25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಕೊಕ್ಕಡ ಶಾಖೆಯು ಸ್ಥಳಾಂತರಗೊಂಡು ಉದ್ಘಾಟನೆ

ಕೊಕ್ಕಡ: ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ, ಉಜಿರೆ ಇದರ ಕೊಕ್ಕಡ ಶಾಖೆಯು ಶ್ರೀದೇವಿ ಕಾಂಪ್ಲೆಕ್ಸ್ ಗೆ ಸ್ಥಳಾಂತರಗೊಂಡು ಕಾರ್ಯನಿರ್ವಹಣೆ ಪ್ರಾರಂಭಿಸಿದೆ.

ಹೊಸ ಕಟ್ಟಡದಲ್ಲಿ ಶಾಖೆ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಬ್ಯಾಂಕ್ ಇದರ ನಿರ್ದೇಶಕರು ಮತ್ತು ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ ದೀಪ ಬೆಳಗಿಸಿ ನೆರವೇರಿಸಿ ಮಾತನಾಡಿ ರಬ್ಬರ್ ಬೆಳೆಗಾರರ ಹಿತಾಸಕ್ತಿಗಾಗಿ ಕಾರ್ಯನಿರ್ವಹಿಸುತ್ತಿರುವಂತಹ ಸಂಸ್ಥೆಯ ಶಾಖೆಯು ಉತ್ತಮವಾಗಿ ಕಾರ್ಯನಿರ್ವಹಿಸಿ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಕಟ್ಟಡದ ಮಾಲಿಕರಾದ ವಸಂತ ರಾವ್ ಇವರನ್ನು ಗೌರವಿಸಲಾಯಿತು. ರಬ್ಬರ್ ಸೊಸೈಟಿ ಅಧ್ಯಕ್ಷ ಶ್ರೀಧರ್ ಜಿ. ಭಿಡೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಉಪಾಧ್ಯಕ್ಷ ಅನಂತ ಭಟ್ ಎಂ ಇವರು ಅತಿಥಿಗಳನ್ನು ಸ್ವಾಗತಿಸಿದರು ಹಾಗೂ ಸಂಘದ ನಿರ್ದೇಶಕರುಗಳಾದ ಗ್ರೇಶಿಯನ್ ವೇಗಸ್, ಕೆ. ಬಾಲಕೃಷ್ಣ ಗೌಡ, ಹೆಚ್ ಪದ್ಮಗೌಡ, ಕೆ. ಜೆ. ಆಗಸ್ಟಿನ್, ಶ್ರೀ ರಾಮ ನಾಯ್ಕ್ , ಭೈರಪ್ಪ, ಹರೀಶ್ ರಾವ್, ಭರತ್ ಕುಮಾರ್ ಹೆಚ್. ಹಾಗೂ ಶಾಜಿ ಪಿ. ಎ. ಉಪಸ್ಥಿತರಿದ್ದರು.

ಶಾಖೆಯ ಪ್ರಬಂಧಕ ಸಂದೇಶ್ ಸಹಕರಿಸಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿಯವರು ಧನ್ಯವಾದ ಸಮರ್ಪಿಸಿದರು.

Related posts

ಬಂಗ್ಲೆಗುಡ್ಡೆ ಪ್ರದೇಶಕ್ಕೆ ಮತ್ತೆ ಎಸ್.ಐ‌.ಟಿ ಎಂಟ್ರಿ

Suddi Udaya

ಧರ್ಮಸ್ಥಳ : ನಡುಗುಡ್ಡೆ ನಿವಾಸಿ ಶೀನಪ್ಪ ಗೌಡ ನಿಧನ

Suddi Udaya

ಎ.6 : ಇಳಂತಿಲ ವಾಣಿಶ್ರೀ ಗೆಳೆಯರ ಸಂಘದ 30ನೇ ವರ್ಷದ ವಾರ್ಷಿಕೋತ್ಸವ “ಇಳೋತ್ಸವ 2024” : ಪೂರ್ವಭಾವಿ ಸಭೆ, ಹಾಗೂ ನೂತನ ಸಮಿತಿ ರಚನೆ

Suddi Udaya

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ವಿನಿಯೋಗಿಸಿರುವ ಅನುದಾನವೆಷ್ಟು,? ವಿಧಾನ ಪರಿಷತ್ ನಲ್ಲಿ ಪ್ರತಾಪ್ ಸಿಂಹ ನಾಯಕ್ ರವರ ಪ್ರಶ್ನೆಗೆ ಸಚಿವರ ಉತ್ತರ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಡಾ| ವೀಣಾ ಬನ್ನಂಜೆ ರವರಿಂದ ನಾಲ್ಕನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆ

Suddi Udaya

ಶಶಿಧರ ಶೆಟ್ಟಿ ಬರೋಡ ಇವರ ಮಾತೃಶ್ರೀ ಶ್ರೀಮತಿ ಕಾಶಿ ಶೆಟ್ಟಿಯವರ ಸ್ಮರಣಾರ್ಥ “ಕಾಶಿ ಸದನ” ವಸತಿ ಯೋಜನೆಯ ಸಹಾಯ ಹಸ್ತ: ತಾಲೂಕು ಬಂಟರ ಸಂಘದ ನೇತೃತ್ವದಲ್ಲಿ ತಾಲೂಕಿನ 9 ಬಂಟರ ವಲಯಗಳ ತಲಾ ಒಂದೊಂದು ಅಶಕ್ತ ಕುಟುಂಬಗಳಿಗೆ ನೀಡಲು ನಿರ್ಣಯ

Suddi Udaya
error: Content is protected !!