September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಪರಿಸರದಲ್ಲಿ ಚಿರತೆ ಓಡಾಟ: ಗ್ರಾಮಸ್ಥರಲ್ಲಿ ಭಯದ ವಾತವರಣ

ಮಚ್ಚಿನ ಗ್ರಾಮದ ಅನಯನಕಾಡು, ಮುಡಿಪಿರೆ, ಕೈಲಾ ಕುರುಡಂಗೆ ಪರಿಸರದಲ್ಲಿ ಚಿರತೆ ತಿರುಗಾಡುತ್ತಿದ್ದು ಜನರು ಭಯಪಡುವಂತಾಗಿದೆ. ಸ್ಥಳೀಯರಾದ ಉದಯ ಇವರು ರಾತ್ರಿ 11ರ ಸಮಯ ಬೈಕಲ್ಲಿ ಸಂಚರಿಸುವ ವೇಳೆ ಅನಯನ ಕಾಡು ರಸ್ತೆಯಲ್ಲಿ ಚಿರತೆ ಎದುರು ಬಂದ ಘಟನೆ ಇತ್ತೀಚಿಗೆ ನಡೆದಿದೆ.

ಮುಡಿಪಿರೆ ಪರಿಸರದಲ್ಲಿ ದಿವಾಕರ ಹಾಗೂ ಇತರರಿಗೂ ಎದುರಾದ ಘಟನೆ ನಡೆದಿದೆ. ದೊಡ್ಡದಾದ ಚಿರತೆಯು ತಿರುಗಾಡುತ್ತಿದ್ದು ರಾತ್ರಿ ಹಾಗೂ ಮುಂಜಾನೆಯ ಮೇಲೆ ಜನರ ಎದುರು ಪ್ರತ್ಯಕ್ಷವಾಗುತ್ತಿದ್ದು ಜನರು ಸಂಚರಿಸಲು ಭಯಪಡುವಂತಾಗಿದೆ. ದಿನನಿತ್ಯ ರಸ್ತೆಯಲ್ಲಿ ಶಾಲಾ ಮಕ್ಕಳು ನಡೆದುಕೊಂಡು ಹೋಗುವ ಈ ರಸ್ತೆಯಲ್ಲಿ ಪೊದೆಗಳು ಮುತ್ತಿಕೊಂಡಿದ್ದು ಕಾಡು ಪ್ರಾಣಿಗಳು ಅವಿತಿದ್ದರು ಗೋಚರಿಸದಂತಾಗಿದೆ. ಈ ಚಿರತೆಯಿಂದ ದೊಡ್ಡ ಅನಾಹುತ ಆಗುವ ಮುನ್ನ ಗ್ರಾಮ ಪಂಚಾಯಿತಿ ಹಾಗೂ ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಒತ್ತಾಯವಾಗಿದೆ.
✍️ವರದಿ: ಹರ್ಷ ಬಳ್ಳಮಂಜ

Related posts

ದ.ಕ. , ಉಡುಪಿ ಜಿಲ್ಲೆಯ ವಕೀಲರ ವೇದಿಕೆ ಬೆಂಗಳೂರು ಇದರ ಕಾರ್ಯದರ್ಶಿಯಾಗಿ ಬೆಳ್ತಂಗಡಿಯ ಶೈಲಾ ರಮೇಶ್ ಆಯ್ಕೆ

Suddi Udaya

ಮಚ್ಚಿನ ಜಲಾಯನ ಸಮಿತಿಯಿಂದ ಅರ್ಹ ಫಲಾನುಭವಿಗಳಿಗೆ ಕೋಳಿಮರಿ ವಿತರಣೆ

Suddi Udaya

ಜ.6: ಮಿತ್ತಬಾಗಿಲು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

Suddi Udaya

ಶ್ರೀ ರಾಮ್ ಫೈನಾನ್ಸ್ ಲಿಮಿಟೆಡ್ ಬೆಳ್ತಂಗಡಿ ಇದರ ನೂತನ ಕಛೇರಿ ಉದ್ಘಾಟನಾ ಸಮಾರಂಭ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಶಾರದಾ ಮಾತೆಯ ವಿಗ್ರಹ ಪಿಠಾರ್ಪಣೆ

Suddi Udaya
error: Content is protected !!