25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಪರಿಸರದಲ್ಲಿ ಚಿರತೆ ಓಡಾಟ: ಗ್ರಾಮಸ್ಥರಲ್ಲಿ ಭಯದ ವಾತವರಣ

ಮಚ್ಚಿನ ಗ್ರಾಮದ ಅನಯನಕಾಡು, ಮುಡಿಪಿರೆ, ಕೈಲಾ ಕುರುಡಂಗೆ ಪರಿಸರದಲ್ಲಿ ಚಿರತೆ ತಿರುಗಾಡುತ್ತಿದ್ದು ಜನರು ಭಯಪಡುವಂತಾಗಿದೆ. ಸ್ಥಳೀಯರಾದ ಉದಯ ಇವರು ರಾತ್ರಿ 11ರ ಸಮಯ ಬೈಕಲ್ಲಿ ಸಂಚರಿಸುವ ವೇಳೆ ಅನಯನ ಕಾಡು ರಸ್ತೆಯಲ್ಲಿ ಚಿರತೆ ಎದುರು ಬಂದ ಘಟನೆ ಇತ್ತೀಚಿಗೆ ನಡೆದಿದೆ.

ಮುಡಿಪಿರೆ ಪರಿಸರದಲ್ಲಿ ದಿವಾಕರ ಹಾಗೂ ಇತರರಿಗೂ ಎದುರಾದ ಘಟನೆ ನಡೆದಿದೆ. ದೊಡ್ಡದಾದ ಚಿರತೆಯು ತಿರುಗಾಡುತ್ತಿದ್ದು ರಾತ್ರಿ ಹಾಗೂ ಮುಂಜಾನೆಯ ಮೇಲೆ ಜನರ ಎದುರು ಪ್ರತ್ಯಕ್ಷವಾಗುತ್ತಿದ್ದು ಜನರು ಸಂಚರಿಸಲು ಭಯಪಡುವಂತಾಗಿದೆ. ದಿನನಿತ್ಯ ರಸ್ತೆಯಲ್ಲಿ ಶಾಲಾ ಮಕ್ಕಳು ನಡೆದುಕೊಂಡು ಹೋಗುವ ಈ ರಸ್ತೆಯಲ್ಲಿ ಪೊದೆಗಳು ಮುತ್ತಿಕೊಂಡಿದ್ದು ಕಾಡು ಪ್ರಾಣಿಗಳು ಅವಿತಿದ್ದರು ಗೋಚರಿಸದಂತಾಗಿದೆ. ಈ ಚಿರತೆಯಿಂದ ದೊಡ್ಡ ಅನಾಹುತ ಆಗುವ ಮುನ್ನ ಗ್ರಾಮ ಪಂಚಾಯಿತಿ ಹಾಗೂ ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಒತ್ತಾಯವಾಗಿದೆ.
✍️ವರದಿ: ಹರ್ಷ ಬಳ್ಳಮಂಜ

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಛತ್ರ ಗಣಪತಿ ದೇವಸ್ಥಾನದ ಮ್ಯಾನೇಜರ್ ಬಾಲಕೃಷ್ಣ ರಾವ್ ನಿಧನ

Suddi Udaya

ನೈಋತ್ಯ ರೈಲ್ವೆಯ ಡಿಆರ್‌ಯುಸಿಸಿ ಸದಸ್ಯರಾಗಿ ಬಂಗಾಡಿಯ ರಾಜೇಶ್ ಪುದುಶೇರಿ ನೇಮಕ

Suddi Udaya

ಪಿನಾಕಲ್ ಅಂತರ್ ಕಾಲೇಜು ಸ್ಪರ್ಧೆಗಳಲ್ಲಿ ಎಸ್ ಡಿ ಎಂ ಪದವಿಪೂರ್ವ ಕಾಲೇಜಿಗೆ ಸಮಗ್ರ ದ್ವಿತೀಯ ಬಹುಮಾನ

Suddi Udaya

ತುಮಕೂರುನಲ್ಲಿ ನಡೆದ ಘಟನೆಯನ್ನು ನಿಷ್ಪಕ್ಷಪಾತವಾದ ತನಿಖೆ ನಡೆಸಲು ಸಿ.ಓ.ಡಿ.ಗೆ ವಹಿಸಲು ಕೆ.ಪಿ.ಸಿ.ಸಿ. ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಆಗ್ರಹ

Suddi Udaya

ಶಿರ್ಲಾಲು ಶಾಲಾ ಹಳೆವಿದ್ಯಾರ್ಥಿ ಸಂಘದಿಂದ ಆರ್ಥಿಕ ನೆರವು

Suddi Udaya

ಬೆಳ್ತಂಗಡಿ: ನವೋದಯ ವಿದ್ಯಾಲಯ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶ ಪರೀಕ್ಷೆಯ ತರಬೇತಿ ಪ್ರಾರಂಭ

Suddi Udaya
error: Content is protected !!