23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿ

ಪತ್ರಕರ್ತನಿಗೆ ಜೀವ ಬೆದರಿಕೆ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಖಂಡನೆ,-ಕ್ರಮಕ್ಕೆ ಆಗ್ರಹ

ಬೆಳ್ತಂಗಡಿ: ವರದಿ ಮಾಡಿದ್ದನ್ನೆ ನೆಪವಾಗಿರಿಸಿಕೊಂಡು ಪತ್ರಕರ್ತರೊಬ್ಬರಿಗೆ ಜೀವ ಬೆದರಿಕೆ ಹಾಕಿದ ಘಟನೆ ಕಳಿಯ ಗ್ರಾಮದ ನಾಳ ಎಂಬಲ್ಲಿ ಡಿ 03 ನಡೆದಿದೆ.

ಮಡಂತ್ಯಾರು ವಲಯದ ಉದಯವಾಣಿ ವರದಿಗಾರ ಕೆ.ಎನ್.ಗೌಡ ಎಂಬವರು ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಡಿಸೆಂಬರ್ 3 ರಂದು ವ್ಯವಸ್ಥಾಪನಾ ಸಮಿತಿ ಹಾಗೂ ಗ್ರಾಮಸ್ಥರ ಸಭೆ ನಡೆದಿದ್ದು, ಈ ವೇಳೆ ವ್ಯವಸ್ಥಾಪನಾ ಸಮಿತಿಯ ಕಾರ್ಯ ವೈಖರಿ ಬಗ್ಗೆ ಕೆಲವರು ಅಸಾಮಾಧಾನ ಹೊರಹಾಕಿದ್ದರು.‌ಈ ಬಗ್ಗೆ ವರದಿ ಮಾಡಿದ ಹಿನ್ನೆಲೆಯಲ್ಲಿ ಹರೀಶ್ ಎಂಬವರು ಪೋನ್ ಮೂಲಕ ಕಾಲರ್ ಪಟ್ಟಿ ಹಿಡಿದು ಎಳೆಯುತ್ತೆನೆ ಎಂದಿದ್ದಲ್ಲದೇ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಬೆಳ್ತಂಗಡಿ ಪತ್ರಕರ್ತರ ಸಂಘ ಖಂಡನೆ,ಕ್ರಮಕ್ಕೆ ಆಗ್ರಹ:

ಪತ್ರಕರ್ತನಿಗೆ ಜೀವ ಬೆದರಿಕೆ ಒಡ್ಡಿರುವ ಬಗ್ಗೆ ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಖಂಡನೆ ವ್ಯಕ್ತಪಡಿಸಿದೆಯಲ್ಲದೆ, ಈಗಾಗಲೇ ಬೆಳ್ತಂಗಡಿ ಠಾಣೆಗೆ ದೂರು ನೀಡಲಾಗಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು, ಎಂದು ಆಗ್ರಹಿಸಿದೆ.

Related posts

ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ, ಓ.ಟಿ.ಪಿ. ಪಡೆದು ಕೊಕ್ಕಡದ ಮಹಿಳೆಗೆ ರೂ.1.50ಲಕ್ಷ. ವಂಚನೆ

Suddi Udaya

ಬೆಳ್ತಂಗಡಿ : ಎಸ್.ಐ.ಟಿ ಕಚೇರಿಗೆ ಆಗಮಿಸಿ ದೂರು ನೀಡಿದ ಹೋರಾಟಗಾರರ ತಂಡ

Suddi Udaya

ವೇಣೂರು: ಕೋಮ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿದ್ದ ಶಿಲ್ಪ ಸಾವು: ಮನೆಯವರ ಪ್ರತಿಭಟನೆ

Suddi Udaya

ಎಂಟು ವರ್ಷಗಳಿಂದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ತೆಕ್ಕಾರು: ಗಾಂಜಾ ನಶೆಯಲ್ಲಿ ಅನುಚಿತ ವರ್ತನೆ: ಇಬ್ಬರು ಯುವಕರು ಪೊಲೀಸರ ವಶಕ್ಕೆ

Suddi Udaya

ಕಾರಿನಲ್ಲಿ ಬಂದು ಭಾಸ್ಕರ ನಾಯ್ಕ ಹಾಗೂ ಅವರ ಪತ್ನಿಗೆ ಹಲ್ಲೆ ನಡೆಸಿದ ಆರೋಪ: ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಆರು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya
error: Content is protected !!