ಗುರುವಾಯನಕೆರೆ : ಗರ್ಡಾಡಿ ವಲಯದ ಕುಕ್ಕೇಡಿ ಕಾರ್ಯಕ್ಷೇತ್ರದಲ್ಲಿ ಟೈಲರಿಂಗ್ ತರಬೇತಿ ಕುಕ್ಕೇಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅನಿತಾ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು.

ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ದಿನೇಶ್ ರವರು ಪ್ರಾಸ್ತವಿಕವಾಗಿ ಮಾತನಾಡಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶ್ರೀ ಶೇಖರ್ ಕುಕ್ಕೇಡಿ. ತಾಲೂಕು ಗ್ರಾಮ ಪಂಚಾಯತ್ ಮಾಜಿ ಸದಸ್ಯರು ಹಾಗೂ ಹಿರಿಯರು ಆದ ಶ್ರೀ ಅಶೋಕ್ ಪಾಣೂರ್, ವಲಯದ ಒಕ್ಕೂಟ ಅಧ್ಯಕ್ಷರಾದ ಶ್ರೀ ವರದ ಕುಲಾಲ್, ಶಿಕ್ಷಕಿ ಶ್ರೀಮತಿ ಅಶ್ವಿನಿ . ತಾಲೂಕ್ ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಸುಗುಣ ಶೆಟ್ಟಿ ವಲಯ ಮೇಲ್ವಿಚಾರಕರು ಹೇಮಾವತಿ ಯವರು ಉಪಸ್ಥಿತರಿದ್ದರು.











