July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಕೊಕ್ಕಡ ಶಾಖೆಯು ಸ್ಥಳಾಂತರಗೊಂಡು ಉದ್ಘಾಟನೆ

ಕೊಕ್ಕಡ: ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ, ಉಜಿರೆ ಇದರ ಕೊಕ್ಕಡ ಶಾಖೆಯು ಶ್ರೀದೇವಿ ಕಾಂಪ್ಲೆಕ್ಸ್ ಗೆ ಸ್ಥಳಾಂತರಗೊಂಡು ಕಾರ್ಯನಿರ್ವಹಣೆ ಪ್ರಾರಂಭಿಸಿದೆ.

ಹೊಸ ಕಟ್ಟಡದಲ್ಲಿ ಶಾಖೆ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಬ್ಯಾಂಕ್ ಇದರ ನಿರ್ದೇಶಕರು ಮತ್ತು ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ ದೀಪ ಬೆಳಗಿಸಿ ನೆರವೇರಿಸಿ ಮಾತನಾಡಿ ರಬ್ಬರ್ ಬೆಳೆಗಾರರ ಹಿತಾಸಕ್ತಿಗಾಗಿ ಕಾರ್ಯನಿರ್ವಹಿಸುತ್ತಿರುವಂತಹ ಸಂಸ್ಥೆಯ ಶಾಖೆಯು ಉತ್ತಮವಾಗಿ ಕಾರ್ಯನಿರ್ವಹಿಸಿ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಕಟ್ಟಡದ ಮಾಲಿಕರಾದ ವಸಂತ ರಾವ್ ಇವರನ್ನು ಗೌರವಿಸಲಾಯಿತು. ರಬ್ಬರ್ ಸೊಸೈಟಿ ಅಧ್ಯಕ್ಷ ಶ್ರೀಧರ್ ಜಿ. ಭಿಡೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಉಪಾಧ್ಯಕ್ಷ ಅನಂತ ಭಟ್ ಎಂ ಇವರು ಅತಿಥಿಗಳನ್ನು ಸ್ವಾಗತಿಸಿದರು ಹಾಗೂ ಸಂಘದ ನಿರ್ದೇಶಕರುಗಳಾದ ಗ್ರೇಶಿಯನ್ ವೇಗಸ್, ಕೆ. ಬಾಲಕೃಷ್ಣ ಗೌಡ, ಹೆಚ್ ಪದ್ಮಗೌಡ, ಕೆ. ಜೆ. ಆಗಸ್ಟಿನ್, ಶ್ರೀ ರಾಮ ನಾಯ್ಕ್ , ಭೈರಪ್ಪ, ಹರೀಶ್ ರಾವ್, ಭರತ್ ಕುಮಾರ್ ಹೆಚ್. ಹಾಗೂ ಶಾಜಿ ಪಿ. ಎ. ಉಪಸ್ಥಿತರಿದ್ದರು.

ಶಾಖೆಯ ಪ್ರಬಂಧಕ ಸಂದೇಶ್ ಸಹಕರಿಸಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿಯವರು ಧನ್ಯವಾದ ಸಮರ್ಪಿಸಿದರು.

Related posts

ಸುಲ್ಕೇರಿ ಲಯನ್ಸ್ ಕ್ಲಬ್‌ನ ನೂತನ ಪದಗ್ರಹಣ ಸಮಾರಂಭ

Suddi Udaya

ಬೆಳೆ ವಿಮೆ ಸೌಲಭ್ಯ ಇದುವರೆಗೂ ದೊರೆಯದಿರುವ ಕುರಿತು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಮಲ್ಲಿಕಾರ್ಜುನರಿಗೆ ಪತ್ರ

Suddi Udaya

ನಡ: ಸಿಡಿಲು ಬಡಿದು 2 ವರ್ಷದ ಮಗು ಅಸ್ವಸ್ತ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲಯನ್ಸ್ ಕ್ಲಬ್ ಜಿಲ್ಲಾ ರಾಜ್ಯಪಾಲೆ ಭಾರತಿ ಬಿ.ಎಂ. ಭೇಟಿ

Suddi Udaya

ಸುಲ್ಕೇರಿಮೊಗ್ರು : ಗುರು ಪೂಜೆ ಮತ್ತು ದೀಕ್ಷಾ ಗ್ರಂಥಿದಾರಣೆ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪ್ರೌಢಶಾಲಾ ವಿಭಾಗದ ಶಿಕ್ಷಕರಿಗೆ ಸ್ವಾಗತ-ವಿದಾಯ

Suddi Udaya
error: Content is protected !!