ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ: ಅಕ್ರಮ ಗೋಸಾಗಾಟ ಪ್ರಕರಣ ದಾಖಲು:ಜಾನುವಾರು ನೀಡಿದ ಮಾಲೀಕನ ಮನೆ ಮತ್ತು ಕೊಟ್ಟಿಗೆ ಒಪ್ತಿ

ಬೆಳ್ತಂಗಡಿ: ಬಂಟ್ವಾಳ ಉಳಿ ಗ್ರಾಮದ ಮಣಿನಾಲ್ಕೂರು- ತೆಕ್ಕಾರು ರಸ್ತೆಯಲ್ಲಿ ಗೂಡ್ಸ್ ಅಟೋದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಜಾನುವಾರನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ಡಿ.13 ರಂದು ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕ ರಾಜೇಶ್ ಮತ್ತು ಸಿಬ್ಬಂದಿಗಳು KA-70-8686 ನೇ ನೊಂದಣಿಯ ಗೂಡ್ಸ್ ಅಟೋವನ್ನು ತಡೆದು ಪರಿಶೀಲಿಸಿದಾಗ ಅದರಲ್ಲಿ ಒಂದು ಜಾನುವಾರನ್ನು ಹಗ್ಗದಿಂದ ಹಿಂಸಾತ್ಮಕವಾಗಿ ಕಟ್ಟಿ ಹಾಕಿರುವುದು ಪತ್ತೆ ಹಚ್ಚಿದ್ದಾರೆ.

ಜಾನುವಾರು ಸಾಗಿಸುತ್ತಿದ್ದ ವಾಹನ ಚಾಲಕ ಬಂಟ್ವಾಳ ಮಣಿನಾಲ್ಕೂರು ಗ್ರಾಮದ ನಿವಾಸಿ ಶ್ರೀಧರ ಪೂಜಾರಿ(56) ಎಂಬುದಾಗಿ ತಿಳಿದುಬಂದಿದ್ದು. ಈ ಜಾನುವಾರನ್ನು ಬಂಟ್ವಾಳ ಸರಪ್ಪಾಡಿ ಎಂಬಲ್ಲಿ ಭೋಜ ಮೂಲ್ಯ ಎಂಬವರ ಮನೆಯಿಂದ ಯಾವುದೇ ದಾಖಲಾತಿ ಪರವಾನಿಗೆ ಇಲ್ಲದೇ ಗೋಹತ್ಯೆ ಮಾಡಿ ಮಾಂಸ ಮಾಡುವ ಉದ್ದೇಶದಿಂದ ಜಾನುವಾರನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡಿರುವುದು ಕಂಡುಬಂದಿರುತ್ತದೆ.

ಪತ್ತೆ ಹಚ್ಚಿದ ಒಂದು ಜಾನುವಾರು, ಅಟೋ ಹಾಗು ಒಂದು ಮೊಬೈಲ್ ಫೋನ್ ನನ್ನು ವಶಕ್ಕೆ ಪಡೆದು ಆರೋಪಿಗಳ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಕಲಂ: 5, 7, 12 ಕರ್ನಾಟಕ ಗೋಹತ್ಯೆ ನಿಷೇಧ ಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ 2020 ಮತ್ತು ಕಲಂ: 11(1)(ಡಿ) ಪ್ರಾಣಿ ಹಿಂಸೆ ತಡೆ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ.ಮುಂದುವರಿದಂತೆ ತನಿಖೆ ಭಾಗವಾಗಿ ಜಾನುವಾರು ನೀಡಿದ ಆರೋಪಿ ಬಂಟ್ವಾಳ ಗ್ರಾಮದ ಸರಪ್ಪಾಡಿ ನಿವಾಸಿ ಭೋಜ ಮೂಲ್ಯರವರ ಮನೆ ಹಾಗೂ ಜಾನುವಾರು ಕೊಟ್ಟಿಗೆ ಸೇರಿದಂತೆ ಆವರಣವನ್ನು ಪುಂಜಾಲಕಟ್ಟೆ ಪೊಲೀಸರು ಡಿ.14 ರಂದು ಕಾನೂನು ಪ್ರಕ್ರಿಯೆಯಂತೆ ಜಪ್ತಿ ಮಾಡಿದ್ದಾರೆ.

Related posts

ವಲಯ ಮಟ್ಟದ ಖೋ ಖೋ ಪಂದ್ಯಾಟ: ಶಿರ್ಲಾಲು ಸ.ಉ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ “ವಾಕ್-ಇನ್ ವಿದ್ವತ್” – ಎ ಸ್ಟೆಪ್ ಇಂಟು ಸಕ್ಸಸ್” ಕಾರ್ಯಕ್ರಮದ ಲೋಗೋ ಅನಾವರಣ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಮಕ್ಕಳ ದಿನಾಚರಣೆ

Suddi Udaya

ಮಚ್ಚಿನ ಅಂಗನವಾಡಿ ಕೇಂದ್ರಕ್ಕೆ ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಮಕ್ಕಳ ಬರೆಯುವ ಟೇಬಲ್ ಕೊಡುಗೆ

Suddi Udaya

ಸವಣಾಲು: ಕೋಡಿಮುಗೇರು ಶ್ರೀ ಬ್ರಹ್ಮಮುಗೇರ ಗುಳಿಗ ಮತ್ತು ಸ್ವಾಮಿ ಕೊರಗಜ್ಜ ದೈವಗಳ ಪುನರ್ ಪ್ರತಿಷ್ಠಾಪನ : ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಹದಗೆಟ್ಟ ಬಳ್ಳಮಂಜ ರಸ್ತೆ: ದುರಸ್ತಿಗೊಳಿಸುವಂತೆ ಮಡಂತ್ಯಾರು ಆಟೋ ಚಾಲಕ ಮಾಲಕರ ಸಂಘದಿಂದ ಒತ್ತಾಯ

Suddi Udaya
error: Content is protected !!