July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೈರೋಳ್ತಡ್ಕ ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಪ್ರಯುಕ್ತ ಪ್ರತಿಭಾ ಪುರಸ್ಕಾರ ಮತ್ತು ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

ಬಂದಾರು : ಬಂದಾರು ಗ್ರಾಮ ಮೈರೋಳ್ತಡ್ಕ ದ.ಕ.ಜಿಲ್ಲಾ ಪಂಚಾಯತ್ ಉನ್ನತಿಕರಿಸಿದ ಪ್ರಾಥಮಿಕ ಶಾಲಾ ಅಮೃತ ಮಹೋತ್ಸವ ಪ್ರಯುಕ್ತ ಪ್ರತಿಭಾ ಪುರಸ್ಕಾರ ಮತ್ತು ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ ಡಿ.13 ರಂದು ಶಾಲಾ ವಠಾರದಲ್ಲಿ ನೆರವೇರಿತು.

ಉದ್ಯಮಿಗಳಾದ ಕಿರಣ್ ಚಂದ್ರ ಪುಷ್ಪಗಿರಿ ಇವರು ದೀಪ ಪ್ರಜ್ವಲನೆಗೈದು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ, ಶಾಲಾ ಕೊಠಡಿ ನೀಲ ನಕಾಶೆ ಮತ್ತು ವಿಜ್ಞಾಪನಾ ಪತ್ರ ಬಿಡುಗಡೆಗೊಳಿಸಿ, ಶುಭ ಹಾರೈಸಿದರು. ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಕೃಷ್ಣಯ್ಯ ಆಚಾರ್ಯ ನೂಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಪ್ರಶಾಂತ್ ಗೌಡ ನಿರುoಬುಡ, ಅಂಡೆಕೇರಿ ಜುಮ್ಮಾ ಮಸೀದಿ ಧರ್ಮ ಗುರುಗಳಾದ ಶಫೀ ಅಹ್ಮನಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗುರುಪ್ರಸಾದ್, ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಪೊಲೀಸ್ ಪಿ.ಎಸ್ ವೆಂಕಪ್ಪ, ಹಿರಿಯ ವಿದ್ಯಾರ್ಥಿ ಅಂಚೆ ಇಲಾಖೆಯ ಸಹಾಯಕ ಅಧಿಕ್ಷಕರು ಮೋಹನ್ ಶೆಟ್ಟಿ ಬಾಂಗೇರು, ಬಂದಾರು ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಪರಮೇಶ್ವರಿ ಕೆ ಗೌಡ, ಶ್ರೀಮತಿ ಸುಚಿತ್ರಾ ಮುರ್ತಾಜೆ, ಕುಪ್ಪೆಟ್ಟಿ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಶ್ರೀಮತಿ ವಾರಿಜ ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಚoದ್ರಾವತಿ ಪ್ರಸ್ತಾವನೆಗೈದರು, ಶಾಲೆಗೆ ಬೆಂಚು, ಡೆಸ್ಕ್ ಕೊಡುಗೆ ನೀಡಿದ ದಾನಿಗಳಾದ ಶ್ರೀಮತಿ ಲೀಲಾವತಿ ಗಿರಿಯಪ್ಪ ಪೂಜಾರಿ ಸೊರಗೆದಡಿ, ಶ್ರೀಮತಿ ಮತ್ತು ಬಾಬು ಗೌಡ ಮಡ್ಯಲಕಂಡ, ನಡುಮಜಲು ಕುಟುಂಬಸ್ಥರು, ಶ್ರೀಮತಿ ವಾರಿಜ ಮತ್ತು ಧರ್ಣಪ್ಪ ಪೂಜಾರಿ ನೂಜಿ ಇವರುಗಳನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳು ಪ್ರಾರ್ಥನೆಗೈದು, ಶಿಕ್ಷಕರಾದ ದಿನೇಶ್ ಸ್ವಾಗತಿಸಿ, ಸಹಶಿಕ್ಷಕಿ ರಾಜಶ್ರೀ ನಿರೂಪಿಸಿ, ಶಿಕ್ಷಕರಾದ ಶ್ರೀಧರ್ ಧನ್ಯವಾದವಿತ್ತರು, ಅಂಗನವಾಡಿ ಹಾಗೂ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು, ಬಹುಮಾನ ವಿಜೇತರ ಪಟ್ಟಿಯನ್ನು ಪ್ರಭು ನಾಯ್ಕ ಎಲ್, ಸುಶೀಲಾ, ಅರ್ಚನಾ, ವೀಕ್ಷಿತಾ ಇವರುಗಳು ವಾಚಿಸಿದರು, ತೀರ್ಥ ಕುಮಾರಿ ಸಾoಸ್ಕೃತಿಕ ಸಂಯೋಜನೆ ಮಾಡಿದರು. ಪೋಷಕರು, ಗ್ರಾಮಸ್ಥರು, ಹಿರಿಯ ವಿದ್ಯಾರ್ಥಿಗಳಿಗೆ ಹಗ್ಗಜಗ್ಗಾಟ ಸ್ಪರ್ಧೆಯು ನೇರವೇರಿತು. ಹಿರಿಯ ವಿದ್ಯಾರ್ಥಿಗಳು, ಪೋಷಕರು, ವಿದ್ಯಾಭಿಮಾನಿಗಳು, ಶಿಕ್ಷಕ ವೃಂದ ಸಿಬ್ಬಂದಿ ವರ್ಗ ಸಹಕರಿಸಿದರು.

Related posts

ಉತ್ತರಾಖಂಡ ಸುರಖಂಡ ಶಕ್ತಿ ಪೀಠಕ್ಕೆ ಶ್ರೀ ರಾಮಕ್ಷೇತ್ರ ಮಹಾ ಸಂಸ್ಥಾನದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಭೇಟಿ

Suddi Udaya

ಕೊಯ್ಯೂರು ಗ್ರಾ.ಪಂ. ನ ಗ್ರಾಮ ಸಭೆ

Suddi Udaya

ಪೆರಾಲ್ದರಕಟ್ಟೆ ಬದ್ರಿಯಾ ಜುಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಸುಜ್ಞಾನ ನಿಧಿ ಸ್ಕಾಲರ್ ಶಿಪ್ ಮಂಜೂರಾತಿ ಪತ್ರ ವಿತರಣೆ

Suddi Udaya

ಕೊಲ್ಲಿ ಬ್ರಹ್ಮಕಲಶಕ್ಕೆ ಲಾಯಿಲ ಗ್ರಾಮಸ್ಥರಿಂದ ಹೊರ ಕಾಣಿಕೆ ಸಮರ್ಪಣೆ

Suddi Udaya
error: Content is protected !!