ಎದುರು ಪ್ರತ್ಯಕ್ಷವಾಗುತ್ತಿದ್ದು ಜನರು ಸಂಚರಿಸಲು ಭಯಪಡುವಂತಾಗಿದೆ. ದಿನನಿತ್ಯ ರಸ್ತೆಯಲ್ಲಿ ಶಾಲಾ ಮಕ್ಕಳು ನಡೆದುಕೊಂಡು ಹೋಗುವ ಈ ರಸ್ತೆಯಲ್ಲಿ ಪೊದೆಗಳು ಮುತ್ತಿಕೊಂಡಿದ್ದು ಕಾಡು ಪ್ರಾಣಿಗಳು ಅವಿತಿದ್ದರು ಗೋಚರಿಸದಂತಾಗಿದೆ. ಈ ಚಿರತೆಯಿಂದ ದೊಡ್ಡ ಅನಾಹುತ ಆಗುವ ಮುನ್ನ ಗ್ರಾಮ ಪಂಚಾಯಿತಿ ಹಾಗೂ ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಒತ್ತಾಯವಾಗಿದೆ.
✍️ವರದಿ: ಹರ್ಷ ಬಳ್ಳಮಂಜ

Related posts

ತುಮಕೂರು ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ; 7 ದಿನದ ಬಳಿಕ ಮನೆ ತಲುಪಿದ ಮೂವರ ಮೃತದೇಹ

Suddi Udaya

ಕನ್ನಡ, ತುಳು ಸಾರಸ್ವತ ಲೋಕದ ಖ್ಯಾತ ಸಾಹಿತಿ, ಯಕ್ಷಗಾನ ಪ್ರಸಂಗಕರ್ತರಾಗಿ ಪ್ರಸಿದ್ಧರಾಗಿದ್ದ ಡಾ. ಅಮೃತ ಸೋಮೇಶ್ವರ ರವರ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಿಂದ ಬಳಂಜ-ಡೆಂಜೋಲಿ- ಗರ್ಡಾಡಿ ರಸ್ತೆ ಅಭಿವೃದ್ಧಿಗೆ ರೂ. 2 ಕೋಟಿ ಅನುದಾನ ಬಿಡುಗಡೆ: ಜನರ ಬಹುದಿನದ ಬೇಡಿಕೆ ಈಡೇರಿಸಿದ ಶಾಸಕ ಹರೀಶ್ ಪೂಂಜರವರಿಗೆ ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಅನಾರು ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಕ್ಯಾಲೆಂಡರ್ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಕರಾಯ: ಚರಂಡಿಗೆ ಬಿದ್ದ ಖಾಸಗಿ ಬಸ್

Suddi Udaya
error: Content is protected !!