25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪ್ರೌಢ ವಿಭಾಗದ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ


ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪ್ರೌಢ ವಿಭಾಗದ 10ನೇ ತರಗತಿಯ ವಿದ್ಯಾರ್ಥಿಗಳಿಗೆ “ವೃತ್ತಿ ಶಿಕ್ಷಣ; ಮಾರ್ಗದರ್ಶನ” ಎಂಬ ವಿಷಯದ ಮೇಲೆ ಮಾಹಿತಿ ಕಾರ್ಯಗಾರವನ್ನು ಡಿಸೆಂಬರ್ 13ರಂದು ಆಯೋಜಿಸಲಾಯಿತು. ಭವಿಷ್ಯದ ವೃತ್ತಿ ಆಯ್ಕೆ, ಉನ್ನತ ಶಿಕ್ಷಣದ ಅವಕಾಶಗಳು, ಕೌಶಲ್ಯ ಅಭಿವೃದ್ಧಿ ಮತ್ತು ವೈಯಕ್ತಿಕ ಆಸಕ್ತಿ ಸಾಮರ್ಥ್ಯವನ್ನು ಗುರುತಿಸುವ ಬಗ್ಗೆ ಅರಿವು ನೀಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು.

ಕಾರ್ಯಕ್ರಮದ ಆರಂಭದಲ್ಲಿ ಪ್ರೌಢ ವಿಭಾಗದ ಸಹಶಿಕ್ಷಕಿ ಶ್ರೀಮತಿ ದಿವ್ಯಶ್ರೀ ವಿದ್ಯಾರ್ಥಿಗಳಿಗೆ ಸಂಪನ್ಮೂಲ ವ್ಯಕ್ತಿ ನಾದ ಮಣಿನಾಲ್ಕೂರು ಅವರ ಪರಿಚಯವನ್ನು ತಿಳಿಸಿದರು.

10 ವರ್ಷಗಳಿಂದ “ಕತ್ತಲ ಹಾಡು” ಮೂಲಕ ರಾಜ್ಯಾದ್ಯಂತ ಪ್ರಸಿದ್ಧರಾಗಿರುವ ಇವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಇಂದಿನ ಯುಗದಲ್ಲಿ ವೃತ್ತಿ ಅವಕಾಶಗಳ ವೈವಿಧ್ಯತೆ, ಕೌಶಲ್ಯಾಧಾರಿತ ಶಿಕ್ಷಣದ ಅಗತ್ಯತೆ ಮತ್ತು ವಿದ್ಯಾರ್ಥಿಗಳು ತಮ್ಮ ಆಸಕ್ತಿ ಸಾಮರ್ಥ್ಯಕ್ಕೆ ತಕ್ಕಂತೆ ಕ್ಷೇತ್ರವನ್ನು ಆಯ್ಕೆ ಮಾಡುವ ಮಹತ್ವವನ್ನು ಚಟುವಟಿಕೆಯ ಮೂಲಕ ವಿವರಿಸಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೋ, ಮುಖ್ಯ ಶಿಕ್ಷಕಿ ಶ್ರೀಮತಿ ವಿಜಯ ಕೆ ಸಂಯೋಜಕರಾದ ಯಶವಂತ ಜಿ ನಾಯಕ್ ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ಪ್ರೌಢ ವಿಭಾಗದ ಸಹ ಶಿಕ್ಷಕಿ ಶ್ರೀಮತಿ ಸಂಗೀತ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ, ಆಟೋಟ ಸ್ಪರ್ದೆಗಳು, ಪುಟಾಣಿಗಳಿಗೆ ಕೃಷ್ಣವೇಷ ಸ್ಪರ್ಧೆ,

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಪ್ರಕರ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಭೇಟಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದ.ಕ. ಜಿಲ್ಲೆಯ ಸಿ.ಬಿ.ಎಸ್.ಇ ಅಂತರ ಶಾಲೆಗಳ ಐಕ್ಸ್ (AICS) ಸಾಂಸ್ಕೃತಿಕ ಸ್ಪರ್ಧೆ

Suddi Udaya

ಉಜಿರೆಯಲ್ಲಿ ತಾಲೂಕಿನ ಮೊದಲ ಹೈಜೀನಿಕ್ ಚಿಕನ್ ಮಳಿಗೆ ಉದಯ ಚಿಕನ್ ಶುಭಾರಂಭ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟು ಗೈಡ್ ಶಿಕ್ಷಕರಿಗೆ ಚೇತರಿಕಾ ಶಿಬಿರ

Suddi Udaya
error: Content is protected !!