22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಗಾವಿ ಅಧಿವೇಶನದ ನಡುವೆ ಕೆಸಿಎ ಕ್ರೀಡಾಂಗಣದಲ್ಲಿ ಕ್ರಿಕೆಟ್ ಆಡಿದ ಶಾಸಕರುಗಳು: ಗಮನ ಸೆಳೆದ ಶಾಸಕ ಹರೀಶ್ ಪೂಂಜರ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶನ

ಬೆಳಗಾವಿ: ವಿಧಾನಸಭೆಯ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ರಾಜ್ಯದ ಸಮಸ್ಯೆಗಳು, ಹೊಸ ಮಸೂದೆಗಳು ಸೇರಿದಂತೆ ವಿವಿಧ ಚರ್ಚೆಗಳು, ವಾಕ್ಸಮರಗಳು ಅಧಿವೇಶನದಲ್ಲಿ ಕಂಡು ಬರುತ್ತಿದೆ. ಈ ಮಧ್ಯೆ, ಡಿ.12ರಂದು ಅಧಿವೇಶನ ಆರಂಭಕ್ಕೂ ಮುನ್ನ ಮುಂಜಾನೆಯ ಸಮಯದಲ್ಲಿ ಕೆಸಿಎ ಕ್ರೀಡಾಂಗಣದಲ್ಲಿ ಮಾಧ್ಯಮ ಮಿತ್ರರ ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷರು ಸೇರಿದಂತೆ ಬಿಜೆಪಿ ಶಾಸಕರು, ಪಕ್ಷದ ಮುಖಂಡರು ಕ್ರಿಕೆಟ್ ಆಡಿ ಗಮನ ಸೆಳೆದಿದ್ದಾರೆ.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶನವು ಜನರ ಗಮನ ಸೆಳೆದಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅನುಭವ ಹಂಚಿಕೊಂಡ ಶಾಸಕರು “ಬೆಳಗಾವಿಯ ಅಧಿವೇಶನದ ನಡುವೆ ಬೆಳಗ್ಗೆ ಮಾಧ್ಯಮ ಸ್ನೇಹಿತರ ಜೊತೆ ಬೆಳಗಾವಿಯ ಕೆಸಿಎ ಕ್ರೀಡಾಂಗಣದಲ್ಲಿ ಬಿಜೆಪಿ ರಾಜ್ಯಧ್ಯಕ್ಷರಾದ ಬಿವೈ ವಿಜಯೇಂದ್ರ, ಶಾಸಕ ಮಿತ್ರರು, ಪಕ್ಷದ ಮುಖಂಡರು ಮತ್ತಿತರರೊಂದಿಗೆ ಕ್ರಿಕೆಟ್ ಆಡಿದರು, ಹಲವಾರು ಒತ್ತಡದ ಮಧ್ಯೆ ಕ್ರೀಡೆಯಲ್ಲಿ ತೊಡಗಿಸಿಕೊಂಡಾಗ ದೇಹಕ್ಕೆ ಉಲ್ಲಾಸ ಮತ್ತು ಮನಸ್ಸಿಗೆ ಸಂತೋಷವನ್ನು ನೀಡಿ ನಮ್ಮ ದೈಹಿಕ ಸಧೃಡತೆಯನ್ನು ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ.” ಎಂದಿದ್ದಾರೆ.

Related posts

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಮಂಡಳಿಗೆ ಸದಸ್ಯರ ನೇಮಕ : ದಾಖಲೆಗಳನ್ನು ಹಾಜರು ಪಡಿಸುವಂತೆ ಹೈಕೋರ್ಟ್ ಸೂಚನೆ

Suddi Udaya

ಉಜಿರೆ ಗ್ರಾ.ಪ. ವತಿಯಿಂದ ಸರಕಾರದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya

ಕೊಕ್ಕಡ ಗ್ರಾ.ಪಂ.ವ್ಯಾಪ್ತಿಯಲ್ಲಿ ಬೀದಿ ದೀಪಗಳ ಉದ್ಘಾಟನೆ

Suddi Udaya

ಮಡಂತ್ಯಾರು ಗಣೇಶೋತ್ಸವ ಸಮಿತಿಯ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮುಂಡಾಜೆ: ವಿರಾಟ್ ಹಿಂದೂ ಸೇವಾ ಸಂಘದ ವತಿಯಿಂದ ಅರ್ಹ ಫಲಾನುಭವಿಗಳಿಗೆ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya

ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಕುಟುಂಬಸ್ಥರಿಗೆ ಮೆಸ್ಕಾಂ ಇಲಾಖೆಯ ಪರಿಹಾರದ ಚೆಕ್ ನ್ನು ಶಾಸಕ ಹರೀಶ್ ಪೂಂಜರಿಂದ ಹಸ್ತಾಂತರ

Suddi Udaya
error: Content is protected !!